Homeಕರ್ನಾಟಕಹಂಸಲೇಖ ಪ್ರಕರಣ ಹಿನ್ನೆಲೆ: ಪೇಜಾವರ ಶ್ರೀಗಳ ಹಳೆಯ ವಿಡಿಯೊ ವೈರಲ್‌

ಹಂಸಲೇಖ ಪ್ರಕರಣ ಹಿನ್ನೆಲೆ: ಪೇಜಾವರ ಶ್ರೀಗಳ ಹಳೆಯ ವಿಡಿಯೊ ವೈರಲ್‌

ಕೆಲವು ಬ್ರಾಹ್ಮಣರು ಮಾಂಸಾಹಾರ ತಿನ್ನುತ್ತಿದ್ದಾರೆ ಎಂದು ಪೇಜಾವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿರುವ ಹಳೆಯ ವಿಡಿಯೊ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಉಡುಪಿಯ ಪೇಜಾವರ ಮಠದ ಹಿರಿಯ ಸ್ವಾಮೀಜಿಗಳಾದ ದಿವಂಗತ ವಿಶ್ವೇಶ ತೀರ್ಥರು ಹಿಂದೊಮ್ಮೆ ಮಾತನಾಡಿದ್ದ ವಿಡಿಯೊ ಈಗ ವೈರಲ್ ಆಗಿದೆ. ಮಾಂಸಾಹಾರ ಹಾಗೂ ಸಸ್ಯಾಹಾರ ವಿವಾದಕ್ಕೆ ಹೊಸ ತಿರುವು ನೀಡಿದೆ.

ಸಂಗೀತ ನಿರ್ದೇಶಕರಾದ ಹಂಸಲೇಖ ಅವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ದಲಿತರ ಮನೆಗೆ ಹೋಗುವುದು ಮುಖ್ಯವಲ್ಲ, ದಲಿತರನ್ನು ತಮ್ಮ ಮನೆಗೆ ಬಲಿತರು ಕರೆಸಿಕೊಳ್ಳುವುದು ಮುಖ್ಯ ಎಂದಿದ್ದರು. ಆಗ ಮಾತನಾಡುತ್ತ, ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರ ಪ್ರಸ್ತಾಪವನ್ನು ಮಾಡಿದ್ದರು. “ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? ಕುರಿಯ ರಕ್ತ ಉರಿದುಕೊಟ್ಟರೆ ತಿನ್ನುತ್ತಾರಾ?” ಎಂದು ಪ್ರಾಸಂಗಿಕವಾಗಿ ಪ್ರಶ್ನಿಸಿದ್ದರು.

ವಿಡಿಯೊ ವೈರಲ್‌ ಆದ ಬಳಿಕ ಹಂಸಲೇಖರ ವಿರುದ್ಧ ಮುಗಿಬಿದ್ದ ಮತೀಯವಾದಿ ಟ್ರೋಲ್‌ ಪಡೆ, ಹಂಸಲೇಖ ಅವರ ಕುರಿತು ತುಚ್ಛವಾಗಿ ಮಾತನಾಡಲು ಆರಂಭಿಸಿತು. ಹಂಸಲೇಖ ಅವರು ಪೇಜಾವರ ಶ್ರೀಗಳಿಗೆ ಅವಮಾನ ಮಾಡಿದ್ದಾರೆ ಎಂದು ಬಿಂಬಿಸಿತು. ಹಂಸಲೇಖ ಅವರು ಕ್ಷಮೆ ಯಾಚಿಸಿದ ಬಳಿಕವೂ ವಿವಾದ ಮುಂದುವರಿದಿದೆ.

ಮೀರಾ ರಾಘವೇಂದ್ರ ಎಂಬವರು ಹಂಸಲೇಖ ಪ್ರಕರಣಕ್ಕೆ ಪ್ರತಿಕ್ರಿಯಿಸುತ್ತಾ ವೈವಿಧ್ಯಮಯ ಆಹಾರ ಸಂಸ್ಕೃತಿ ಕುರಿತು ಲಘುವಾಗಿ ಮಾತನಾಡಿ, ‘ಬಾಡೇ ನಮ್‌ ಗಾಡು’ ಎಂಬ ವಿನೂತನ ಅಭಿಯಾನ ಆರಂಭವಾಗಲೂ ಕಾರಣಕರ್ತರಾದರು. ಒಂದು ಸಪ್ತಾಹವಾಗಿ ನಡೆಯುತ್ತಿರುವ ‘ಬಾಡೇ ನಮ್‌ ಗಾಡು’ ಅಭಿಯಾನದ ಜೊತೆಜೊತೆಗೆ ಮಾಂಸಾಹಾರಿಗಳ ಕುರಿತು ಒಂದು ವರ್ಗದ ಜನಕ್ಕೆ ಯಾಕಿಷ್ಟು ಅಸಹನೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಆಹಾರ ಸಂಸ್ಕೃತಿಯನ್ನು ಅಣಕಿಸುವುದರ ವಿರುದ್ಧ ಜನರು ದನಿಎತ್ತಿದ್ದಾರೆ.

ಪೇಜಾವರ ಶ್ರೀಗಳು ಹಿಂದೊಮ್ಮೆ ಖಾಸಗಿ ಸುದ್ದಿವಾಹಿನಿಗೆ ನೀಡಿದ್ದ ಸಂದರ್ಶನದ ತುಣುಕು ಈಗ, “ಮಾಂಸಾಹಾರ, ಸಸ್ಯಾಹಾರ” ವಿವಾದದ ಬೆನ್ನಲ್ಲೇ ವೈರಲ್ ಆಗಿದೆ. ಸಂದರ್ಶನದಲ್ಲಿ ಪೇಜಾವರ ಶ್ರೀಗಳು ಹಿರಿಯ ಪತ್ರಕರ್ತ ಎಚ್‌.ಆರ್‌.ರಂಗನಾಥ್ ಅವರಿಗೆ ಉತ್ತರಿಸುತ್ತಾ, “ಮಾಂಸಾಹಾರವನ್ನು ಕೆಲವು ಬ್ರಾಹ್ಮಣರು ಗುಟ್ಟುಗುಟ್ಟಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿರುವುದು ದಾಖಲಾಗಿದೆ.

“ಪುರಾಣ ಕಾಲದಿಂದಲೂ ಬಂದಿರುವ ಮಾಂಸದ ಭಕ್ಷಣೆ, ಪೇಜಾವರರು ಹೇಳಿದ ತಕ್ಷಣ ನಿಂತು ಹೋಗಿಬಿಡುತ್ತದೆಯೇ?” ಎಂದು ರಂಗನಾಥ್‌ ಅವರು ಕೇಳುತ್ತಾರೆ.

“ಪುರಾಣ ಕಾಲದಿಂದ ಬಂದದ್ದು ನಿಂತು ಹೋಗಿ ಸಾವಿರಾರು ವರ್ಷಗಳಾಗಿದೆ. ಪುರಾಣ ಕಾಲದಲ್ಲಿ ಇದ್ದದ್ದು ಕಲಿಯುಗ ಪ್ರಾರಂಭದ ಬಳಿಕ ಮೂರ್ನಾಲ್ಕು ಸಾವಿರ ವರ್ಷಗಳ ಹಿಂದೆಯೇ ನಿಂತು ಹೋಗಿದೆ. ಇದು ಪೇಜಾವರರು ಹೇಳಿದ್ದಲ್ಲ. ಬ್ರಾಹ್ಮಣರಲ್ಲಿ ಮಾಂಸಾಹಾರಿ ಪದ್ಧತಿ ಇತ್ತು, ಇಲ್ಲ ಎಂಬ ಚರ್ಚೆ ಇದೆ. ಇತ್ತು ಎಂದು ಇಟ್ಟುಕೊಂಡರೂ ಕೂಡ ಅದನ್ನೆಲ್ಲ ನಿಲ್ಲಿಸಿದ್ದಾರೆ. ಮಾಂಸಾಹಾರ ಕೂಡದು, ಅದು ಬ್ರಾಹ್ಮಣರಲ್ಲಿ ಇರಬಾರದು ಎಂದು ಹಿಂದಿನವರು ಹಠ ತೊಟ್ಟು, ಅನೇಕ ಶತಮಾನಗಳ ಪ್ರಯತ್ನದಿಂದ ನಿಂತುಹೋಗಿದೆ” ಎಂದು ವಿಶ್ವೇಶತೀರ್ಥರು ಹೇಳುತ್ತಾರೆ.

