Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

- Advertisement -
- Advertisement -

ತ್ರಿಪುರ ಹಿಂಸಾಚಾರದ ವೇಳೆ ಮುಸ್ಲಿಮರಿಗೆ ಜಿಹಾದ್‌ಗೆ ಕರೆ ನೀಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊವೊಂದನ್ನು ಹಂಚಿಕೊಳ್ಳಲಾಗಿದೆ. ಭಾರತೀಯ ಮುಸ್ಲಿಮರ ವಿರುದ್ಧ ಅಪಪ್ರಚಾರ ಮಾಡುವಂತೆ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ವಿಡಿಯೊ ಎಲ್ಲಿನದ್ದು?

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಫೆಬ್ರವರಿ 2020ರಲ್ಲಿ ಟರ್ಕಿಶ್ ಸೇನೆಯ ವಿರುದ್ಧ ಜಿಹಾದ್ ಘೋಷಿಸುವ ಇಡ್ಲಿಬ್‌ನಲ್ಲಿರುವ ಮಸೀದಿಗಳ ಹಳೆಯ ದೃಶ್ಯಗಳನ್ನು ತೋರಿಸುತ್ತದೆ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಹಳೆಯದಾಗಿದೆ ಮತ್ತು ತ್ರಿಪುರಾದಲ್ಲಿ ಇತ್ತೀಚಿನ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಆಧಾರ

ವಿಡಿಯೊದ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಸರ್ಚ್ ಮಾಡಿದಾಗ, ಇದೇ ರೀತಿಯ ವಿಡಿಯೊವನ್ನು ಯೂಟ್ಯೂಬ್ ಬಳಕೆದಾರರು 07 ಫೆಬ್ರವರಿ 2020ರಂದು ಪೋಸ್ಟ್ ಮಾಡಿರುವುದು ಕಂಡುಬಂದಿದೆ. ಈ ಯೂಟ್ಯೂಬ್ ಚಾನೆಲ್ ಇದನ್ನು ಇಡ್ಲಿಬ್‌ನಲ್ಲಿರುವ ಮಸೀದಿಯು ಜಿಹಾದ್‌‌ಗೆ (ಪವಿತ್ರ ಯುದ್ಧಕ್ಕೆ) ಕರೆ ನೀಡುತ್ತಿರುವುದು ಎಂದು ವರದಿ ಮಾಡಿದೆ.

ಈ ಕೀವರ್ಡ್‌ಗಳನ್ನು ಬಳಸಿಕೊಂಡು ವಿಶ್ವಾಸಾರ್ಹ ಮೂಲಗಳನ್ನು ಹುಡುಕಿದಾಗ, 07 ಫೆಬ್ರವರಿ 2020ರಂದು ಟರ್ಕಿಶ್ ಸುದ್ದಿ ವೆಬ್‌ಸೈಟ್ ‘ಯೆನಿಯಾಕಿಟ್’ ಪ್ರಕಟಿಸಿದ ಲೇಖನದಲ್ಲಿ ಇದೇ ರೀತಿಯ ವೀಡಿಯೊ ಕಂಡುಬಂದಿದೆ. ಈ ಲೇಖನವನ್ನು “ಮಸೀದಿಗಳಿಂದ ಸಿರಿಯನ್ನರಿಗೆ ಕರೆ: ಜಿಹಾದ್‌ಗೆ ನಾವು ಹೋಗೋಣ, ಯುವಜನರೇ, ಜಿಹಾದ್‌ಗೆ” ಎಂಬ ಶೀರ್ಷಿಕೆಯೊಂದಿಗೆ ಪ್ರಕಟಿಸಲಾಗಿದೆ.

ಹಸನ್ ಸಿವ್ರಿ ಎಂಬ ಪತ್ರಕರ್ತ 07 ಫೆಬ್ರವರಿ 2020ರಂದು ಅದೇ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ವೀಡಿಯೊವನ್ನು ಹಂಚಿಕೊಂಡ ಹಸನ್ ಸಿವ್ರಿ, ಇಡ್ಲಿಬ್‌ನಲ್ಲಿನ ವಿರೋಧಿಬಣದ ನಿಯಂತ್ರಣದಲ್ಲಿರುವ ಮಸೀದಿಗಳು, ಇಡ್ಲಿಬ್‌ನ ಕಡೆಗೆ ಸಾಗುತ್ತಿರುವ ಟರ್ಕಿಶ್ ಸೇನಾ ಬೆಂಗಾವಲಿನ ವಿರುದ್ಧ ಹೋರಾಡಲು ಜಿಹಾದ್‌ಗಾಗಿ ಜನರಿಗೆ ಕರೆ ನೀಡಿವೆ ಎಂದು ವರದಿ ಮಾಡಿದ್ದಾರೆ. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ ಹಳೆಯದು ಮತ್ತು ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿಲ್ಲ ಎಂದು ತೀರ್ಮಾನಿಸಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತದ ಘಟನೆಗೆ ಸಂಬಂಧವಿಲ್ಲದ ಸಿರಿಯಾದ ಹಳೆಯ ವೀಡಿಯೊವನ್ನು, “ತ್ರಿಪುರಾದಲ್ಲಿ ಮುಸ್ಲಿಮರ ವಿರುದ್ಧದ ಹಿಂಸಾಚಾರದಲ್ಲಿ ಹೋರಾಡಲು ಜಿಹಾದ್‌ಗೆ ಕರೆ ನೀಡುವ ಮಸೀದಿಯ ದೃಶ್ಯಗಳು” ಎಂದು ಹಂಚಿಕೊಳ್ಳಲಾಗಿದೆ. ಇದು ಮುಸ್ಲಿಮರ ವಿರುದ್ಧ ಕೋಮು ಭಾವನೆಗಳನ್ನು ಪ್ರಚೋದಿಸಲೆಂದೇ ಮಾಡಿದ ದೃಷ್ಕೃತವೆಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...