Homeಮುಖಪುಟಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

- Advertisement -
- Advertisement -

ಕೊಡಗಿನ ಶನಿವಾರಸಂತೆಯಲ್ಲಿ ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಪ್ರಸಾರ ಮಾಡಿರುವುದು ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರಿಸುವ ಸಂಘೀ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಕಿಡಿಕಾರಿದ್ದಾರೆ.

ಶನಿವಾರಸಂತೆ ಪೊಲೀಸ್‌ ಠಾಣೆಯ ಮುಂದೆ ಬುರ್ಖಾಧಾರಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ‘ಅಂಬೇಡ್ಕರ್ ಝಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಆದರೆ ದುಷ್ಕರ್ಮಿಗಳು ಈ ವೀಡಿಯೋವನ್ನು ತಿರುಚಿ, ‘‘ಮುಸ್ಲಿಂ ಮಹಿಳೆಯರು ಪೊಲೀಸ್‌ ಠಾಣೆಯ ಮುಂದೆ ‘ಪಾಕಿಸ್ತಾನ್ ಝಿಂದಾಬಾದ್’ ಕೂಗಿದ್ದಾರೆ” ಎಂದು ವೈರಲ್ ಮಾಡಿದ್ದರು. ಇದೀಗ ಈ ವಿಡಿಯೊ ತಿರುಚಿದ್ದಾರೆ ಎನ್ನಲಾಗಿರುವ ಸ್ಥಳೀಯ ಬಿಜೆಪಿ ನಾಯಕ ಗಿರೀಶ್‌ ಸೇರಿದಂತೆ ಕನ್ನಡ ಪ್ರಭ ಪತ್ರಕರ್ತ ಹರೀಶ್‌ ಹಾಗೂ ಮತ್ತೊಬ್ಬ ಸ್ಥಳೀಯ ರಾಜಕೀಯ ನಾಯಕನ ರಘು ಎಂಬವರ ವಿರುದ್ದ ಶನಿವಾರಸಂತೆ ಠಾಣಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನಲೆ

ಈ ಹಿಂದೆ ಸಂಘಪರಿವಾರದಿಂದ ದಾಳಿಗೊಳಗಾದ ಮುಸ್ಲಿಮ್ ಯುವಕನ ಕುಟುಂಬವು ದೂರು ನೀಡಿದರೂ, ಪೊಲೀಸರು ಅದನ್ನು ದಾಖಲಿಸಿಲ್ಲ. ದೂರು ನೀಡಲು ತೆರಳಿದ ಮುಸ್ಲಿಮ್ ಮಹಿಳೆಯರನ್ನು ಸತಾಯಿಸಿದ್ದು ಮಾತ್ರವಲ್ಲ, ಪೊಲೀಸರು ದುಷ್ಕರ್ಮಿಗಳ ಪರವಾಗಿ ಮೃದು ಧೋರಣೆ ತಾಳಿದ್ದಾರೆ. ಪೊಲೀಸರ ಈ ತಾರತಮ್ಯ ನೀತಿಯನ್ನು ಖಂಡಿಸಿ ಮುಸ್ಲಿಮ್ ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಂಬೇಡ್ಕರ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆದರೆ ಜಿಲ್ಲೆಯಲ್ಲಿ ಗಲಭೆ ಹರಡುವ ದುರುದ್ದೇಶದಿಂದ ಓರ್ವ ಪತ್ರಕರ್ತ ಸಹಿತ ಸಂಘಪರಿವಾರದ ಕಾರ್ಯಕರ್ತರು ಘೋಷಣೆಯನ್ನು ತಿರುಚಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದ್ದರು.

ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರು ಈ ಕಿಡಿಗೇಡಿ ಕೃತ್ಯ ನಡೆಸಿರುವುದು ಇದು ಮೊದಲೇನಲ್ಲ. ಉಜಿರೆಯಲ್ಲಿ ಎಸ್.ಡಿ.ಪಿ.ಐ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಬಿಜೆಪಿ ಕಾರ್ಯಕರ್ತರು ವಿಕೃತಿ ಮೆರೆದಿದ್ದರು. ಇದಕ್ಕೂ ಮೊದಲು ಸಿಂದಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿ ಅದನ್ನು ಮುಸ್ಲಿಮರ ತಲೆಗೆ ಕಟ್ಟಲಾಗಿತ್ತು. ಇಂತಹ ದುಷ್ಕೃತ್ಯಗಳ ಮೂಲಕ ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರೀಕರಿಸಲು ವ್ಯವಸ್ಥಿತ ಪಿತೂರಿಗಳನ್ನು ನಡೆಸಲಾಗುತ್ತಿದೆ ಎಂದು ಎ.ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, ಪೊಲೀಸರ ಪೂರ್ವಾಗ್ರಹಪೀಡಿತ ತನಿಖೆ ಮೂಲಕ ಹಲವು ಅಮಾಯಕ ಮುಸ್ಲಿಮ್ ಯುವಕರನ್ನು ವಿನಾಕಾರಣ ಬಂಧಿಸಿ ಜೈಲಿಗಟ್ಟಲಾಗಿತ್ತು. ಇದೀಗ ಮುಸ್ಲಿಮ್ ಸಂಘಟನೆಗಳ ಒತ್ತಡದ ಕಾರಣ ಪೊಲೀಸರು ನಿಷ್ಪಕ್ಷಪಾತ ಹಾಗೂ ಕೂಲಂಕಷ ತನಿಖೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಪೊಲೀಸರು ಈ ರೀತಿಯ ಸೂಕ್ಷ್ಮ ಘಟನೆಗಳನ್ನು ಗಂಭೀರವಾಗಿ ಪರಿಶೀಲಿಸಿ ನೈಜ ಅಪರಾಧಿಗಳನ್ನು ಬಂಧಿಸಿ ಇಂತಹ ಘಟನೆಗಳು ಮರುಕಳಿಸದಂತೆ ಗಮನಹರಿಸಬೇಕು. ಶಾಂತಿ ಕದಡಿ ಗಲಭೆ ಹರಡುವ ದುಷ್ಕರ್ಮಿಗಳ ವಿರುದ್ಧ ಸರಕಾರವೂ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು. ಹಾಗೆಯೇ ಸಂತ್ರಸ್ತ ಕುಟುಂಬ ನೀಡಿದ ದೂರು ದಾಖಲಿಸದೇ ಕರ್ತವ್ಯಲೋಪ ಎಸಗಿದ ಪೊಲೀಸರನ್ನು ಕೂಡಲೇ ಅಮಾನತುಪಡಿಸಬೇಕೆಂದು ಎ.ಕೆ.ಅಶ್ರಫ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...