“ಒಂದು ಅಭ್ಯಾಸವಾಗಿ…” ಎಂದು ರಂಗನಾಥ್‌ ಅವರು ಏನನ್ನೋ ಕೇಳಲು ಹೊರಡುತ್ತಾರೆ, ಅಷ್ಟರಲ್ಲಿ ಮಾತು ಮುಂದುವರಿಸುವ ಶ್ರೀಗಳು, “ನಿಂತು ಹೋಗಿದ್ದು, ಪುನಃ ಪ್ರಾರಂಭವಾಗಿದೆ. ಯಾಕೆಂದರೆ ಇವತ್ತಿನ ವಾತಾವರಣದಲ್ಲಿ ಬ್ರಾಹ್ಮಣರು ಕೂಡ ಗುಟ್ಟುಗುಟ್ಟಾಗಿ, ಕೆಲವರು ಬಹಿರಂಗವಾಗಿ ಮದ್ಯ ಮಾಂಸವನ್ನು ಸ್ವೀಕಾರ ಮಾಡುತ್ತಿದ್ದಾರೆ…. ಬ್ರಾಹ್ಮಣ್ಯವನ್ನು ಅವರು (ಬ್ರಾಹ್ಮಣರು) ಮತ್ತಷ್ಟು ಚೆನ್ನಾಗಿ ಉಳಿಸಿಕೊಳ್ಳಬೇಕು. ಇದು ಮೊದಲಿನಿಂದಲೂ ಇದೆ. ಆದರೆ ಶಿಥಿಲವಾಗುತ್ತಿದೆ. ಇದು ಶಿಥಿಲವಾಗಬಾರದು ಅಂತ ಎರಡು ಜವಾಬ್ದಾರಿ ಇದೆ. ಒಂದು: ಬ್ರಾಹ್ಮಣ್ಯದ ರಕ್ಷಣೆಯಾಗಬೇಕು. ಹಿಂದುತ್ವ ರಕ್ಷಣೆಯಾಗಬೇಕು. ಈ ಎರಡು ಜವಾಬ್ದಾರಿ…” ಎನ್ನುತ್ತಾರೆ.

“ಬ್ರಾಹ್ಮಣ್ಯಕ್ಕೂ ಹಿಂದುತ್ವಕ್ಕೂ ಸಂಬಂಧ ಇದೆಯಾ?” ಎಂದು ರಂಗನಾಥ್‌ ಮರುಪ್ರಶ್ನಿಸುತ್ತಾರೆ. “ಸಂಬಂಧ ಇಲ್ಲ. ಎರಡೂ ಬೇಕು. ಬ್ರಾಹ್ಮಣ್ಯ ಬ್ರಾಹ್ಮಣರಿಗೆ ಸೀಮಿತ, ಹಿಂದುತ್ವ ಎಲ್ಲರಿಗೂ ಸಂಬಂಧಪಟ್ಟಿರುವಂತಹದ್ದು” ಎಂದು ಶ್ರೀಗಳು ಪ್ರತಿಕ್ರಿಯಿಸುತ್ತಾರೆ.

