Homeಮುಖಪುಟಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

- Advertisement -
- Advertisement -

ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವೆಂದು ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.

ಹೊಸ ಅಬಕಾರಿ ನೀತಿಯ ಅಡಿಯಲ್ಲಿ ರಾಜ್ಯದಲ್ಲಿ ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವಾಗಿ ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮಹುವಾ ಮಾರಾಟ ಅಥವಾ ಸೇವನೆಯು ಇಲ್ಲಿಯವರೆಗೆ ಕಾನೂನುಬಾಹಿರವಾಗಿತ್ತು!

“ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸುತ್ತಿದೆ, ಅದರ ಅಡಿಯಲ್ಲಿ ಯಾರಾದರೂ ಸಾಂಪ್ರದಾಯಿಕ ರೀತಿಯಲ್ಲಿ ಮಹುವಾದಿಂದ ಮದ್ಯವನ್ನು ತಯಾರಿಸಿದರೆ, ಅದು ಇನ್ನು ಮುಂದೆ ಅಕ್ರಮವಾಗುವುದಿಲ್ಲ” ಎಂದು ಚೌಹಾಣ್ ಹೇಳಿದ್ದಾರೆ. ಇದನ್ನು “ಹೆರಿಟೇಜ್ ಮದ್ಯ” (ಪಾರಂಪರಿಕ ಮದ್ಯ) ಎಂಬ ಹೆಸರಿನಲ್ಲಿ ಮದ್ಯದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುವುದು. ಈ ನೀತಿಯಿಂದಾಗಿ ಮಹುವಾ ಮದ್ಯವನ್ನು ತಯಾರಿಸುವ ಬುಡಕಟ್ಟು ಜನರಿಗೆ ಉದ್ಯೋಗ ಮತ್ತು ಆದಾಯ ದೊರಕಲಿದೆ ಎಂದು ಪ್ರತಿಪಾದಿಸಲಾಗಿದೆ.

ಬಿಜೆಪಿ ಸರ್ಕಾರದ ನಡೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. “ಭಾರತೀಯ ಜನತಾ ಪಾರ್ಟಿಯ ನೈತಿಕ ಅಧಃಪತನ” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಕಾಂಗ್ರೆಸ್ ವಕ್ತಾರ ಕೆ.ಕೆ.ಮಿಶ್ರಾ ಪ್ರತಿಕ್ರಿಯಿಸಿ, ‘ಕಚ್ಚಿ ಶರಬ್ (ದೇಸಿ ಮದ್ಯ) ಅನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಯೋಚಿಸುತ್ತಿರುವುದು ದುರದೃಷ್ಟಕರ’ ಎಂದಿದ್ದಾರೆ.

ಇದರ ನಡುವೆ, ಸಮುದಾಯ ಅರಣ್ಯದ ಹಕ್ಕನ್ನು ಆದಿವಾಸಿಗಳನ್ನು ಹೊಂದಿದ್ದಾರೆ. ಅಲ್ಲಿ ಅವರು ಮರಗಳನ್ನು ನೆಡಬಹುದು, ಮರ ಮತ್ತು ಹಣ್ಣುಗಳನ್ನು ಏನು ಮಾಡಬೇಕೆಂದು ನಿರ್ಧರಿಸಬಹುದು ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಬುಡಕಟ್ಟು ಸಮುದಾಯದ ವ್ಯಕ್ತಿಗಳ ಮೇಲಿರುವ ಸುಳ್ಳು ಹಾಗೂ ಸಣ್ಣ ಪ್ರಮಾಣದ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಚೌಹಾಣ್ ಘೋಷಿಸಿದ್ದಾರೆ. ಟೆಂಡು ಎಲೆ ಮಾರಾಟ ಮಾಡುವ ಹಕ್ಕನ್ನು ಬುಡಕಟ್ಟು ಜನಾಂಗದವರಿಗೂ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. ಟೆಂಡು ಎಲೆಗಳನ್ನು ಬೀಡಿ ಸುತ್ತಲು ಬಳಸಲಾಗುತ್ತದೆ.

ಬುಡಕಟ್ಟು ಸಮುದಾಯಗಳಲ್ಲಿ ಕುಡಿತ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ ಎಂಬುದು ಎಲ್ಲ ಸಾಮಾಜಿಕ ಚಿಂತಕರ ಆತಂಕ. ಗೌರವಯುತ ಹಾಗೂ ಬುಡಕಟ್ಟು ಪರಂಪರೆಯನ್ನೇ ಪ್ರತಿನಿಧಿಸುವ ಪರ್ಯಾಯ ಉದ್ಯೋಗಗಳು ಸಾಕಷ್ಟಿದ್ದರೂ, ಕುಡಿತವನ್ನು ಪ್ರಚೋದಿಸುವ ಉದ್ಯೋಗದತ್ತ ಈ ಸಮುದಾಯವನ್ನು ತಳ್ಳುವುದು ಎಷ್ಟು ಸರಿ ಎಂಬುದು ಚರ್ಚೆಯಾಗುತ್ತಿದೆ.

ಸರ್ಕಾರದ ನಿರ್ಧಾರವನ್ನು ಅನೇಕರು ಟೀಕಿಸಿದ್ದಾರೆ. ‘ಪ್ರಾಚೀನ ಧೂಮಪಾನ’ ಎಂದು ಹೆಸರಿಸಿ ಗಾಂಜಾವನ್ನು ಕಾನೂನುಬದ್ಧಗೊಳಿಸಿ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬಿಜೆಪಿ ನಂತರ ಕಾಂಗ್ರೆಸ್ ಸರದಿ: ಇಂದು ಟಿಎಂಸಿ ಸೇರಲಿರುವ ಬಿಹಾರ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...