Homeಮುಖಪುಟಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

- Advertisement -
- Advertisement -

ಕೊಡಗಿನ ಶನಿವಾರಸಂತೆಯಲ್ಲಿ ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಪ್ರಸಾರ ಮಾಡಿರುವುದು ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರಿಸುವ ಸಂಘೀ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಕಿಡಿಕಾರಿದ್ದಾರೆ.

ಶನಿವಾರಸಂತೆ ಪೊಲೀಸ್‌ ಠಾಣೆಯ ಮುಂದೆ ಬುರ್ಖಾಧಾರಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ‘ಅಂಬೇಡ್ಕರ್ ಝಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಆದರೆ ದುಷ್ಕರ್ಮಿಗಳು ಈ ವೀಡಿಯೋವನ್ನು ತಿರುಚಿ, ‘‘ಮುಸ್ಲಿಂ ಮಹಿಳೆಯರು ಪೊಲೀಸ್‌ ಠಾಣೆಯ ಮುಂದೆ ‘ಪಾಕಿಸ್ತಾನ್ ಝಿಂದಾಬಾದ್’ ಕೂಗಿದ್ದಾರೆ” ಎಂದು ವೈರಲ್ ಮಾಡಿದ್ದರು. ಇದೀಗ ಈ ವಿಡಿಯೊ ತಿರುಚಿದ್ದಾರೆ ಎನ್ನಲಾಗಿರುವ ಸ್ಥಳೀಯ ಬಿಜೆಪಿ ನಾಯಕ ಗಿರೀಶ್‌ ಸೇರಿದಂತೆ ಕನ್ನಡ ಪ್ರಭ ಪತ್ರಕರ್ತ ಹರೀಶ್‌ ಹಾಗೂ ಮತ್ತೊಬ್ಬ ಸ್ಥಳೀಯ ರಾಜಕೀಯ ನಾಯಕನ ರಘು ಎಂಬವರ ವಿರುದ್ದ ಶನಿವಾರಸಂತೆ ಠಾಣಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನಲೆ

ಈ ಹಿಂದೆ ಸಂಘಪರಿವಾರದಿಂದ ದಾಳಿಗೊಳಗಾದ ಮುಸ್ಲಿಮ್ ಯುವಕನ ಕುಟುಂಬವು ದೂರು ನೀಡಿದರೂ, ಪೊಲೀಸರು ಅದನ್ನು ದಾಖಲಿಸಿಲ್ಲ. ದೂರು ನೀಡಲು ತೆರಳಿದ ಮುಸ್ಲಿಮ್ ಮಹಿಳೆಯರನ್ನು ಸತಾಯಿಸಿದ್ದು ಮಾತ್ರವಲ್ಲ, ಪೊಲೀಸರು ದುಷ್ಕರ್ಮಿಗಳ ಪರವಾಗಿ ಮೃದು ಧೋರಣೆ ತಾಳಿದ್ದಾರೆ. ಪೊಲೀಸರ ಈ ತಾರತಮ್ಯ ನೀತಿಯನ್ನು ಖಂಡಿಸಿ ಮುಸ್ಲಿಮ್ ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಂಬೇಡ್ಕರ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆದರೆ ಜಿಲ್ಲೆಯಲ್ಲಿ ಗಲಭೆ ಹರಡುವ ದುರುದ್ದೇಶದಿಂದ ಓರ್ವ ಪತ್ರಕರ್ತ ಸಹಿತ ಸಂಘಪರಿವಾರದ ಕಾರ್ಯಕರ್ತರು ಘೋಷಣೆಯನ್ನು ತಿರುಚಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದ್ದರು.

ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರು ಈ ಕಿಡಿಗೇಡಿ ಕೃತ್ಯ ನಡೆಸಿರುವುದು ಇದು ಮೊದಲೇನಲ್ಲ. ಉಜಿರೆಯಲ್ಲಿ ಎಸ್.ಡಿ.ಪಿ.ಐ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಬಿಜೆಪಿ ಕಾರ್ಯಕರ್ತರು ವಿಕೃತಿ ಮೆರೆದಿದ್ದರು. ಇದಕ್ಕೂ ಮೊದಲು ಸಿಂದಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿ ಅದನ್ನು ಮುಸ್ಲಿಮರ ತಲೆಗೆ ಕಟ್ಟಲಾಗಿತ್ತು. ಇಂತಹ ದುಷ್ಕೃತ್ಯಗಳ ಮೂಲಕ ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರೀಕರಿಸಲು ವ್ಯವಸ್ಥಿತ ಪಿತೂರಿಗಳನ್ನು ನಡೆಸಲಾಗುತ್ತಿದೆ ಎಂದು ಎ.ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, ಪೊಲೀಸರ ಪೂರ್ವಾಗ್ರಹಪೀಡಿತ ತನಿಖೆ ಮೂಲಕ ಹಲವು ಅಮಾಯಕ ಮುಸ್ಲಿಮ್ ಯುವಕರನ್ನು ವಿನಾಕಾರಣ ಬಂಧಿಸಿ ಜೈಲಿಗಟ್ಟಲಾಗಿತ್ತು. ಇದೀಗ ಮುಸ್ಲಿಮ್ ಸಂಘಟನೆಗಳ ಒತ್ತಡದ ಕಾರಣ ಪೊಲೀಸರು ನಿಷ್ಪಕ್ಷಪಾತ ಹಾಗೂ ಕೂಲಂಕಷ ತನಿಖೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಪೊಲೀಸರು ಈ ರೀತಿಯ ಸೂಕ್ಷ್ಮ ಘಟನೆಗಳನ್ನು ಗಂಭೀರವಾಗಿ ಪರಿಶೀಲಿಸಿ ನೈಜ ಅಪರಾಧಿಗಳನ್ನು ಬಂಧಿಸಿ ಇಂತಹ ಘಟನೆಗಳು ಮರುಕಳಿಸದಂತೆ ಗಮನಹರಿಸಬೇಕು. ಶಾಂತಿ ಕದಡಿ ಗಲಭೆ ಹರಡುವ ದುಷ್ಕರ್ಮಿಗಳ ವಿರುದ್ಧ ಸರಕಾರವೂ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು. ಹಾಗೆಯೇ ಸಂತ್ರಸ್ತ ಕುಟುಂಬ ನೀಡಿದ ದೂರು ದಾಖಲಿಸದೇ ಕರ್ತವ್ಯಲೋಪ ಎಸಗಿದ ಪೊಲೀಸರನ್ನು ಕೂಡಲೇ ಅಮಾನತುಪಡಿಸಬೇಕೆಂದು ಎ.ಕೆ.ಅಶ್ರಫ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...