ಶ್ರೀಗಳು ಬ್ರಾಹ್ಮಣವನ್ನು ಉಳಿಸಿಕೊಳ್ಳಬೇಕು ಎನ್ನುತ್ತಿರುವುದು, ಹಿಂದುತ್ವ ಹಾಗೂ ಬ್ರಾಹ್ಮಣ್ಯಕ್ಕೆ ಸಂಬಂಧ ಇಲ್ಲ ಎಂದು ಹೇಳುತ್ತಿರುವುದು ಹಾಗೂ ಮಾಂಸಾಹರದ ಕುರಿತು ಅವರು ಪ್ರಸ್ತಾಪಿಸಿರುವುದು ಈಗ ಚರ್ಚೆಯ ವಿಷಯವಾಗಿದೆ.

ಬರಹಗಾರ, ಚಿಂತಕ ನಾಗೇಗೌಡ ಕೀಲಾರ ಅವರು ಫೇಸ್‌ಬುಕ್‌ನಲ್ಲಿ ಮಾಡಿರುವ ಪೋಸ್ಟ್‌ ಅನ್ನು ಸುಮಾರು 300ಕ್ಕೂ ಹೆಚ್ಚು ಜನರು (ಈ ವರದಿ ಮಾಡುವ ವೇಳೆಗೆ) ಶೇರ್‌ ಮಾಡಿದ್ದಾರೆ. ಈ ಮೂಲಕ ವಿಡಿಯೊ ವೈರಲ್‌ ಆಗಿದೆ.


ಇದನ್ನೂ ಓದಿರಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಹಿಂದೂ ಧರ್ಮದಲ್ಲಿ ಜಾತಿ ಬೇಧ ಜಾಸ್ತಿ ಅಂದರೆ ಬೌದ್ಧ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲ ಎಲ್ಲಾರು ಸಮಾನರು ನಮೋ ಬುದ್ಧ ಜೈ ಬಸವಣ್ಣ ಜೈ ಭೀಮ್ ✍️✍️✍️✍️🇪🇺🏳️‍🌈

  2. Bhudda dhrama ondhu dharma Kintha, Hindha Dharmada ondu Bhaga ಎಂದು nambiddene. Lord Budda adhu bereye Dharma ಎಂದು helalulla. ಎಂದು nanu nambiddene. Lord Budda🙏🙏🙏

  3. ಮಾಂಸ ತಿನ್ನುವುದು ಮೃಗೀಯ ಗುಣ. ಅದನ್ನೂ ಸಾಧಿಸಿಕೊಳ್ಳಬೇಡಿ. ಈ ಮೃಗೀಯ ಗುಣ ನನ್ನಲ್ಲೂ ಇದೆ. ನನ್ನಲ್ಲಿದೆ ಎಂದ ಮಾತ್ರಕ್ಕೆ ಸರಿಯಲ್ಲ. ಸಾತ್ವಿಕ ಗುಣವಿರುವವರನ್ನು ದೂಷಿಸುವುದು ಸರಿಯಲ್ಲ. ಕಾಡಿನಲ್ಲಿ ಜಿಂಕೆ ಬಳಿ ಹೋಗುತ್ತೀರೊ ಇಲ್ಲ ಹುಲಿಯ ಬಳಿ ಹೋಗುತ್ತೀರೊ.

  4. ಮಂಗನಿಂದ ಮಾನವರಾದ ಯಾವ ಜಾತಿ,ಯಾವ ಧರ್ಮ ಇರಲಿಲ್ಲ.ಯುಗಗಳು ಕಳೆಯುತ್ತಾ ಜಾತಿ ಧರ್ಮ ಸೃಷ್ಟಿ ಆಯ್ತು.ಆಹಾರ ಪದ್ಧತಿ ಬದಲಾಯಿತು,ಇಲ್ಲಿ ಯಾವ ಜಾತಿ ಮೇಲೆ ಅಲ್ಲಾ,ಕೀಳು ಅಲ್ಲಾ.ಎಲ್ಲಾರು ಒಂದೆ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...