Homeಮುಖಪುಟಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಉಲ್ಲೇಖಿತ ಆರು ವಿಷಯಗಳ ಕುರಿತು ಮಾತುಕತೆ ಪುನರಾರಂಭಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

- Advertisement -
- Advertisement -

ರೈತ ವಿರೋಧಿ ಕರಾಳ ಕಾನೂನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಒಕ್ಕೂಟವಾದ ‘ಸಂಯುಕ್ತ ಕಿಸಾನ್ ಮೋರ್ಚಾ’ ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಅದರಲ್ಲಿ ಒಟ್ಟು ಆರು ವಿಷಯಗಳನ್ನು ಪ್ರಸ್ತಾಪಿಸಿದೆ. ಪತ್ರದಲ್ಲಿ ಉಲ್ಲೇಖಿತ ಆರು ವಿಷಯಗಳ ಕುರಿತು ತಕ್ಷಣವೆ ರೈತರೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದು, ಅಲ್ಲಿಯವರೆಗೂ ಚಳವಳಿಯು ಮುಂದುವರೆಯಲಿದೆ ಎಂದು ಅದು ಎಚ್ಚರಿಸಿದೆ.

ಒಕ್ಕೂಟವು ತನ್ನ ಪತ್ರದಲ್ಲಿ, “11 ಸುತ್ತಿನ ಮಾತುಕತೆಗಳು ನಡೆದರೂ, ಸರ್ಕಾರ ದ್ವಿಪಕ್ಷೀಯ ಪರಿಹಾರಕ್ಕಿಂತ ಏಕಪಕ್ಷೀಯವಾಗಿ ಘೋಷಣೆಯನ್ನು ಮಾಡುತ್ತಲೇ ಬಂದಿದೆ ಎಂಬುವುದನ್ನು ನಾವು ಗಮನಿಸಿದ್ದೇವೆ. ಅದೇನೇ ಇದ್ದರೂ, ನೀವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ಸರ್ಕಾರವು ಈ ಭರವಸೆಯನ್ನು ಶೀಘ್ರವಾಗಿ ಮತ್ತು ಪೂರ್ಣವಾಗಿ ಪೂರೈಸುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಜೊತೆಗೆ, ಮೂರು ಕಾನೂನುಗಳನ್ನು ರದ್ದುಗೊಳಿಸುವುದು ಮಾತ್ರವೆ ಈ ಹೋರಾಟದ ಏಕೈಕ ಬೇಡಿಕೆಯಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿರುವ ಪತ್ರವು, ಈ ಹಿಂದಿನಿಂದಲೂ ಕೇಳುತ್ತಿದ್ದ ಮೂರು ಬೇಡಿಕೆಯನ್ನು ಪ್ರಧಾನಿಗೆ ನೆನಪಿಸಿದೆ. ಅವುಗಳು ಕೆಳಗಿನಂತಿವೆ,

ಒಂದನೇ ಬೇಡಿಕೆಯಾಗಿ, “ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಇದರಿಂದಾಗಿ ದೇಶದ ಪ್ರತಿಯೊಬ್ಬ ರೈತನಿಗೆ ಸರ್ಕಾರವು ಘೋಷಿಸಿದ ಕನಿಷ್ಠ MSP ಯನ್ನು ಅವರ ಸಂಪೂರ್ಣ ಬೆಳೆಗೆ ಖಾತರಿಪಡಿಸಬಹುದು” ಎಂದು ಪತ್ರದಲ್ಲಿ ಒಕ್ಕೂಟವು ಹೇಳಿದೆ. ಜೊತೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ಮೋದಿ ಸರ್ಕಾರವು ಈ ಬಗ್ಗೆ ಸಂಸತ್ತಿನಲ್ಲಿ ಘೋಷಿಸಿತ್ತು ಎಂದು ಪತ್ರದಲ್ಲಿ ರೈತ ಒಕ್ಕೂಟವು ನೆನಪಿದೆ.

