Homeಚಳವಳಿರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

ರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಅನ್ನದ ಋಣ ಆಯೋಜಿಸಿದ್ದ “ದೆಹಲಿ ರೈತ ಹೋರಾಟ- ಕನ್ನಡಿಗರ ಒಳನೋಟ” ವೆಬಿನಾರ್‌ನಲ್ಲಿ ಲೇಖಕರು, ಸಂಶೋಧಕರು ಆಗಿರುವ ಪುರುಷೋತ್ತಮ ಬಿಳಿಮಲೆ ಅವರು ಐತಿಹಾಸಿಕ ರೈತ ಹೋರಾಟವನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳನ್ನು ಪಟ್ಟಿ ಮಾಡಿದ್ದಾರೆ.

1. ಒಗ್ಗಟ್ಟು: ಸಂಯಕ್ತ ಕಿಸಾನ್ ಮೋರ್ಚಾವು ದೇಶದಾದ್ಯಂತ ಇರುವ ಸುಮಾರು 450 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಂದು ವೇದಿಕೆಗೆ ತಂದು ಒಗ್ಗಟ್ಟು ಪ್ರದರ್ಶಿಸಿದ್ದು.


2. ಹಣಕಾಸಿನ ನಿರ್ವಹಣೆಯಲ್ಲಿ ಪಾರದರ್ಶಕತೆ: ಆಧಾರ್ ಕಾರ್ಡ್, ಪಾನ್ ನಂಬರ್, ಇತ್ಯಾದಿ ಆಧಾರಗಳಿಲ್ಲದೆ ಯಾರಿಂದಲೂ ಹಣ ಸ್ವೀಕೃತಿಯಾಗಿಲ್ಲ. ಚಳವಳಿ ಕೇಂದ್ರಗಳಲ್ಲಿ ನಗದು ಸ್ವೀಕರಣೆ ಇಲ್ಲ. ರೈತರು ತಿಂಗಳಿಗೊಮ್ಮೆ ನೀಡಿದ ದೇಣಿಗೆಯಿಂದಲೇ ಖರ್ಚುಗಳನ್ನು ಭರಿಸಿಕೊಳ್ಳಲಾಗಿದೆ. ದಾನಿಗಳು ನೀಡಿದ ಧನಸಹಾಯ ನೇರವಾಗಿ ಬ್ಯಾಂಕಿಗೇ ರವಾನೆಯಾಗಿದೆ.


3. ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಮತ್ತು ದೆಹಲಿ ಗುರುದ್ವಾರ ಮೇನೇಜ್ ಮೆಂಟ್ ಕಮಿಟಿ ರೈತರಿಗೆ ನೀಡಿದ ನಿರಂತರ ಬೆಂಬಲ.


4. ಲಂಗರ್: ಸಿಖ್ ಪರಂಪರೆಯ ಎಲ್ಲರಿಗೂ ಉಚಿತ ಆಹಾರ ನೀಡಿಕೆ ಮತ್ತು ಸಾಮೂಹಿಕ ಭೋಜನದ ಪರಿಕಲ್ಪನೆಯು ಹೋರಾಟವನ್ನು ಕಳೆಗುಂದದಂತೆ ನೋಡಿಕೊಂಡದ್ದು.


5. ಉಚಿತ ಸೇವೆಗಳು: ವೈದ್ಯರು, ಪ್ಲಂಬರ್ ಗಳು, ಇಲೆಕ್ಟ್ರಿಕಲ್ ಕೆಲಸಗಾರರು – ಹೀಗೆ ದೈನಂದಿನ ಅಗತ್ಯದ ಎಲ್ಲ ಸೇವೆಗಳೂ ರೈತರಿಗೆ ಉಚಿತವಾಗಿ ದೊರೆಯಿತು. ಸೇವೆ ಸಲ್ಲಿಸಿದವರೂ ಯಾವುದೇ ಸಂಭಾವನೆ ಪಡೆದಿಲ್ಲ.


6. ಪರ್ಯಾಯ ಮಾಧ್ಯಮಗಳ ಸೃಷ್ಟಿ: ಮುಖ್ಯ ಮಾಧ್ಯಮಗಳನ್ನು ಹೊರಗಿಟ್ಟು ( ಅವರಿಗೆ ಪ್ರವೇಶವಿಲ್ಲ ಎಂಬ ಫಲಕ ಹಾಕಿಯೇ) ಪರ್ಯಾಯ ಮಾಧ್ಯಮಗಳನ್ನು ಸೃಷ್ಟಿಸಿಕೊಂಡು ಪರಿಣಾಮಕಾರೀ ಸಂವಹನವನ್ನು ಸಾಧಿಸಿದ್ದು. ಈ ಕೆಲಸದಲ್ಲಿ ಚಂಡೀಗಡ ಮತ್ತು ಅಮೃತಸರದ ಇಂಜಿನೀಯರಿಂಗ್ ಓದುವ ವಿದ್ಯಾರ್ಥಿಗಳು ಅಸಾಧ್ಯವಾದ್ದನ್ನೇ ಸಾಧ್ಯಮಾಡಿದರು.

ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ


7. ಕೋಮುವಾದದಿಂದ ದೂರ: ಭಾರತ ವಿಭಜನೆಗೆ ದೊಡ್ಡ ಮಟ್ಟದಲ್ಲಿ ಬಲಿಯಾದ ಪಂಜಾಬಿಗಳು ಮುಂದಿನ ದಿನಗಳಲ್ಲಿ ಕೋಮುವಾದ ತಮ್ಮೊಳಗೆ ಪ್ರವೇಶಿಸದ ಎಚ್ಚರವನ್ನು ತೋರಿಸಿದ್ದು. ಜೊತೆಗೆ ಮಹಿಳೆಯರು, ದಲಿತರು, ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಚಳವಳಿಯಲ್ಲಿ ತೊಡಗಿಸಿಕೊಳ್ಳುವಂತೆ ಸಂಘಟನೆಯನ್ನು ರೂಪಿಸಿದ್ದು.


8. ಸಕ್ರಿಯ ವಾತಾವರಣ: ಪ್ರತಿಭಟನೆಯ ಸ್ಥಳದಲ್ಲಿ ಸಂಗೀತ, ಉಪನ್ಯಾಸ, ಪ್ರವಚನ, ಜಿಮ್, ಕಲಾಶಿಬಿರ, ಗ್ರಂಥಾಲಯ ಇತ್ಯಾದಿಗಳು ಇರುವಂತೆ ಮಾಡಿ, ಹೋರಾಟದ ವಾತಾವರಣವನ್ನು ಜೀವಂತ ಇರಿಸಿದ್ದು.


9. ಒಳಗೊಳ್ಳುವಿಕೆಯ ಕೆಲಸಗಳು: ಪ್ರತಿಭಟನಕಾರರು ಸದಾ ಹೋರಾಟದೊಂದಿಗೇ ಇರುವಂತೆ ಮಾಡಲು ಟ್ರಾಕ್ಟರ್ ಮೆರವಣಿಗೆ, ಮಹಾಪಂಚಾಯತ್, ಕಿಸಾನ್ ಸಭಾ ಇತ್ಯಾದಿಗಳನ್ನು ನಿರಂತರವಾಗಿ ಆಯೋಜಿಸುತ್ತಾ ರೈತರು ಜಡವಾಗದಂತೆ ನೋಡಿಕೊಂಡದ್ದು.


10. ಹೋರಾಟವು ದೇಶ-ವಿದೇಶಗಳ ಗಮನಸೆಳೆಯುವಂತೆ ತಂತ್ರಗಳನ್ನು ರೂಪಿಸಿದ್ದು.


11. ವಿರೋಧಿಗಳು ಕಟ್ಟಿದ ಕಥನಗಳಿಗೆ ಪ್ರತಿಕ್ರಿಯೆ ನೀಡುತ್ತಾ ತಮ್ಮ ಸಮಯ ವ್ಯರ್ಥವಾಗದಂತೆ ನೋಡಿಕೊಂಡ ಹೋರಾಟಗಾರರು, ತಮ್ಮದೇ ಕಥನಗಳು ಜನರಿಗೆ ತಲುಪುವಂತೆ ಮಾಡಿದ್ದು.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬಿಳಿಮಲೆಯವರ ’ಕಾಗೆ ಮುಟ್ಟಿದ ನೀರು’ ಮೌಢ್ಯ ಕಾನನಕೆ ಬೆಂಕಿ ಹಚ್ಚಿ …

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತ ಚಳುವಳಿಯ ಬಗೆಗಿನ ಬಿಳಿಮಲೆಯವರ ಲೇಖನ ಅತ್ಯುಪಯುಕ್ತ ವಿಶ್ಲೇಷಣೆ!ಲಂಗುಲಗಾಮು ಇಲ್ಲದೆ, ಸಾರ್ವಜನಿಕ ಎನಿಸುವ ಕನಿಷ್ಠ ನಾಚಿಕೆಯೂ ಇಲ್ಲದೆ, ಸಂಸತ್ತಿನ ಭೀಮ ಬಲ ಉಪಯೋಗಿಸಿ ಕಾರ್ಯರೂಪಕ್ಕೆ ತರಲೆತ್ನಿಸಿದ ಗುಪ್ತ ಮತ್ತು ಸಮಾಜ ವಿರೋಧಿ ಕಾರ್ಯಸೂಚಿಯನ್ನು ಸಂಘಟಿತವಲ್ಲದ ಜನಸಮೂಹ ವಿರೋಧಿಸಿ ಗೆಲ್ಲುವುದು ಕಷ್ಟಸಾಧ್ಯ! ಅದು, ವಿರೋಧ ಪಕ್ಷಗಳ ಅಸಹಾಯಕ ಸ್ಥಿತಿ; ಅದು, ಧ್ವನಿ ಇಲ್ಲದವರ ಧ್ವನಿ ಆಗಿರಬೇಕಿದ್ದ ಮಾಧ್ಯಮಗಳ ಎಗ್ಗಿಲ್ಲದ ಬಫೂನ್ಗಿರಿ ವಾತಾವರಣ; ಅಂತಹ ಸಂದರ್ಭದಲ್ಲಿ, ರೈತಾಂದೋಲನ ಸಾರ್ವಜನಿಕ ಸದಭಿಪ್ರಾಯ ಕ್ರೋಡೀಕರಿಸಿಕೊಂಡು, ಬಲಪಡೆದು, ಹೋರಾಟವನ್ನು ಮುನ್ನಡೆಸಲು ಸಹಾಯ ಮಾಡಿದ್ದು, ರೈತ ನಾಯಕರ ಮುಂದಾಲೋಚನೆ, ಸಮಯಪ್ರಜ್ಞೆ, ಕೈಚೆಲ್ಲದ ಪ್ರಯತ್ನ ಮತ್ತು, ಅದ್ಭುತ ಸಂವಹನ ಸಾದ್ಯವಾಗಿಸಿದ ಇಂಟರ್ನೆಟ್!!

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...