Homeಕರ್ನಾಟಕದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

ದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ)’ ಸಮುದಾಯದ ‘ಲಾಯಿಲ ವೆಂಕಟರಮಣ ದೇವಸ್ಥಾನ’ದ ದೇವರ ಪಲ್ಲಕ್ಕಿಯನ್ನು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚೆಗೆ ಹೊತ್ತಿದ್ದರು. ಈ ವಿಡಿಯೊ ಇದೀಗ ವೈರಲ್ ಆಗಿದ್ದು, ದೇವಸ್ಥಾನದ ಈ ಕ್ರಮದ ವಿರುದ್ದ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ‘ಆಲ್‌ ಟೆಂಪರ್‌ ಅಸೋಸಿಯೇಷನ್‌’ ತಕರಾರು ಎತ್ತಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ಅಸೋಷಿಯೇಷನ್‌ ದೇವಸ್ಥಾನ ಸಮಿತಿ ಬಳಿ ಮಾಹಿತಿ ಕೇಳಿದೆ ಎನ್ನಲಾಗಿದೆ. ಜೊತಗೆ ಬಂಟ ಸಮುದಾಯದ ಶಾಸಕರಾದ ಹರೀಶ್‌ ಪೂಂಜಾ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಿದ ‘ ಜಿಎಸ್‌ಬಿ’ ಯುವಕರಿಬ್ಬರ ವಿರುದ್ದ ಕೂಡಾ ಕ್ರಮಕೈಗೊಳ್ಳಲು ಇದೀಗ ತಯಾರಿ ನಡೆಯುತ್ತಿದೆ ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ. ಈ ನಡುವೆ, ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಕಾಶಿ ಮಠದ ಸ್ವಾಮಿಗೂ ದೂರು ನೀಡಲಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಳ್ತಂಗಡಿ ತಾಲೂಕಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಆಡಳಿತಕ್ಕೆ ಒಳಪಟ್ಟ ಲಾಯಿಲ ವೆಂಕಟರಮಣ ದೇವಾಲಯದಲ್ಲಿ ಪ್ರತಿ ವರ್ಷ ಕಾರ್ತಿಕ ಹುಣ್ಣಿಮೆಯಂದು ದೀಪೋತ್ಸವ ನಡೆಯುತ್ತದೆ. ಈ ಸಂಧರ್ಭದಲ್ಲಿ ದೇವರ ಪೇಟೆ ಸವಾರಿ ಉತ್ಸವವಿರುತ್ತದೆ. ಈ ಉತ್ಸವದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಯುವಕರು ಮಾತ್ರ ದೇವರ ಪಲ್ಲಕ್ಕಿ ಹೊರುತ್ತಿದ್ದರು. ಆದರೆ ಈ ಬಾರಿ, ಶೂದ್ರ ಸಮುದಾಯದ ಬಂಟ ಜಾತಿಯ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರಿಂದ ದೇವರ ಪಲ್ಲಕ್ಕಿಯನ್ನು ಹೊರಿಸಲಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಆದರೆ, ಸಂಪ್ರದಾಯ ಮುರಿದು ಹಿಂದುಳಿದ ಸಮಾಜದ ವ್ಯಕ್ತಿಯೊಬ್ಬ ಪಲ್ಲಕ್ಕಿಯನ್ನು ಹೊರುವಂತೆ ಮಾಡಿರುವುದು ಸಮುದಾಯದ ಒಳಗೆ ತಕರಾರು ಎದ್ದಿದೆ ಎನ್ನಲಾಗಿದೆ. ಈ ಬಗ್ಗೆ ಸಮುದಾಯದ ದೇವಾಲಯಗಳ ಒಕ್ಕೂಟವಾದ ‘ಆಲ್‌ ಟೆಂಪಲ್‌ ಅಸೋಷಿಯೇಷನ್‌’ ತಕರಾರು ಎತ್ತಿದೆ ಎನ್ನಲಾಗಿದ್ದು, ವಿವಾದದ ಬಗ್ಗೆ ವಿವರ ಕೇಳಿದೆ ಎನ್ನಲಾಗಿದೆ. ಜೊತಗೆ ಸಮುದಾಯದ ಕಾಶಿ ಮಠದ ಸ್ವಾಮಿಗಳ ಬಳಿಯು ದೂರು ನೀಡಲಾಗಿದೆ ಎಂದು ಸಂದೇಶ ಹರಿದಾಡುತ್ತಿದೆ. ಶಾಸಕರಿಗೆ ಪಲ್ಲಕ್ಕಿ ಹೊರುವಂತೆ ಮಾಡಿದ್ದ ಸಮುದಾಯದ ಇಬ್ಬರು ಯುವಕರ ವಿರುದ್ದವು ಕ್ರಮಕೈಗೊಳ್ಳಲು ಮತ್ತು ಪಲ್ಲಕ್ಕಿ ಶುದ್ದೀಕರಣಕ್ಕೆ ತಯಾರಿ ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ನಡುವೆ ದೇವಸ್ಥಾನದ ಈ ಕ್ರಮವನ್ನು, ದಲಿತ ಹಕ್ಕುಗಳ ಹೋರಾಟದ ರಾಜ್ಯ ಸಮಿತಿ ಸದಸ್ಯರಾಗಿರುವ ಶೇಖರ್ ಲಾಯಿಲ ಅವರು ಸ್ವಾಗತಿಸಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಶಾಸಕರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ಕೊಟ್ಟಿದ್ದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಕ್ರಮವನ್ನು ದಲಿತ ಸಮುದಾಯಕ್ಕೂ ವಿಸ್ತರಿಸಬೇಕು. ಮುಂದಿನ 24 ರ ಬುಧವಾರದಂದು ‘ಪಂಚಮಿ ಉತ್ಸವ’ ನಡೆಯಲಿದ್ದು, ಅಂದು ದಲಿತರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಈ ಬಗ್ಗೆ ದೇವಾಲಯದ ಆಡಳಿತ ಮೋಕ್ತೇಸರರಾಗಿರುವ ಸುಧೀರ್ ಪ್ರಭು ನಾನುಗೌರಿ.ಕಾಂ ಜೊತೆ ಮಾತನಾಡಿ, “ದೇವಾಲಯದ ಆಡಳಿತ ಸಮಿತಿಯ ಗಮನಕ್ಕೆ ತರದೆ ಶಾಸಕ ಹರೀಶ್‌ ಪೂಂಜಾ ಅವರ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಲಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುವಂತೆ, ಆಲ್‌‌ ಟೆಂಪಲ್‌ ಅಸೋಷಿಯೇಷನ್‌ ಕಡೆಯಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ಹೀಗೊಂದು ಘಟನೆ ನಡೆದಿದೆ ಎಂದಷ್ಟೇ ಈಗ ತಿಳಿದುಬಂದಿದೆ. ಜೊತೆಗೆ ಉತ್ಸವ ಇನ್ನೂ ಮುಗಿದಿಲ್ಲ, ಎಲ್ಲವೂ ಮುಗಿದ ನಂತರ ನಡೆಯುವ ಸಭೆಯಲ್ಲಿ ಪಲ್ಲಕ್ಕಿ ಹೊರಿಸಿದ ವಿಷಯವೂ ಚರ್ಚೆಗೆ ಬರಬಹುದು. ಆದ್ದರಿಂದ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ದಲಿತರಿಗೂ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಶಾಸಕರಿಗೆ ಪಲ್ಲಕ್ಕಿ ಹೊರಲು ಅವಕಾಶವನ್ನು ಆಡಳಿತ ಮಂಡಳಿ ನೀಡಿಲ್ಲ. ಆ ಸಂದರ್ಭದಲ್ಲಿ ಶಾಸಕರು ಇದ್ದರು, ಆಗ ಅವರಿಗೆ ಪಲ್ಲಕ್ಕಿ ಹೊರಲು ಅವಕಾಶ ನೀಡಲಾಗಿದೆ. ನಮ್ಮ ಜಿಎಸ್‌ಬಿ ಸಮುದಾಯದ ಕೆಲವು ಸಂಪ್ರದಾಯವಿದೆ. ದಲಿತರಿಗೆ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಸಂಪರ್ಕಿಸಲು ಪ್ರಯತ್ನಿಸಿದ್ದು ಅವರ ಸಂಪರ್ಕ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಅದನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...