ಎರಡನೇ ಬೇಡಿಕೆಯಾಗಿದೆ, “ಸರ್ಕಾರವು ಪ್ರಸ್ತಾಪಿಸಿರುವ ‘ವಿದ್ಯುತ್ ತಿದ್ದುಪಡಿ ಮಸೂದೆ, 2020/2021’ ಕರಡನ್ನು ಹಿಂತೆಗೆದುಕೊಳ್ಳಿ” ಎಂದು ಒತ್ತಾಯಿಸಿದೆ. ಈ ಹಿಂದೆನ ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು, ಆದರೆ ನಂತರ ಭರವಸೆಯನ್ನು ಉಲ್ಲಂಘನೆ ಮಾಡಲಾದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಪತ್ರವು ಉಲ್ಲೇಖಿಸಿದೆ.

ಮೂರನೇ ಬೇಡಿಕೆಯಾಗಿ, “ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ‘ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಕ್ಟ್-2021’ ನಲ್ಲಿರುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕಬೇಕು” ಎಂದು ಹೇಳಿದೆ. ಈ ಕಾಯ್ದೆಯಲ್ಲಿನ ಕೆಲವು ರೈತ ವಿರೋಧಿ ನಿಬಂಧನೆಗಳನ್ನು ಸರ್ಕಾರವು ತೆಗೆದುಹಾಕಲಾಗಿದೆ ಎಂದು ಹೇಳಿರುವ ರೈತ ಒಕ್ಕೂಟ, ಆದರೂ ಕಾಯ್ದೆಯ ಸೆಕ್ಷನ್‌‌ 15 ರ ಮೂಲಕ ದಂಡದ ನಿಬಂಧನೆಗಳನ್ನು ರೈತರನ್ನು ಮರಳಿ ತರಲಾಗಿದೆ ಎಂದು ಆರೋಪಿಸಿದೆ.

ಪ್ರಧಾನಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸ್ಪಷ್ಟವಾದ ಘೋಷಣೆ ಇಲ್ಲದ ಕಾರಣ ರೈತರು ನಿರಾಶೆಗೊಂಡಿದ್ದಾರೆ ಎಂದು ರೈತ ಒಕ್ಕೂಟ ಹೇಳಿದೆ. ಈ ಐತಿಹಾಸಿಕ ಆಂದೋಲನದ ಮೂಲಕ ಮೂರು ಕಾನೂನುಗಳನ್ನು ರದ್ದಾಗುವುದರೊಂದಿಗೆ, ತಮ್ಮ ಕಠಿಣ ಪರಿಶ್ರಮಕ್ಕೆ ಫಲವಾಗಿ ಕನಿಷ್ಠ ಬೆಂಬಲದ ಕಾನೂನನ್ನು ಸಹ ಪಡೆಯುತ್ತಾರೆ ಎಂದು ರೈತರು ಆಶಿಸಿದ್ದರು ಎಂದು ರೈತ ಒಕ್ಕೂಟವು ಹೇಳಿದೆ.

ಇಷ್ಟೇ ಅಲ್ಲದೆ, ಕಳೆದ ಒಂದು ವರ್ಷದ ಐತಿಹಾಸಿಕ ಆಂದೋಲನದ ಸಂದರ್ಭದಲ್ಲಿ ಇತರ ಕೆಲವು ಸಮಸ್ಯೆಗಳೂ ಉದ್ಭವಿಸಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ರೈತ ಒಕ್ಕೂಟ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ಮೊದಲನೇಯದಾಗಿ, “ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳಾಗಿವೆ, ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಪತ್ರವು ಒತ್ತಾಯಿಸಿದೆ.

ಎರಡನೆಯದಾಗಿ, “ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಅವರು ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದು, ಕೇಂದ್ರದ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು” ಎಂದು ಪ್ರಧಾನಿಗೆ ಒತ್ತಾಯಿಸಲಾಗಿದೆ.

ಮೂರನೆಯದಾಗಿ, “ಈ ಆಂದೋಲನದ ಸಮಯದಲ್ಲಿ, ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು” ಎಂದು ಪತ್ರವು ಪ್ರಧಾನಿಗೆ ಕೇಳಿದೆ.

ಪತ್ರದಲ್ಲಿ, “ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ. ಈ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಕುರಿತು ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ತಕ್ಷಣ ಮಾತುಕತೆಯನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೂ ಸಂಯುಕ್ತ ಕಿಸಾನ್ ಮೋರ್ಚಾ ಈ ಚಳವಳಿಯನ್ನು ಮುಂದುವರೆಸಲಿದೆ” ಎಂದು ಪತ್ರವು ಉಲ್ಲೇಖೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...