Homeಮುಖಪುಟತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ - ಪ್ರತಿಭಟನೆಗೆ ಸಜ್ಜು

ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

- Advertisement -
- Advertisement -

ಬಿಜೆಪಿ ಆಡಳಿತದ ತ್ರಿಪುರವು ಗೂಂಡಾರಾಜ್ ಆಗಿ ಬದಲಾಗಿದೆ ಎಂದು ಟಿಎಂಸಿ ಪಕ್ಷ ಆರೋಪಿಸಿದೆ. ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್‌ರವರನ್ನು ಬಂಧಿಸಿರುವ ತ್ರಿಪುರ ಪೊಲೀಸರ ಕ್ರಮ ಖಂಡಿಸಿ ಇಂದು ದೆಹಲಿಯಲ್ಲಿ ಟಿಎಂಸಿ ನಾಯಕರು ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದ್ದಾರೆ. ಇದೇ ದಿನ ಬಿಜೆಪಿ ಎದುರಿಸುವುದರ ಕುರಿತು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಪಶ್ಚಿಮ ಬಂಗಾಳದ ಯುವ ಘಟಕದ ಅಧ್ಯಕ್ಷೆಯಾದ ಸಯೋನಿ ಘೋಷ್ ಸೇರಿದಂತೆ ಹಲವರು ಮೇಲೆ ಅಗರ್ತಲದಲ್ಲಿ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅಲ್ಲದೆ ಅವರೊಂದಿಗೆ ಟಿಎಂಸಿ ಸಂಸದೆಯಾದ ಸುಸ್ಮಿತ್ ದೇವ್, ಕುನಾಲ್ ಘೋಷ್, ಸುಬಾಲ್ ಬೌಮಿಕ್ ರವರನ್ನು ತ್ರಿಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ಹಲ್ಲೆ ನಡೆದಿದೆ ಎಂದು ಟಿಎಂಸಿ ಆರೋಪಿಸಿದ್ದು, ಆರು ಜನ ಗಾಯಗೊಂಡಿದ್ದಾರೆ ಎಂದಿದೆ.

ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರು ತ್ರಿಪುರಾಗೆ ತೆರಳಿದ್ದಾರೆ. ಪಕ್ಷದ 15ಕ್ಕೂ ಹೆಚ್ಚು ಸಂಸದರು ನವದೆಹಲಿ ತಲುಪಿದ್ದು, ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಲು ಸಮಯ ಕೋರಿದ್ದಾರೆ. ಅಲ್ಲದೇ ಇಂದು ಸೋಮವಾರ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಅಲ್ಲದೆ ಇಂದು ಮಮತಾ ಬ್ಯಾನರ್ಜಿ ಸಹ ದೆಹಲಿಯಲ್ಲಿರಲಿದ್ದು ಈ ವಿಷಯದ ಕುರಿತು ವಿರೋಧ ಪಕ್ಷಗಳೊಂದಿಗೆ ಚರ್ಚಿಸಲಿದ್ದಾರೆ. ಮುಖ್ಯವಾಗಿ ಬಿಜೆಪಿ ಹಿಂಸಾಚಾರಗಳ ಮತ್ತು ಬಿಜೆಪಿಯನ್ನು 2024ರ ಚುನಾವಣೆಯಲ್ಲಿ ಎದುರಿಸುವುದು ಹೇಗೆ ಎಂಬುದರ ಕುರಿತು ಚರ್ಚೆಗಳು ನಡೆಯಲಿವೆ ಎಂದು ವರದಿಯಾಗಿದೆ.

ಟಿಎಂಸಿಯ ಈ ಆರೋಪಗಳನ್ನು ಬಿಜೆಪಿ ಅಲ್ಲಗೆಳೆದಿದೆ. ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ಭಾಗವಹಿಸಿದ್ದ ಸಾರ್ವಜನಿಕ ಸಭೆಯನ್ನು ಸಯೋನಿ ಘೋಷ್ ಸೇರಿ ಇತರರು ಅಡ್ಡಿಪಡಿಸಿದರು. ವೇದಿಕೆಗೆ ಕಲ್ಲು ತೂರಿದರು ಎಂದು ಆರೋಪಿಸಿದೆ.

