Homeಮುಖಪುಟಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

ಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

- Advertisement -
- Advertisement -


ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆ ಆರ್ಭಟಕ್ಕೆ ರೈತ-ತೋಟಿಗರ ಬದುಕು ಹೈರಾಣಾಗಿ ಹೋಗಿದೆ. ಜೀವ ಒತ್ತೆಯಿಟ್ಟು ವರ್ಷವಿಡೀ ಬೆವರಿಳಿಸಿ ಬೆಳೆದ ಫಸಲನ್ನು ಮಳೆ ನೀರು ಆಪೋಷನ ಪಡೆದಿದೆ! ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಅನ್ನದಾತ ಕಂಗಾಲಾಗಿ ಕೂತಿದ್ದಾನೆ. ಜಿಲ್ಲೆಯಲ್ಲಿ ಸುಮಾರು 1866 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆಯೆಂದು ಅಂದಾಜಿಸಲಾಗಿದ್ದು, ಶೀಘ್ರ ಪರಿಹಾರಕ್ಕಾಗಿ ಅಳಲಿನ ದ್ವನಿ ಕೇಳಿ ಬರಲಾರಂಭಿಸಿದೆ.

ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಕಬ್ಬು, ಭತ್ತ, ಹತ್ತಿ, ಗೊವಿನ ಜೋಳ, ಅಡಿಕೆ ಬೆಳೆ ಮಳೆ ಹೊಡೆತ ತಾಳಲಾಗದೆ ನೆಲಕಚ್ಚಿದೆ. ಭತ್ತದ ಪೈರಂತೂ ಮಣ್ಣು ಪಾಲಾಗಿದ್ದು, ಅರ್ಧದಷ್ಟು ಉಳಿಸಿಕೊಳ್ಳಲಾಗದೆ ರೈತರು ಹೈರಾಣಾಗಿದ್ದಾರೆ. ಜಿಲ್ಲೆಯಲ್ಲಿ 1840 ಹೆಕ್ಟೇರ್ ಭತ್ತ, 21.4 ಹೆಕ್ಟೇರ್ ಹತ್ತಿ, 4 ಹೆಕ್ಟೇರ್ ಕಬ್ಬು ಬೆಳೆ ಮಳೆಗೆ ಬಲಿಯಾಗಿದೆ.


ಈ ಹಂಗಾಮು ರೈತ ಸಮುದಾಯದ ಭವಿಷ್ಯದ ಬದುಕನ್ನು ಅಯೋಮಯವಾಗಿಸಿದ್ದು, ಮುಂಡಗೋಡಿನಂತ ಪ್ರದೇಶದ ರೈತರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆ ನಿಲ್ಲುವ ಅಂದಾಜಿನಲ್ಲಿ ಗೋವಿನ ಜೋಳದ ತೆನೆ ಕೊಯ್ದು ಒಣಗಿಸಲು ಅಣಿಯಾಗುತ್ತಿದ್ದಂತೆಯೆ ಸುರಿಯಲು ಶುರುವಾದ ಮಳೆಯಿಂದ ಗೋವಿನ ಜೋಳದ ಕಾಳುಗಳು ಮೋಳಕೆಯೋಡೆಯುತ್ತಿದ್ದರೆ, ಕಟಾವಿಗೆ ಬಂದ ಮತ್ತು ಕಟಾವಾದ ಭತ್ತ ನೀರು ಪಾಲಾಗಿದೆ. ದುಬಾರಿ ಕೃಷಿ ಕಾರ್ಮಿಕ ಮಜೂರಿ, ಔಷಧ-ಗೊಬ್ಬರ-ಬೀಜ ಸರಿಯಾಗಿ ಸಿಗದಿರುವುದು, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಅನಿವಾರ್ಯತೆಯಂಥ ಹಲವು ಅಡ್ಡಿ-ಆತಂಕದ ನಡುವೆ ಸಾಲ ಮಾಡಿ ಮನೆಯ ಸಣ್ಣ ಮಕ್ಕಳು, ಹೆಂಗಸರೆಲ್ಲ ಜಮೀನಿನಲ್ಲಿ ದುಡಿದು ಬೆಳೆದ ಬೆಳೆ ಕೊನೆಘಳಿಗೆಯಲ್ಲಿ ಕೈಗೆ ಸಿಗದ ಘೋರ ದುರಂತ ಆಗಿಹೋಗಿದೆ ಎಂದು ರೈತರು ಹೇಳುವುದು ಕರುಣಾಜನಕವಾಗಿದೆ.

ಬದುಕಿಗಾಧಾರವಾಗಿದ್ದ ಬೆಳೆ ಮಳೆಗೆ ನಾಶವಾದ ಹತಾಶೆಯಿಂದ ಶಿರಸಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನವಾಸಿ ಬಳಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ [58] ಬೆಳೆದ ಶುಂಠಿ, ಭತ್ತ ಮಳೆಗೆ ಹಾಳಾದ್ದರಿಂದ ನೊಂದು ನ.17ರಂದು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರು ನ.19ರಂದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.


ಫಕೀರಣ್ಣ ಶೇಷಣ್ಣನವರ್

ಭವಿಷ್ಯದ ಬದುಕಿನ ನಿರೀಕ್ಷೆಗಳೆಲ್ಲ ಮಳೆ ಪಾಲಾಗಿ ಹತಾಶವಾಗಿರುವ ರೈತ ಸುಮುದಾಯದ ನೆರವಿಗೆ ನಿಷ್ಟೆ-ಬದ್ದತೆಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕಾಗಿದೆ. ಈ ವರ್ಷ ಪೂರ್ಣ ಪ್ರಮಾಣದ ಬೆಳೆ ವಿಮೆಗೆ ತಾವು ಅರ್ಹರೆಂದು ರೈತರು ಹೇಳುತ್ತಿದ್ದಾರೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡು ನೆರವು ನೀಡಲು ಅಡ್ಡಿಯಾಗಿರುವ ವಿಮೆ ಕಂಪನಿಗಳ ಮಾನದಂಡಗಳಿಗೆ ಮೂಗುದಾರ ಹಾಕಬೇಕಿದೆ. ಕಾಟಾಚಾರದ ಪರಿಹಾರ ನೊಂದ ರೈತರಲ್ಲಿ ಆಕ್ರೋಶ ಮೂಡಿಸುವ ಸಾಧ್ಯತೆಯಿದ್ದು, ಗರಿಷ್ಟ ಪರಿಹಾರ ಸಿಗುವಂತೆ ಪ್ರಯತ್ನಿಸುವ ಇಚ್ಛಾ ಶಕ್ತಿಯನ್ನು ಜನಪ್ರತಿನಧಿಗಳು ಪ್ರದರ್ಶಿಸಬೇಕಿದೆ ಎಂದು ರೈತ ಮುಂಖಡರು ಹೇಳುತ್ತಿದ್ದಾರೆ. ಹುಸಿ ಆಸ್ವಾಸನೆಗಳಿಗೆ ಸೀಮಿತವಾಗದೆ ಆತಂಕಿತ ರೈತ ಸಮುದಾಯದಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ.


ಇದನ್ನೂ ಓದಿ: ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...