Homeಮುಖಪುಟಯುಪಿ: ಪಾಕ್ ಧ್ವಜ ಹಾರಿಸಿದ್ದಾರೆಂದು ನಾಲ್ವರು ಮುಸ್ಲಿಮರ ಮೇಲೆ ದೇಶದ್ರೋಹ ಪ್ರಕರಣ; ಅದು ಪಾಕ್‌ ಧ್ವಜ...

ಯುಪಿ: ಪಾಕ್ ಧ್ವಜ ಹಾರಿಸಿದ್ದಾರೆಂದು ನಾಲ್ವರು ಮುಸ್ಲಿಮರ ಮೇಲೆ ದೇಶದ್ರೋಹ ಪ್ರಕರಣ; ಅದು ಪಾಕ್‌ ಧ್ವಜ ಅಲ್ಲ ಎಂದ ಪೊಲೀಸರು

- Advertisement -
- Advertisement -

ತಮ್ಮ ಮನೆಯ ಮೇಲೆ ಪಾಕಿಸ್ತಾನದ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ನಾಲ್ವರು ಮುಸ್ಲಿಮರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಇದೀಗ ಪೊಲೀಸರು ನಡೆಸಿದ ಪ್ರಕರಣದ ಪ್ರಾಥಮಿಕ ತನಿಖೆಯು, “ಮುಸ್ಲಿಮರ ಮನೆಯ ಮೇಲೆ ಹಾರಿಸಿರುವುದು ಧಾರ್ಮಿಕ ಧ್ವಜಗಳು” ಎಂದು ಕಂಡುಹಿಡಿದು ಅಂತಿಮ ವರದಿಯನ್ನು ಸಲ್ಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಧ್ವಜಗಳ ಮೇಲೆ ಯಾವುದೇ ಆಕ್ಷೇಪಾರ್ಹ ಪದಗಳನ್ನು ಬರೆದಿರಲಿಲ್ಲ ಎಂದು ಪ್ರತಿಪಾದಿಸಿ ಪೊಲೀಸರು ಯಾರನ್ನೂ ಬಂಧಿಸಿರಲಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಎರಡು ಮನೆಯ ಮೇಲೆ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ ಎಂದು ಪ್ರತಿಪಾದಿಸಿ ಚಿತ್ರವೂಂದು ವೈರಲ್‌ ಆದ ನಂತರ, ಕೆಲವು ಜನರ ಗುಂಪು ಮನೆಯ ಹೊರಗೆ ಪ್ರತಿಭಟನೆ ನಡೆಸಿತ್ತು. ಇದರ ನಂತರ ನಾಲ್ವರ ವಿರುದ್ದ ದೇಶದ್ರೋಹದ ಪ್ರಕರಣದ ದಾಖಲಾಗಿತ್ತು.

ನಾಲ್ವರು ಉದ್ಯಮಿಗಳಾದ ತಾಲೀಮ್, ಪಪ್ಪು, ಆಶಿಕ್ ಮತ್ತು ಅವರ ಸಹೋದರ ಆಸಿಫ್ ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ನಾಲ್ವರು ಎರಡು ಕುಟುಂಬಗಳಿಗೆ ಸೇರಿದವರಾಗಿದ್ದು ಗೋರಖ್‌ಪುರದ ಚೌರಿ ಚೌರಾ ಪ್ರದೇಶದ ನಿವಾಸಿಗಳಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರತಿಭಟನಾಕಾರರು ಎರಡು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದರು ಮತ್ತು ಕಾರಳಿಗೆ ಹಾನಿಗೊಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ ಎರಡು ಕುಟುಂಬಗಳ ಸದಸ್ಯರು ತಮ್ಮ ಮನೆಗೆ ಬೀಗ ಹಾಕಿದ್ದರು. ಪೊಲೀಸರ ವಿಚಾರಣೆ ವೇಳೆ ಕುಟುಂಬವು ಆರೋಪಗಳನ್ನು ನಿರಾಕರಿಸಿ, ನಾಲ್ಕು ಧ್ವಜಗಳನ್ನು ಹಸ್ತಾಂತರಿಸಿತ್ತು.

ಪ್ರಸ್ತುತ ಧ್ವಜಗಳನ್ನು ತಮ್ಮ ಕುಟುಂಬದ ಮಹಿಳಾ ಸದಸ್ಯರು ಹೊಲಿದಿದ್ದಾರೆ ಎಂದು ಅವರು ಹೇಳಿದ್ದಾರೆ. ಒಂದು ಧ್ವಜದ ಮೇಲೆ ಉರ್ದು ಪಠ್ಯವಿತ್ತು. ‘ಬರವಾಫತ್’ ಹಬ್ಬದ ಸಂದರ್ಭದಲ್ಲಿ ತಮ್ಮ ಮನೆಗಳ ಮೇಲ್ಛಾವಣಿಯಲ್ಲಿ ಧ್ವಜಗಳನ್ನು ಹಾರಿಸಿದ್ದೇವೆ ಎಂದು ಕುಟುಂಬಗಳು ಪೊಲೀಸರಿಗೆ ತಿಳಿಸಿದ್ದಾರೆ.

ಹಬ್ಬ ಮುಗಿದ ನಂತರ ಅವರು ಧ್ವಜಗಳನ್ನು ತೆಗೆದುಹಾಕಿರಲಿಲ್ಲ ಎಂದು ಅವರು ಹೇಳಿದ್ದಾರೆ. ಬ್ರಾಹ್ಮಣ ಜನ ಕಲ್ಯಾಣ ಸಮಿತಿಯ ಅಧ್ಯಕ್ಷ ಕಲ್ಯಾಣ್ ಪಾಂಡೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರಯ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಆಂಧ್ರದಲ್ಲಿ ಪರಿಸ್ಥಿತಿ ಗಂಭೀರ: ಮಹಾಮಳೆಗೆ 17 ಮಂದಿ ಮರಣ, ನೂರು ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...