Homeಕರ್ನಾಟಕದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

ದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ)’ ಸಮುದಾಯದ ‘ಲಾಯಿಲ ವೆಂಕಟರಮಣ ದೇವಸ್ಥಾನ’ದ ದೇವರ ಪಲ್ಲಕ್ಕಿಯನ್ನು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚೆಗೆ ಹೊತ್ತಿದ್ದರು. ಈ ವಿಡಿಯೊ ಇದೀಗ ವೈರಲ್ ಆಗಿದ್ದು, ದೇವಸ್ಥಾನದ ಈ ಕ್ರಮದ ವಿರುದ್ದ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ‘ಆಲ್‌ ಟೆಂಪರ್‌ ಅಸೋಸಿಯೇಷನ್‌’ ತಕರಾರು ಎತ್ತಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ಅಸೋಷಿಯೇಷನ್‌ ದೇವಸ್ಥಾನ ಸಮಿತಿ ಬಳಿ ಮಾಹಿತಿ ಕೇಳಿದೆ ಎನ್ನಲಾಗಿದೆ. ಜೊತಗೆ ಬಂಟ ಸಮುದಾಯದ ಶಾಸಕರಾದ ಹರೀಶ್‌ ಪೂಂಜಾ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಿದ ‘ ಜಿಎಸ್‌ಬಿ’ ಯುವಕರಿಬ್ಬರ ವಿರುದ್ದ ಕೂಡಾ ಕ್ರಮಕೈಗೊಳ್ಳಲು ಇದೀಗ ತಯಾರಿ ನಡೆಯುತ್ತಿದೆ ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ. ಈ ನಡುವೆ, ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಕಾಶಿ ಮಠದ ಸ್ವಾಮಿಗೂ ದೂರು ನೀಡಲಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಳ್ತಂಗಡಿ ತಾಲೂಕಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಆಡಳಿತಕ್ಕೆ ಒಳಪಟ್ಟ ಲಾಯಿಲ ವೆಂಕಟರಮಣ ದೇವಾಲಯದಲ್ಲಿ ಪ್ರತಿ ವರ್ಷ ಕಾರ್ತಿಕ ಹುಣ್ಣಿಮೆಯಂದು ದೀಪೋತ್ಸವ ನಡೆಯುತ್ತದೆ. ಈ ಸಂಧರ್ಭದಲ್ಲಿ ದೇವರ ಪೇಟೆ ಸವಾರಿ ಉತ್ಸವವಿರುತ್ತದೆ. ಈ ಉತ್ಸವದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಯುವಕರು ಮಾತ್ರ ದೇವರ ಪಲ್ಲಕ್ಕಿ ಹೊರುತ್ತಿದ್ದರು. ಆದರೆ ಈ ಬಾರಿ, ಶೂದ್ರ ಸಮುದಾಯದ ಬಂಟ ಜಾತಿಯ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರಿಂದ ದೇವರ ಪಲ್ಲಕ್ಕಿಯನ್ನು ಹೊರಿಸಲಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಆದರೆ, ಸಂಪ್ರದಾಯ ಮುರಿದು ಹಿಂದುಳಿದ ಸಮಾಜದ ವ್ಯಕ್ತಿಯೊಬ್ಬ ಪಲ್ಲಕ್ಕಿಯನ್ನು ಹೊರುವಂತೆ ಮಾಡಿರುವುದು ಸಮುದಾಯದ ಒಳಗೆ ತಕರಾರು ಎದ್ದಿದೆ ಎನ್ನಲಾಗಿದೆ. ಈ ಬಗ್ಗೆ ಸಮುದಾಯದ ದೇವಾಲಯಗಳ ಒಕ್ಕೂಟವಾದ ‘ಆಲ್‌ ಟೆಂಪಲ್‌ ಅಸೋಷಿಯೇಷನ್‌’ ತಕರಾರು ಎತ್ತಿದೆ ಎನ್ನಲಾಗಿದ್ದು, ವಿವಾದದ ಬಗ್ಗೆ ವಿವರ ಕೇಳಿದೆ ಎನ್ನಲಾಗಿದೆ. ಜೊತಗೆ ಸಮುದಾಯದ ಕಾಶಿ ಮಠದ ಸ್ವಾಮಿಗಳ ಬಳಿಯು ದೂರು ನೀಡಲಾಗಿದೆ ಎಂದು ಸಂದೇಶ ಹರಿದಾಡುತ್ತಿದೆ. ಶಾಸಕರಿಗೆ ಪಲ್ಲಕ್ಕಿ ಹೊರುವಂತೆ ಮಾಡಿದ್ದ ಸಮುದಾಯದ ಇಬ್ಬರು ಯುವಕರ ವಿರುದ್ದವು ಕ್ರಮಕೈಗೊಳ್ಳಲು ಮತ್ತು ಪಲ್ಲಕ್ಕಿ ಶುದ್ದೀಕರಣಕ್ಕೆ ತಯಾರಿ ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ನಡುವೆ ದೇವಸ್ಥಾನದ ಈ ಕ್ರಮವನ್ನು, ದಲಿತ ಹಕ್ಕುಗಳ ಹೋರಾಟದ ರಾಜ್ಯ ಸಮಿತಿ ಸದಸ್ಯರಾಗಿರುವ ಶೇಖರ್ ಲಾಯಿಲ ಅವರು ಸ್ವಾಗತಿಸಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಶಾಸಕರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ಕೊಟ್ಟಿದ್ದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಕ್ರಮವನ್ನು ದಲಿತ ಸಮುದಾಯಕ್ಕೂ ವಿಸ್ತರಿಸಬೇಕು. ಮುಂದಿನ 24 ರ ಬುಧವಾರದಂದು ‘ಪಂಚಮಿ ಉತ್ಸವ’ ನಡೆಯಲಿದ್ದು, ಅಂದು ದಲಿತರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಈ ಬಗ್ಗೆ ದೇವಾಲಯದ ಆಡಳಿತ ಮೋಕ್ತೇಸರರಾಗಿರುವ ಸುಧೀರ್ ಪ್ರಭು ನಾನುಗೌರಿ.ಕಾಂ ಜೊತೆ ಮಾತನಾಡಿ, “ದೇವಾಲಯದ ಆಡಳಿತ ಸಮಿತಿಯ ಗಮನಕ್ಕೆ ತರದೆ ಶಾಸಕ ಹರೀಶ್‌ ಪೂಂಜಾ ಅವರ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಲಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುವಂತೆ, ಆಲ್‌‌ ಟೆಂಪಲ್‌ ಅಸೋಷಿಯೇಷನ್‌ ಕಡೆಯಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ಹೀಗೊಂದು ಘಟನೆ ನಡೆದಿದೆ ಎಂದಷ್ಟೇ ಈಗ ತಿಳಿದುಬಂದಿದೆ. ಜೊತೆಗೆ ಉತ್ಸವ ಇನ್ನೂ ಮುಗಿದಿಲ್ಲ, ಎಲ್ಲವೂ ಮುಗಿದ ನಂತರ ನಡೆಯುವ ಸಭೆಯಲ್ಲಿ ಪಲ್ಲಕ್ಕಿ ಹೊರಿಸಿದ ವಿಷಯವೂ ಚರ್ಚೆಗೆ ಬರಬಹುದು. ಆದ್ದರಿಂದ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ದಲಿತರಿಗೂ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಶಾಸಕರಿಗೆ ಪಲ್ಲಕ್ಕಿ ಹೊರಲು ಅವಕಾಶವನ್ನು ಆಡಳಿತ ಮಂಡಳಿ ನೀಡಿಲ್ಲ. ಆ ಸಂದರ್ಭದಲ್ಲಿ ಶಾಸಕರು ಇದ್ದರು, ಆಗ ಅವರಿಗೆ ಪಲ್ಲಕ್ಕಿ ಹೊರಲು ಅವಕಾಶ ನೀಡಲಾಗಿದೆ. ನಮ್ಮ ಜಿಎಸ್‌ಬಿ ಸಮುದಾಯದ ಕೆಲವು ಸಂಪ್ರದಾಯವಿದೆ. ದಲಿತರಿಗೆ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಸಂಪರ್ಕಿಸಲು ಪ್ರಯತ್ನಿಸಿದ್ದು ಅವರ ಸಂಪರ್ಕ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಅದನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...