Homeಮುಖಪುಟಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

- Advertisement -
- Advertisement -

ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವೆಂದು ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.

ಹೊಸ ಅಬಕಾರಿ ನೀತಿಯ ಅಡಿಯಲ್ಲಿ ರಾಜ್ಯದಲ್ಲಿ ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವಾಗಿ ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮಹುವಾ ಮಾರಾಟ ಅಥವಾ ಸೇವನೆಯು ಇಲ್ಲಿಯವರೆಗೆ ಕಾನೂನುಬಾಹಿರವಾಗಿತ್ತು!

“ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸುತ್ತಿದೆ, ಅದರ ಅಡಿಯಲ್ಲಿ ಯಾರಾದರೂ ಸಾಂಪ್ರದಾಯಿಕ ರೀತಿಯಲ್ಲಿ ಮಹುವಾದಿಂದ ಮದ್ಯವನ್ನು ತಯಾರಿಸಿದರೆ, ಅದು ಇನ್ನು ಮುಂದೆ ಅಕ್ರಮವಾಗುವುದಿಲ್ಲ” ಎಂದು ಚೌಹಾಣ್ ಹೇಳಿದ್ದಾರೆ. ಇದನ್ನು “ಹೆರಿಟೇಜ್ ಮದ್ಯ” (ಪಾರಂಪರಿಕ ಮದ್ಯ) ಎಂಬ ಹೆಸರಿನಲ್ಲಿ ಮದ್ಯದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುವುದು. ಈ ನೀತಿಯಿಂದಾಗಿ ಮಹುವಾ ಮದ್ಯವನ್ನು ತಯಾರಿಸುವ ಬುಡಕಟ್ಟು ಜನರಿಗೆ ಉದ್ಯೋಗ ಮತ್ತು ಆದಾಯ ದೊರಕಲಿದೆ ಎಂದು ಪ್ರತಿಪಾದಿಸಲಾಗಿದೆ.

ಬಿಜೆಪಿ ಸರ್ಕಾರದ ನಡೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. “ಭಾರತೀಯ ಜನತಾ ಪಾರ್ಟಿಯ ನೈತಿಕ ಅಧಃಪತನ” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಕಾಂಗ್ರೆಸ್ ವಕ್ತಾರ ಕೆ.ಕೆ.ಮಿಶ್ರಾ ಪ್ರತಿಕ್ರಿಯಿಸಿ, ‘ಕಚ್ಚಿ ಶರಬ್ (ದೇಸಿ ಮದ್ಯ) ಅನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಯೋಚಿಸುತ್ತಿರುವುದು ದುರದೃಷ್ಟಕರ’ ಎಂದಿದ್ದಾರೆ.

ಇದರ ನಡುವೆ, ಸಮುದಾಯ ಅರಣ್ಯದ ಹಕ್ಕನ್ನು ಆದಿವಾಸಿಗಳನ್ನು ಹೊಂದಿದ್ದಾರೆ. ಅಲ್ಲಿ ಅವರು ಮರಗಳನ್ನು ನೆಡಬಹುದು, ಮರ ಮತ್ತು ಹಣ್ಣುಗಳನ್ನು ಏನು ಮಾಡಬೇಕೆಂದು ನಿರ್ಧರಿಸಬಹುದು ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಬುಡಕಟ್ಟು ಸಮುದಾಯದ ವ್ಯಕ್ತಿಗಳ ಮೇಲಿರುವ ಸುಳ್ಳು ಹಾಗೂ ಸಣ್ಣ ಪ್ರಮಾಣದ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಚೌಹಾಣ್ ಘೋಷಿಸಿದ್ದಾರೆ. ಟೆಂಡು ಎಲೆ ಮಾರಾಟ ಮಾಡುವ ಹಕ್ಕನ್ನು ಬುಡಕಟ್ಟು ಜನಾಂಗದವರಿಗೂ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. ಟೆಂಡು ಎಲೆಗಳನ್ನು ಬೀಡಿ ಸುತ್ತಲು ಬಳಸಲಾಗುತ್ತದೆ.

ಬುಡಕಟ್ಟು ಸಮುದಾಯಗಳಲ್ಲಿ ಕುಡಿತ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ ಎಂಬುದು ಎಲ್ಲ ಸಾಮಾಜಿಕ ಚಿಂತಕರ ಆತಂಕ. ಗೌರವಯುತ ಹಾಗೂ ಬುಡಕಟ್ಟು ಪರಂಪರೆಯನ್ನೇ ಪ್ರತಿನಿಧಿಸುವ ಪರ್ಯಾಯ ಉದ್ಯೋಗಗಳು ಸಾಕಷ್ಟಿದ್ದರೂ, ಕುಡಿತವನ್ನು ಪ್ರಚೋದಿಸುವ ಉದ್ಯೋಗದತ್ತ ಈ ಸಮುದಾಯವನ್ನು ತಳ್ಳುವುದು ಎಷ್ಟು ಸರಿ ಎಂಬುದು ಚರ್ಚೆಯಾಗುತ್ತಿದೆ.

ಸರ್ಕಾರದ ನಿರ್ಧಾರವನ್ನು ಅನೇಕರು ಟೀಕಿಸಿದ್ದಾರೆ. ‘ಪ್ರಾಚೀನ ಧೂಮಪಾನ’ ಎಂದು ಹೆಸರಿಸಿ ಗಾಂಜಾವನ್ನು ಕಾನೂನುಬದ್ಧಗೊಳಿಸಿ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬಿಜೆಪಿ ನಂತರ ಕಾಂಗ್ರೆಸ್ ಸರದಿ: ಇಂದು ಟಿಎಂಸಿ ಸೇರಲಿರುವ ಬಿಹಾರ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...