Homeಚಳವಳಿರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

ರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಅನ್ನದ ಋಣ ಆಯೋಜಿಸಿದ್ದ “ದೆಹಲಿ ರೈತ ಹೋರಾಟ- ಕನ್ನಡಿಗರ ಒಳನೋಟ” ವೆಬಿನಾರ್‌ನಲ್ಲಿ ಲೇಖಕರು, ಸಂಶೋಧಕರು ಆಗಿರುವ ಪುರುಷೋತ್ತಮ ಬಿಳಿಮಲೆ ಅವರು ಐತಿಹಾಸಿಕ ರೈತ ಹೋರಾಟವನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳನ್ನು ಪಟ್ಟಿ ಮಾಡಿದ್ದಾರೆ.

1. ಒಗ್ಗಟ್ಟು: ಸಂಯಕ್ತ ಕಿಸಾನ್ ಮೋರ್ಚಾವು ದೇಶದಾದ್ಯಂತ ಇರುವ ಸುಮಾರು 450 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಂದು ವೇದಿಕೆಗೆ ತಂದು ಒಗ್ಗಟ್ಟು ಪ್ರದರ್ಶಿಸಿದ್ದು.


2. ಹಣಕಾಸಿನ ನಿರ್ವಹಣೆಯಲ್ಲಿ ಪಾರದರ್ಶಕತೆ: ಆಧಾರ್ ಕಾರ್ಡ್, ಪಾನ್ ನಂಬರ್, ಇತ್ಯಾದಿ ಆಧಾರಗಳಿಲ್ಲದೆ ಯಾರಿಂದಲೂ ಹಣ ಸ್ವೀಕೃತಿಯಾಗಿಲ್ಲ. ಚಳವಳಿ ಕೇಂದ್ರಗಳಲ್ಲಿ ನಗದು ಸ್ವೀಕರಣೆ ಇಲ್ಲ. ರೈತರು ತಿಂಗಳಿಗೊಮ್ಮೆ ನೀಡಿದ ದೇಣಿಗೆಯಿಂದಲೇ ಖರ್ಚುಗಳನ್ನು ಭರಿಸಿಕೊಳ್ಳಲಾಗಿದೆ. ದಾನಿಗಳು ನೀಡಿದ ಧನಸಹಾಯ ನೇರವಾಗಿ ಬ್ಯಾಂಕಿಗೇ ರವಾನೆಯಾಗಿದೆ.


3. ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಮತ್ತು ದೆಹಲಿ ಗುರುದ್ವಾರ ಮೇನೇಜ್ ಮೆಂಟ್ ಕಮಿಟಿ ರೈತರಿಗೆ ನೀಡಿದ ನಿರಂತರ ಬೆಂಬಲ.


4. ಲಂಗರ್: ಸಿಖ್ ಪರಂಪರೆಯ ಎಲ್ಲರಿಗೂ ಉಚಿತ ಆಹಾರ ನೀಡಿಕೆ ಮತ್ತು ಸಾಮೂಹಿಕ ಭೋಜನದ ಪರಿಕಲ್ಪನೆಯು ಹೋರಾಟವನ್ನು ಕಳೆಗುಂದದಂತೆ ನೋಡಿಕೊಂಡದ್ದು.


5. ಉಚಿತ ಸೇವೆಗಳು: ವೈದ್ಯರು, ಪ್ಲಂಬರ್ ಗಳು, ಇಲೆಕ್ಟ್ರಿಕಲ್ ಕೆಲಸಗಾರರು – ಹೀಗೆ ದೈನಂದಿನ ಅಗತ್ಯದ ಎಲ್ಲ ಸೇವೆಗಳೂ ರೈತರಿಗೆ ಉಚಿತವಾಗಿ ದೊರೆಯಿತು. ಸೇವೆ ಸಲ್ಲಿಸಿದವರೂ ಯಾವುದೇ ಸಂಭಾವನೆ ಪಡೆದಿಲ್ಲ.


6. ಪರ್ಯಾಯ ಮಾಧ್ಯಮಗಳ ಸೃಷ್ಟಿ: ಮುಖ್ಯ ಮಾಧ್ಯಮಗಳನ್ನು ಹೊರಗಿಟ್ಟು ( ಅವರಿಗೆ ಪ್ರವೇಶವಿಲ್ಲ ಎಂಬ ಫಲಕ ಹಾಕಿಯೇ) ಪರ್ಯಾಯ ಮಾಧ್ಯಮಗಳನ್ನು ಸೃಷ್ಟಿಸಿಕೊಂಡು ಪರಿಣಾಮಕಾರೀ ಸಂವಹನವನ್ನು ಸಾಧಿಸಿದ್ದು. ಈ ಕೆಲಸದಲ್ಲಿ ಚಂಡೀಗಡ ಮತ್ತು ಅಮೃತಸರದ ಇಂಜಿನೀಯರಿಂಗ್ ಓದುವ ವಿದ್ಯಾರ್ಥಿಗಳು ಅಸಾಧ್ಯವಾದ್ದನ್ನೇ ಸಾಧ್ಯಮಾಡಿದರು.

ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ


7. ಕೋಮುವಾದದಿಂದ ದೂರ: ಭಾರತ ವಿಭಜನೆಗೆ ದೊಡ್ಡ ಮಟ್ಟದಲ್ಲಿ ಬಲಿಯಾದ ಪಂಜಾಬಿಗಳು ಮುಂದಿನ ದಿನಗಳಲ್ಲಿ ಕೋಮುವಾದ ತಮ್ಮೊಳಗೆ ಪ್ರವೇಶಿಸದ ಎಚ್ಚರವನ್ನು ತೋರಿಸಿದ್ದು. ಜೊತೆಗೆ ಮಹಿಳೆಯರು, ದಲಿತರು, ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಚಳವಳಿಯಲ್ಲಿ ತೊಡಗಿಸಿಕೊಳ್ಳುವಂತೆ ಸಂಘಟನೆಯನ್ನು ರೂಪಿಸಿದ್ದು.


8. ಸಕ್ರಿಯ ವಾತಾವರಣ: ಪ್ರತಿಭಟನೆಯ ಸ್ಥಳದಲ್ಲಿ ಸಂಗೀತ, ಉಪನ್ಯಾಸ, ಪ್ರವಚನ, ಜಿಮ್, ಕಲಾಶಿಬಿರ, ಗ್ರಂಥಾಲಯ ಇತ್ಯಾದಿಗಳು ಇರುವಂತೆ ಮಾಡಿ, ಹೋರಾಟದ ವಾತಾವರಣವನ್ನು ಜೀವಂತ ಇರಿಸಿದ್ದು.


9. ಒಳಗೊಳ್ಳುವಿಕೆಯ ಕೆಲಸಗಳು: ಪ್ರತಿಭಟನಕಾರರು ಸದಾ ಹೋರಾಟದೊಂದಿಗೇ ಇರುವಂತೆ ಮಾಡಲು ಟ್ರಾಕ್ಟರ್ ಮೆರವಣಿಗೆ, ಮಹಾಪಂಚಾಯತ್, ಕಿಸಾನ್ ಸಭಾ ಇತ್ಯಾದಿಗಳನ್ನು ನಿರಂತರವಾಗಿ ಆಯೋಜಿಸುತ್ತಾ ರೈತರು ಜಡವಾಗದಂತೆ ನೋಡಿಕೊಂಡದ್ದು.


10. ಹೋರಾಟವು ದೇಶ-ವಿದೇಶಗಳ ಗಮನಸೆಳೆಯುವಂತೆ ತಂತ್ರಗಳನ್ನು ರೂಪಿಸಿದ್ದು.


11. ವಿರೋಧಿಗಳು ಕಟ್ಟಿದ ಕಥನಗಳಿಗೆ ಪ್ರತಿಕ್ರಿಯೆ ನೀಡುತ್ತಾ ತಮ್ಮ ಸಮಯ ವ್ಯರ್ಥವಾಗದಂತೆ ನೋಡಿಕೊಂಡ ಹೋರಾಟಗಾರರು, ತಮ್ಮದೇ ಕಥನಗಳು ಜನರಿಗೆ ತಲುಪುವಂತೆ ಮಾಡಿದ್ದು.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬಿಳಿಮಲೆಯವರ ’ಕಾಗೆ ಮುಟ್ಟಿದ ನೀರು’ ಮೌಢ್ಯ ಕಾನನಕೆ ಬೆಂಕಿ ಹಚ್ಚಿ …

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತ ಚಳುವಳಿಯ ಬಗೆಗಿನ ಬಿಳಿಮಲೆಯವರ ಲೇಖನ ಅತ್ಯುಪಯುಕ್ತ ವಿಶ್ಲೇಷಣೆ!ಲಂಗುಲಗಾಮು ಇಲ್ಲದೆ, ಸಾರ್ವಜನಿಕ ಎನಿಸುವ ಕನಿಷ್ಠ ನಾಚಿಕೆಯೂ ಇಲ್ಲದೆ, ಸಂಸತ್ತಿನ ಭೀಮ ಬಲ ಉಪಯೋಗಿಸಿ ಕಾರ್ಯರೂಪಕ್ಕೆ ತರಲೆತ್ನಿಸಿದ ಗುಪ್ತ ಮತ್ತು ಸಮಾಜ ವಿರೋಧಿ ಕಾರ್ಯಸೂಚಿಯನ್ನು ಸಂಘಟಿತವಲ್ಲದ ಜನಸಮೂಹ ವಿರೋಧಿಸಿ ಗೆಲ್ಲುವುದು ಕಷ್ಟಸಾಧ್ಯ! ಅದು, ವಿರೋಧ ಪಕ್ಷಗಳ ಅಸಹಾಯಕ ಸ್ಥಿತಿ; ಅದು, ಧ್ವನಿ ಇಲ್ಲದವರ ಧ್ವನಿ ಆಗಿರಬೇಕಿದ್ದ ಮಾಧ್ಯಮಗಳ ಎಗ್ಗಿಲ್ಲದ ಬಫೂನ್ಗಿರಿ ವಾತಾವರಣ; ಅಂತಹ ಸಂದರ್ಭದಲ್ಲಿ, ರೈತಾಂದೋಲನ ಸಾರ್ವಜನಿಕ ಸದಭಿಪ್ರಾಯ ಕ್ರೋಡೀಕರಿಸಿಕೊಂಡು, ಬಲಪಡೆದು, ಹೋರಾಟವನ್ನು ಮುನ್ನಡೆಸಲು ಸಹಾಯ ಮಾಡಿದ್ದು, ರೈತ ನಾಯಕರ ಮುಂದಾಲೋಚನೆ, ಸಮಯಪ್ರಜ್ಞೆ, ಕೈಚೆಲ್ಲದ ಪ್ರಯತ್ನ ಮತ್ತು, ಅದ್ಭುತ ಸಂವಹನ ಸಾದ್ಯವಾಗಿಸಿದ ಇಂಟರ್ನೆಟ್!!

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...