Homeಮುಖಪುಟಆಂಧ್ರದಲ್ಲಿ ಪರಿಸ್ಥಿತಿ ಗಂಭೀರ: ಮಹಾಮಳೆಗೆ 17 ಮಂದಿ ಮರಣ, ನೂರು ಮಂದಿ ನಾಪತ್ತೆ

ಆಂಧ್ರದಲ್ಲಿ ಪರಿಸ್ಥಿತಿ ಗಂಭೀರ: ಮಹಾಮಳೆಗೆ 17 ಮಂದಿ ಮರಣ, ನೂರು ಮಂದಿ ನಾಪತ್ತೆ

- Advertisement -
- Advertisement -

ಮಹಾಮಳೆಯಿಂದಾಗಿ ಆಂಧ್ರ ಪ್ರದೇಶ ರಾಜ್ಯ ತತ್ತರಿಸಿದೆ. 17 ಮಂದಿ ಸಾವನ್ನಪ್ಪಿದ್ದು, 100 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನೂರಾರು ಭಕ್ತಾದಿಗಳು ಪ್ರವಾಹದಲ್ಲಿ ಸಿಲುಕಿರುವುದನ್ನು ಧಾರ್ಮಿಕ ಕೇಂದ್ರವಾದ ತಿರುಪತಿಯ ದೃಶ್ಯಾವಳಿಗಳು ತೋರುತ್ತಿವೆ.

ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ 3 ಅಂತಸ್ತಿನ ಹಳೆಯ ಕಟ್ಟಡ ಕುಸಿದು ಮೂವರು ಮಕ್ಕಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಅವಶೇಷಗಳೊಳಗೆ ಇನ್ನೂ 4 ಮಂದಿ ಸಿಲುಕಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಸತ್ಯಬಾಬು ತಿಳಿಸಿದ್ದಾರೆ.

ಘಾಟಿ ರಸ್ತೆ ಹಾಗೂ ದೇವಸ್ತಾನವಿರುವ ತಿರುಮಲ ಬೆಟ್ಟದ ಪಾದಾಚಾರಿ ಮಾರ್ಗಗಳನ್ನು ಮುಚ್ಚಲಾಗಿದೆ. ತಿರುಪತಿ ಹೊರವಲಯದ ಸ್ವರ್ಣಮುಖಿ ನದಿ ಭೋರ್ಗರೆಯುತ್ತಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಮೂರು ರಾಜ್ಯ ಸಾರಿಗೆ ಬಸ್‌ಗಳು ಜಖಂಗೊಂಡಿದ್ದು, 12 ಮಂದಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಪ್ರವಾಹದಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ರೈಲು, ರಸ್ತೆ ಮತ್ತು ವಿಮಾನ ಸಂಚಾರಕ್ಕೆ ತೊಂದರೆಯಾಗಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ.

ನವೆಂಬರ್ 25ರವರೆಗೆ ಕಡಪ ವಿಮಾನ ನಿಲ್ದಾಣ ಬಂದ್ ಆಗಿದ್ದು, ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಪಂಬಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿರುವ ಕಾರಣ ಪಂಬಾ ಮತ್ತು ಶಬರಿಮಲೆ ಯಾತ್ರೆಯನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿರಿ: ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...