Homeಚಳವಳಿರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ಜೊತೆಗೆ ಕೆಂಪು ಕೋಟೆಯಿಂದ ಭಾರತದ ತ್ರಿವರ್ಣ ಧ್ವಜವನ್ನು ತೆಗೆದುಹಾಕಲಾಗಿದೆ ಎಂದು ಝೀ ನ್ಯೂಸ್ ಸುಳ್ಳು ವರದಿ ಮಾಡಿತ್ತು

- Advertisement -
- Advertisement -

ರೈತ ಹೋರಾಟದ ವರದಿಗಾರಿಕೆಯ ವೇಳೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಝೀ ನ್ಯೂಸ್‌ ಚಾನಲ್‌ ವಿರುದ್ದ ಸಲ್ಲಿಸಲಾಗಿದ್ದ ದೂರನ್ನು News Broadcasting and Digital Standards Authority (NBDSA) ಪರಿಶೀಲನೆ ನಡೆಸಿ ಸುದ್ದಿ ಸಂಸ್ಥೆಗೆ ಛೀಮಾರಿ ಹಾಕಿದೆ. ಮಾತ್ರವಲ್ಲದೆ, ರೈತ ಹೋರಾಟದ ವಿರುದ್ದ ಪ್ರಸಾರ ಮಾಡಲಾಗಿದ್ದ, ಸುಳ್ಳು ವರದಿಗಳ ವೀಡಿಯೊಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸೂಚನೆ ನೀಡಿದೆ.

ಝೀ ನ್ಯೂಸ್ 2021 ರ ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆಯನ್ನು ‘ಖಲಿಸ್ತಾನಿಗಳಿಗೆ’ ಲಿಂಕ್ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. 2020 ರ ದೆಹಲಿ ಗಲಭೆ ಪ್ರಕರಣದ ಕುರಿತು ಟೈಮ್ಸ್ ನೌ ನಡೆಸಿದ ಎರಡು ಕಾರ್ಯಕ್ರಮಗಳು ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು NBDSA ತಿಳಿಸಿದೆ.  

2021 ರ ಗಣರಾಜ್ಯೋತ್ಸವದಂದು ನಡೆಯಲು ಘೋಷಿಸಿದ್ದ ಟ್ಯ್ರಾಕ್ಟರ್‌ ರ್‍ಯಾಲಿ ರೈತರ ಪ್ರತಿಭಟನೆಯನ್ನು ಝೀ ನ್ಯೂಸ್ “ತಾಲ್ ಥೋಕ್ ಕೆ: ಖಲಿಸ್ತಾನ್ ಸೆ ಕಬ್ ಸಾವಧಾನ್ ಹೋಗಾ ಕಿಸಾನ್?” (ಖಲಿಸ್ತಾನ್ ಬಗ್ಗೆ ರೈತರು ಯಾವಾಗ ಎಚ್ಚರವಹಿಸುತ್ತಾರೆ?) ಮತ್ತು “ತಾಲ್ ಥೋಕ್ ಕೆ: ನಹೀ ಮಾನೆ ಕಿಸಾನ್ ತೋ ಕ್ಯಾ ಗಣರಾಜ್ಯೋತ್ಸವದ ಪರ ಹೋಗಾ ‘ಗೃಹ ಯುದ್ಧ’?” (ರೈತರು ಒಪ್ಪದಿದ್ದರೆ ಗಣರಾಜ್ಯೋತ್ಸವದಂದು ‘ಅಂತರ್ಯುದ್ಧ’ ನಡೆಯುವುದೇ?) ಎಂಬ ಎರಡು ಕಾರ್ಯಕ್ರಮ ಮಾಡಿ ಖಲಿಸ್ತಾನಿಗಳಿಗೆ ಲಿಂಕ್ ಮಾಡುವ ಪ್ರಯತ್ನ ಮಾಡಿತ್ತು. ಈ ಕಾರ್ಯಕ್ರಮ ಜನವರಿ 19 ಮತ್ತು ಜನವರಿ 20, 2021 ರಂದು ಝೀ ನ್ಯೂಸ್‌ನಲ್ಲಿ ಪ್ರಸಾರವಾಗಿತ್ತು. ಈ ಕಾರ್ಯಕ್ರಮಗಳಲ್ಲಿ ಝೀ ನ್ಯೂಸ್  ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು NBDSA ತಿಳಿಸಿದೆ ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ಈ ಎರಡೂ ಸುದ್ದಿಗಳ ವಿರುದ್ದ ದೂರುದಾರ ಇಂದ್ರಜಿತ್‌ ಘೋರ್ಪಡೆ ಎಂಬುವವರು NBDSAಗೆ ದೂರು ನೀಡಿದ್ದರು. ಅವರು ತಮ್ಮ ದೂರಿನಲ್ಲಿ ಜೀ ನ್ಯೂಸ್‌ 19.1.2021 ಮತ್ತು 20.1.2021. ರಂದು ಪ್ರಸಾರ ಮಾಡಿದ ಸುದ್ದಿಗಳು ಆಕ್ಷೇಪಾರ್ಹವಾಗಿದ್ದು, ಇವು NBDA ಮಾರ್ಗಸೂಚಿಗಳನ್ನು ಉಲ್ಲಂಘಿಸಿವೆ ಎಂದು ಹೇಳಿದ್ದರು.