ಗಲಭೆಗೆ ಸಂಬಂಧಿಸಿದಂತೆ ಸಯೋನಿ ಘೋಷ್ ಸೇರಿದಂತೆ ಟಿಎಂಸಿಯ ಇತರರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹಲ್ಲೆ ಮಾಡಿದರು. ಆದರೆ ಯಾರಿಗು ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂತರ ಸಯೋನಿ ಘೋಷ್‌ರವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಅವರ ಮೆಲೆ ಕೊಲೆಯತ್ನ ಮತ್ತು ಗಲಭೆ ಹ ಹರಡುವ ಪ್ರಕರಣಗಳನ್ನು ದಾಖಲಿಸಿದ್ದು ಜಾಮೀನು ರಹಿತ ಪ್ರಕರಣಗಳನ್ನು ಸೇರಿಸಿದ್ದಾರೆ. ಆದರೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿರುವ ಟಿಎಂಸಿಯು ಇತರ ರಾಜ್ಯಗಳತ್ತ ದೃಷ್ಟಿ ಹಾಯಿಸಿದೆ. 2023ರಲ್ಲಿ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದೆ. ಹಾಗಾಗಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಕಾಯ್ದೆ ರದ್ದಾದ ನಂತರವೇ ಮುಷ್ಕರ ವಾಪಸ್: ನಾಳೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. TMC ಬಂಗಾಳ ದಲ್ಲಿ ಮಾಡುತ್ತಿರುವ ದ್ವೇಷ ರಾಜಕಾರಣಕ್ಕೆ ಸರಿಯಾಗಿ ತಿರುಗೇಟು ಕೊಡುತ್ತಿರುವುದು ತ್ರಿಪುರಾ ದ ಬಿಜೆಪಿ ಸರ್ಕಾರ ಮಾತ್ರ.

    ಬಿಜೆಪಿ ನಾಯಕರನ್ನು ಸಂಬಂಧವೇ ಇಲ್ಲದ ಯಾವ ಯಾವುದೋ ಕೇಸ್ ಗಳಲ್ಲಿ ಸಿಕ್ಕಿಸಿ ಅವರನ್ನು ಅರೆಸ್ಟ್ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಕಲ್ಕತ್ತ ಹೈ ಕೋರ್ಟ್ ಟಿ ಎಂ ಸಿ ಸರ್ಕಾರಕ್ಕೆ ಛೀ ಮಾರಿ ಹಾಕಿದೆ.

    ಆದರೆ ಬಂಗಾಳದ ಟಿ ಎಂ ಸಿ ಸರ್ಕಾರಕ್ಕೆ ಆ ಛೀ ಮಾರಿ ಬಗ್ಗೆ ಯಾವುದೇ ಗೌರವ ಇಲ್ಲ.

    ಏಟಿಗೆ ತಿರುಗೇಟು ಕೊಡದಿದ್ದರೆ ಸರ್ಕಾರದ ಬೆಂಬಲ ದಿಂದ ರೌಡಿಗಳೆಲ್ಲ ನಾಯಕರಾಗಿ ವಿಜೃಂಭಿಸುವದು ಭಾರತದಲ್ಲಿ ಅತ್ಯಂತ ಸಹಜ.

    ಈಗ ತ್ರಿಪುರಾ ದ ಬಿಜೆಪಿ ಸರ್ಕಾರ ಟಿ ಎಂ ಸಿ ಪಕ್ಷಕ್ಕೆ ಅದರದೇ ರುಚಿ ತೋರಿಸುತ್ತಿದೆ.

    ಟಿ ಎಂ ಸಿ ನಾಯಕರ ಭೇಟಿಗೆ ಅವಕಾಶ ನೀಡದೇ ಅಲ್ಲಿಗೆ ಬರುವ ಟಿ ಎಂ ಸಿ ನಾಯಕರಿಗೆ ಅರೆಸ್ಟ್ ಮಾಡುತ್ತಿದೆ! ಉದಾಹರಣೆ ಗೆ ಟಿ ಎಂ ಸಿ ಯುವ ನಾಯಕಿ ಸಾಯನಿ ಘೋಷ್ ಅವರನ್ನು ಕೊಲೆ ಕೇಸ್ ನಲ್ಲಿ ಅರೆಸ್ಟ್ ಮಾಡಿದೆ.

    ಟಿಟ್ ಫಾರ್ ಟ್ಯಾಟ್ ಆದಲ್ಲಿ ಮಾತ್ರ ಕಮ್ಯುನಿಸ್ಟರು ಮತ್ತು ಅವರ ಹಿಂಬಾಲಕರಾದ ಟಿ ಎಂ ಸಿ ಗೆ ತಾವು ದೈತ್ಯರು ತಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಅಳಿಯಲು ಸಾಧ್ಯ. ಟಿ ಎಂ ಸಿ ಯ ಗೂಂಡಾ ಗಳನ್ನು ಭೂಮಿಗೆ ತರಲು ಇದು ಅತ್ಯಂತ ಅವಶ್ಯಕ.

    ವೆಲ್ ಡನ್ ತ್ರಿಪುರಾ ಗವರ್ನಮೆಂಟ್.

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...