Homeಚಳವಳಿರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

ರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಅನ್ನದ ಋಣ ಆಯೋಜಿಸಿದ್ದ “ದೆಹಲಿ ರೈತ ಹೋರಾಟ- ಕನ್ನಡಿಗರ ಒಳನೋಟ” ವೆಬಿನಾರ್‌ನಲ್ಲಿ ಲೇಖಕರು, ಸಂಶೋಧಕರು ಆಗಿರುವ ಪುರುಷೋತ್ತಮ ಬಿಳಿಮಲೆ ಅವರು ಐತಿಹಾಸಿಕ ರೈತ ಹೋರಾಟವನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳನ್ನು ಪಟ್ಟಿ ಮಾಡಿದ್ದಾರೆ.

1. ಒಗ್ಗಟ್ಟು: ಸಂಯಕ್ತ ಕಿಸಾನ್ ಮೋರ್ಚಾವು ದೇಶದಾದ್ಯಂತ ಇರುವ ಸುಮಾರು 450 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಂದು ವೇದಿಕೆಗೆ ತಂದು ಒಗ್ಗಟ್ಟು ಪ್ರದರ್ಶಿಸಿದ್ದು.


2. ಹಣಕಾಸಿನ ನಿರ್ವಹಣೆಯಲ್ಲಿ ಪಾರದರ್ಶಕತೆ: ಆಧಾರ್ ಕಾರ್ಡ್, ಪಾನ್ ನಂಬರ್, ಇತ್ಯಾದಿ ಆಧಾರಗಳಿಲ್ಲದೆ ಯಾರಿಂದಲೂ ಹಣ ಸ್ವೀಕೃತಿಯಾಗಿಲ್ಲ. ಚಳವಳಿ ಕೇಂದ್ರಗಳಲ್ಲಿ ನಗದು ಸ್ವೀಕರಣೆ ಇಲ್ಲ. ರೈತರು ತಿಂಗಳಿಗೊಮ್ಮೆ ನೀಡಿದ ದೇಣಿಗೆಯಿಂದಲೇ ಖರ್ಚುಗಳನ್ನು ಭರಿಸಿಕೊಳ್ಳಲಾಗಿದೆ. ದಾನಿಗಳು ನೀಡಿದ ಧನಸಹಾಯ ನೇರವಾಗಿ ಬ್ಯಾಂಕಿಗೇ ರವಾನೆಯಾಗಿದೆ.


3. ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಮತ್ತು ದೆಹಲಿ ಗುರುದ್ವಾರ ಮೇನೇಜ್ ಮೆಂಟ್ ಕಮಿಟಿ ರೈತರಿಗೆ ನೀಡಿದ ನಿರಂತರ ಬೆಂಬಲ.


4. ಲಂಗರ್: ಸಿಖ್ ಪರಂಪರೆಯ ಎಲ್ಲರಿಗೂ ಉಚಿತ ಆಹಾರ ನೀಡಿಕೆ ಮತ್ತು ಸಾಮೂಹಿಕ ಭೋಜನದ ಪರಿಕಲ್ಪನೆಯು ಹೋರಾಟವನ್ನು ಕಳೆಗುಂದದಂತೆ ನೋಡಿಕೊಂಡದ್ದು.


5. ಉಚಿತ ಸೇವೆಗಳು: ವೈದ್ಯರು, ಪ್ಲಂಬರ್ ಗಳು, ಇಲೆಕ್ಟ್ರಿಕಲ್ ಕೆಲಸಗಾರರು – ಹೀಗೆ ದೈನಂದಿನ ಅಗತ್ಯದ ಎಲ್ಲ ಸೇವೆಗಳೂ ರೈತರಿಗೆ ಉಚಿತವಾಗಿ ದೊರೆಯಿತು. ಸೇವೆ ಸಲ್ಲಿಸಿದವರೂ ಯಾವುದೇ ಸಂಭಾವನೆ ಪಡೆದಿಲ್ಲ.


6. ಪರ್ಯಾಯ ಮಾಧ್ಯಮಗಳ ಸೃಷ್ಟಿ: ಮುಖ್ಯ ಮಾಧ್ಯಮಗಳನ್ನು ಹೊರಗಿಟ್ಟು ( ಅವರಿಗೆ ಪ್ರವೇಶವಿಲ್ಲ ಎಂಬ ಫಲಕ ಹಾಕಿಯೇ) ಪರ್ಯಾಯ ಮಾಧ್ಯಮಗಳನ್ನು ಸೃಷ್ಟಿಸಿಕೊಂಡು ಪರಿಣಾಮಕಾರೀ ಸಂವಹನವನ್ನು ಸಾಧಿಸಿದ್ದು. ಈ ಕೆಲಸದಲ್ಲಿ ಚಂಡೀಗಡ ಮತ್ತು ಅಮೃತಸರದ ಇಂಜಿನೀಯರಿಂಗ್ ಓದುವ ವಿದ್ಯಾರ್ಥಿಗಳು ಅಸಾಧ್ಯವಾದ್ದನ್ನೇ ಸಾಧ್ಯಮಾಡಿದರು.

ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ


7. ಕೋಮುವಾದದಿಂದ ದೂರ: ಭಾರತ ವಿಭಜನೆಗೆ ದೊಡ್ಡ ಮಟ್ಟದಲ್ಲಿ ಬಲಿಯಾದ ಪಂಜಾಬಿಗಳು ಮುಂದಿನ ದಿನಗಳಲ್ಲಿ ಕೋಮುವಾದ ತಮ್ಮೊಳಗೆ ಪ್ರವೇಶಿಸದ ಎಚ್ಚರವನ್ನು ತೋರಿಸಿದ್ದು. ಜೊತೆಗೆ ಮಹಿಳೆಯರು, ದಲಿತರು, ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಚಳವಳಿಯಲ್ಲಿ ತೊಡಗಿಸಿಕೊಳ್ಳುವಂತೆ ಸಂಘಟನೆಯನ್ನು ರೂಪಿಸಿದ್ದು.


8. ಸಕ್ರಿಯ ವಾತಾವರಣ: ಪ್ರತಿಭಟನೆಯ ಸ್ಥಳದಲ್ಲಿ ಸಂಗೀತ, ಉಪನ್ಯಾಸ, ಪ್ರವಚನ, ಜಿಮ್, ಕಲಾಶಿಬಿರ, ಗ್ರಂಥಾಲಯ ಇತ್ಯಾದಿಗಳು ಇರುವಂತೆ ಮಾಡಿ, ಹೋರಾಟದ ವಾತಾವರಣವನ್ನು ಜೀವಂತ ಇರಿಸಿದ್ದು.


9. ಒಳಗೊಳ್ಳುವಿಕೆಯ ಕೆಲಸಗಳು: ಪ್ರತಿಭಟನಕಾರರು ಸದಾ ಹೋರಾಟದೊಂದಿಗೇ ಇರುವಂತೆ ಮಾಡಲು ಟ್ರಾಕ್ಟರ್ ಮೆರವಣಿಗೆ, ಮಹಾಪಂಚಾಯತ್, ಕಿಸಾನ್ ಸಭಾ ಇತ್ಯಾದಿಗಳನ್ನು ನಿರಂತರವಾಗಿ ಆಯೋಜಿಸುತ್ತಾ ರೈತರು ಜಡವಾಗದಂತೆ ನೋಡಿಕೊಂಡದ್ದು.


10. ಹೋರಾಟವು ದೇಶ-ವಿದೇಶಗಳ ಗಮನಸೆಳೆಯುವಂತೆ ತಂತ್ರಗಳನ್ನು ರೂಪಿಸಿದ್ದು.


11. ವಿರೋಧಿಗಳು ಕಟ್ಟಿದ ಕಥನಗಳಿಗೆ ಪ್ರತಿಕ್ರಿಯೆ ನೀಡುತ್ತಾ ತಮ್ಮ ಸಮಯ ವ್ಯರ್ಥವಾಗದಂತೆ ನೋಡಿಕೊಂಡ ಹೋರಾಟಗಾರರು, ತಮ್ಮದೇ ಕಥನಗಳು ಜನರಿಗೆ ತಲುಪುವಂತೆ ಮಾಡಿದ್ದು.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬಿಳಿಮಲೆಯವರ ’ಕಾಗೆ ಮುಟ್ಟಿದ ನೀರು’ ಮೌಢ್ಯ ಕಾನನಕೆ ಬೆಂಕಿ ಹಚ್ಚಿ …

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತ ಚಳುವಳಿಯ ಬಗೆಗಿನ ಬಿಳಿಮಲೆಯವರ ಲೇಖನ ಅತ್ಯುಪಯುಕ್ತ ವಿಶ್ಲೇಷಣೆ!ಲಂಗುಲಗಾಮು ಇಲ್ಲದೆ, ಸಾರ್ವಜನಿಕ ಎನಿಸುವ ಕನಿಷ್ಠ ನಾಚಿಕೆಯೂ ಇಲ್ಲದೆ, ಸಂಸತ್ತಿನ ಭೀಮ ಬಲ ಉಪಯೋಗಿಸಿ ಕಾರ್ಯರೂಪಕ್ಕೆ ತರಲೆತ್ನಿಸಿದ ಗುಪ್ತ ಮತ್ತು ಸಮಾಜ ವಿರೋಧಿ ಕಾರ್ಯಸೂಚಿಯನ್ನು ಸಂಘಟಿತವಲ್ಲದ ಜನಸಮೂಹ ವಿರೋಧಿಸಿ ಗೆಲ್ಲುವುದು ಕಷ್ಟಸಾಧ್ಯ! ಅದು, ವಿರೋಧ ಪಕ್ಷಗಳ ಅಸಹಾಯಕ ಸ್ಥಿತಿ; ಅದು, ಧ್ವನಿ ಇಲ್ಲದವರ ಧ್ವನಿ ಆಗಿರಬೇಕಿದ್ದ ಮಾಧ್ಯಮಗಳ ಎಗ್ಗಿಲ್ಲದ ಬಫೂನ್ಗಿರಿ ವಾತಾವರಣ; ಅಂತಹ ಸಂದರ್ಭದಲ್ಲಿ, ರೈತಾಂದೋಲನ ಸಾರ್ವಜನಿಕ ಸದಭಿಪ್ರಾಯ ಕ್ರೋಡೀಕರಿಸಿಕೊಂಡು, ಬಲಪಡೆದು, ಹೋರಾಟವನ್ನು ಮುನ್ನಡೆಸಲು ಸಹಾಯ ಮಾಡಿದ್ದು, ರೈತ ನಾಯಕರ ಮುಂದಾಲೋಚನೆ, ಸಮಯಪ್ರಜ್ಞೆ, ಕೈಚೆಲ್ಲದ ಪ್ರಯತ್ನ ಮತ್ತು, ಅದ್ಭುತ ಸಂವಹನ ಸಾದ್ಯವಾಗಿಸಿದ ಇಂಟರ್ನೆಟ್!!

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...