Homeಮುಖಪುಟಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

- Advertisement -
- Advertisement -

ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವೆಂದು ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.

ಹೊಸ ಅಬಕಾರಿ ನೀತಿಯ ಅಡಿಯಲ್ಲಿ ರಾಜ್ಯದಲ್ಲಿ ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವಾಗಿ ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮಹುವಾ ಮಾರಾಟ ಅಥವಾ ಸೇವನೆಯು ಇಲ್ಲಿಯವರೆಗೆ ಕಾನೂನುಬಾಹಿರವಾಗಿತ್ತು!

“ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸುತ್ತಿದೆ, ಅದರ ಅಡಿಯಲ್ಲಿ ಯಾರಾದರೂ ಸಾಂಪ್ರದಾಯಿಕ ರೀತಿಯಲ್ಲಿ ಮಹುವಾದಿಂದ ಮದ್ಯವನ್ನು ತಯಾರಿಸಿದರೆ, ಅದು ಇನ್ನು ಮುಂದೆ ಅಕ್ರಮವಾಗುವುದಿಲ್ಲ” ಎಂದು ಚೌಹಾಣ್ ಹೇಳಿದ್ದಾರೆ. ಇದನ್ನು “ಹೆರಿಟೇಜ್ ಮದ್ಯ” (ಪಾರಂಪರಿಕ ಮದ್ಯ) ಎಂಬ ಹೆಸರಿನಲ್ಲಿ ಮದ್ಯದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುವುದು. ಈ ನೀತಿಯಿಂದಾಗಿ ಮಹುವಾ ಮದ್ಯವನ್ನು ತಯಾರಿಸುವ ಬುಡಕಟ್ಟು ಜನರಿಗೆ ಉದ್ಯೋಗ ಮತ್ತು ಆದಾಯ ದೊರಕಲಿದೆ ಎಂದು ಪ್ರತಿಪಾದಿಸಲಾಗಿದೆ.

ಬಿಜೆಪಿ ಸರ್ಕಾರದ ನಡೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. “ಭಾರತೀಯ ಜನತಾ ಪಾರ್ಟಿಯ ನೈತಿಕ ಅಧಃಪತನ” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಕಾಂಗ್ರೆಸ್ ವಕ್ತಾರ ಕೆ.ಕೆ.ಮಿಶ್ರಾ ಪ್ರತಿಕ್ರಿಯಿಸಿ, ‘ಕಚ್ಚಿ ಶರಬ್ (ದೇಸಿ ಮದ್ಯ) ಅನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಯೋಚಿಸುತ್ತಿರುವುದು ದುರದೃಷ್ಟಕರ’ ಎಂದಿದ್ದಾರೆ.

ಇದರ ನಡುವೆ, ಸಮುದಾಯ ಅರಣ್ಯದ ಹಕ್ಕನ್ನು ಆದಿವಾಸಿಗಳನ್ನು ಹೊಂದಿದ್ದಾರೆ. ಅಲ್ಲಿ ಅವರು ಮರಗಳನ್ನು ನೆಡಬಹುದು, ಮರ ಮತ್ತು ಹಣ್ಣುಗಳನ್ನು ಏನು ಮಾಡಬೇಕೆಂದು ನಿರ್ಧರಿಸಬಹುದು ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಬುಡಕಟ್ಟು ಸಮುದಾಯದ ವ್ಯಕ್ತಿಗಳ ಮೇಲಿರುವ ಸುಳ್ಳು ಹಾಗೂ ಸಣ್ಣ ಪ್ರಮಾಣದ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಚೌಹಾಣ್ ಘೋಷಿಸಿದ್ದಾರೆ. ಟೆಂಡು ಎಲೆ ಮಾರಾಟ ಮಾಡುವ ಹಕ್ಕನ್ನು ಬುಡಕಟ್ಟು ಜನಾಂಗದವರಿಗೂ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. ಟೆಂಡು ಎಲೆಗಳನ್ನು ಬೀಡಿ ಸುತ್ತಲು ಬಳಸಲಾಗುತ್ತದೆ.

ಬುಡಕಟ್ಟು ಸಮುದಾಯಗಳಲ್ಲಿ ಕುಡಿತ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ ಎಂಬುದು ಎಲ್ಲ ಸಾಮಾಜಿಕ ಚಿಂತಕರ ಆತಂಕ. ಗೌರವಯುತ ಹಾಗೂ ಬುಡಕಟ್ಟು ಪರಂಪರೆಯನ್ನೇ ಪ್ರತಿನಿಧಿಸುವ ಪರ್ಯಾಯ ಉದ್ಯೋಗಗಳು ಸಾಕಷ್ಟಿದ್ದರೂ, ಕುಡಿತವನ್ನು ಪ್ರಚೋದಿಸುವ ಉದ್ಯೋಗದತ್ತ ಈ ಸಮುದಾಯವನ್ನು ತಳ್ಳುವುದು ಎಷ್ಟು ಸರಿ ಎಂಬುದು ಚರ್ಚೆಯಾಗುತ್ತಿದೆ.

ಸರ್ಕಾರದ ನಿರ್ಧಾರವನ್ನು ಅನೇಕರು ಟೀಕಿಸಿದ್ದಾರೆ. ‘ಪ್ರಾಚೀನ ಧೂಮಪಾನ’ ಎಂದು ಹೆಸರಿಸಿ ಗಾಂಜಾವನ್ನು ಕಾನೂನುಬದ್ಧಗೊಳಿಸಿ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬಿಜೆಪಿ ನಂತರ ಕಾಂಗ್ರೆಸ್ ಸರದಿ: ಇಂದು ಟಿಎಂಸಿ ಸೇರಲಿರುವ ಬಿಹಾರ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...