Homeಕರ್ನಾಟಕಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

ಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

- Advertisement -
- Advertisement -

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಯವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ ಎಂದು ಒತ್ತಾಯಿಸಿರುವ ಅವರು, ಜನ ಬರ್ಬಾದ್ ಯಾತ್ರೆ ಹ್ಯಾಷ್‌ಟ್ಯಾಗ್‌ನಲ್ಲಿ ಸರಣಿ ಟ್ವೀಟ್‌ ಮಾಡಿದ್ದಾರೆ.

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ, ರಾಗಿ, ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ. ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನುತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದು ಒತ್ತಾಯಿಸಿದ್ದಾರೆ.

ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ಬಿಜೆಪಿ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿ ಯಿಂದ ಮಾಡುತ್ತಿರುವ ಈ ಯಾತ್ರೆ ಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಭರ್ಬದ್ ಆಗಬಹುದು ಎನ್ನುವ ಭಯ ಸಿದ್ದರಾಮುಲ್ಲಾ ಖಾನ್ ಗೆ .

  2. ಈ ಬಿಜೆಪಿ ಯವರಿಗೆ ಯಾತ್ರೆ ಜಾತ್ರೆ ಯಲ್ಲದೆ ಬೇರೆ ಏನಾದರೂ ಗೊತ್ತಾ,ಶವದಲ್ಲೂ ರಾಜಕೀಯ ಮಾಡುವ ಟೀಂ ಅವರದ್ದು

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...