Homeಕರ್ನಾಟಕಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

ಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

- Advertisement -
- Advertisement -

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಯವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ ಎಂದು ಒತ್ತಾಯಿಸಿರುವ ಅವರು, ಜನ ಬರ್ಬಾದ್ ಯಾತ್ರೆ ಹ್ಯಾಷ್‌ಟ್ಯಾಗ್‌ನಲ್ಲಿ ಸರಣಿ ಟ್ವೀಟ್‌ ಮಾಡಿದ್ದಾರೆ.

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ, ರಾಗಿ, ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ. ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನುತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದು ಒತ್ತಾಯಿಸಿದ್ದಾರೆ.

ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ಬಿಜೆಪಿ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿ ಯಿಂದ ಮಾಡುತ್ತಿರುವ ಈ ಯಾತ್ರೆ ಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಭರ್ಬದ್ ಆಗಬಹುದು ಎನ್ನುವ ಭಯ ಸಿದ್ದರಾಮುಲ್ಲಾ ಖಾನ್ ಗೆ .

  2. ಈ ಬಿಜೆಪಿ ಯವರಿಗೆ ಯಾತ್ರೆ ಜಾತ್ರೆ ಯಲ್ಲದೆ ಬೇರೆ ಏನಾದರೂ ಗೊತ್ತಾ,ಶವದಲ್ಲೂ ರಾಜಕೀಯ ಮಾಡುವ ಟೀಂ ಅವರದ್ದು

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...