Homeಮುಖಪುಟಪಂಜಾಬ್: ಪಠಾಣ್ ಕೋಟ್ ಸೇನಾ ಕ್ಯಾಂಪ್‌‌ ಹೊರಗೆ ಗ್ರೆನೇಡ್ ಸ್ಪೋಟಿಸಿದ ಅಪರಿಚಿತ ವ್ಯಕ್ತಿಗಳು

ಪಂಜಾಬ್: ಪಠಾಣ್ ಕೋಟ್ ಸೇನಾ ಕ್ಯಾಂಪ್‌‌ ಹೊರಗೆ ಗ್ರೆನೇಡ್ ಸ್ಪೋಟಿಸಿದ ಅಪರಿಚಿತ ವ್ಯಕ್ತಿಗಳು

- Advertisement -
- Advertisement -

ಪಂಜಾಬ್‌ನ ಪಠಾಣ್ ಕೋಟ್ ಅಲ್ಲಿರುವ ಸೇನಾ ಕಂಟೋನ್ಮೆಂಟ್‌ನ ಗೇಟ್‌ ಹೊರಗೆ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದ್ದು, ನಂತರ ಅಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಪಠಾಣ್‌ಕೋಟ್‌ನ ಧೀರಪುಲ್ ಬಳಿಯ ಸೇನಾ ಕಂಟೋನ್ಮೆಂಟ್‌ನ ತ್ರಿವೇಣಿ ಗೇಟ್‌ನಲ್ಲಿ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಸೇನಾ ಕಂಟೋನ್ಮೆಂಟ್‌ನ ತ್ರಿವೇಣಿ ಗೇಟ್‌ ಎದುರು ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಗ್ರೆನೇಡ್‌ ಎಸೆದಿದ್ದಾರೆ. ಆದರೆ, ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಘಟನಾ ಸ್ಥಳದಿಂದ ಗ್ರೆನೇಡ್‌ನ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ.

“ನಾವು ಘಟನಾ ಸ್ಥಳದಿಂದ ಪಡೆದಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿಗಳನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಸ್ಫೋಟದ ನಂತರ, ಪ್ರದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆಂದು TNIE ವರದಿ ಮಾಡಿದೆ.

ಸುಮಾರು ಐದು ವರ್ಷಗಳ ಹಿಂದೆ, ಜನವರಿ, 2016 ರಲ್ಲಿ ಪಠಾಣ್‌ಕೋಟ್‌ನಲ್ಲಿರುವ ವಾಯುಪಡೆಯ ನೆಲೆಯ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಏಳು ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...