ದೂರಿನ ವಿಚಾರಣೆ ನಡೆಸಿರುವ NBDSA ಜೀ ನ್ಯೂಸ್‌ಗೆ ವಿಡಿಯೋಗಳನ್ನು ಡಿಲೀಟ್‌ ಮಾಡಲು ಸೂಚಿಸಿದ್ದು, ಈ ವಿಡಿಯೋಗಳು ಈ ಕೆಳಗಿನ NBDSA ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ:

  1. ವರದಿ ಮಾಡುವುದು ವೀಕ್ಷಕರಲ್ಲಿ ಸಂವೇದನಾಶೀಲನೆಯನ್ನು ತೊಡೆದು ಹಾಕಬಾರದು, ಭಯ, ಸಂಕಟ ಅಥವಾ ಅನಗತ್ಯ ಭಯವನ್ನು ಸೃಷ್ಟಿಸಬಾರದು.
  2. ಯಾವುದೇ ವಿವಾದಾತ್ಮಕ ಸಾರ್ವಜನಿಕ ಸಮಸ್ಯೆಯ ಸಂದರ್ಭದಲ್ಲಿ ಯಾವುದಾದರೂ ಒಂದು ಬದಿಯವರಿಗೆ ಅಡ್ಡಿಪಡಿಸುವ ಉದ್ದೇಶಕ್ಕಾಗಿ ಸುದ್ದಿಗಳನ್ನು ಆಯ್ಕೆ ಮಾಡಬಾರದು.
  3. ಸುದ್ದಿ ಪ್ರಸಾರಕ್ಕೂ ಮುನ್ನ, ಸಾಧ್ಯವಾದರೆ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಮಾಹಿತಿಯನ್ನು ನೇರವಾಗಿ ಸಂಗ್ರಹಿಸಬೇಕು.
  4. ಸತ್ಯಗಳು ಸ್ಪಷ್ಟವಾಗಿ ಭಿನ್ನವಾಗಿರಬೇಕು. ಅವುಗಳು ಅಭಿಪ್ರಾಯ, ವಿಶ್ಲೇಷಣೆ ಮತ್ತು ಕಾಮೆಂಟ್‌ಗಳೊಂದಿಗೆ ಬೆರೆಸಬಾರದು.
  5. ಸತ್ಯದ ವಿರುದ್ದ ವಿದ್ದಲ್ಲಿ, ಅಂತಹ ದೋಷಗಳನ್ನು ಆದಷ್ಟು ಬೇಗ ಸರಿಪಡಿಸಬೇಕು, ಸತ್ಯದ ಸರಿಯಾದ ಆವೃತ್ತಿಯ ಪ್ರಸಾರಕ್ಕೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಬೇಕು.
  6. ಸಮತೋಲಿತ ವರದಿಗಾಗಿ, ಪ್ರಸಾರಕರು ತಟಸ್ಥವಾಗಿರಬೇಕು. ವಿಶೇಷವಾಗಿ ವಿವಾದಾತ್ಮಕ ವಿಷಯದ ಕುರಿತು ಯಾವುದೇ ನಿರ್ದಿಷ್ಟವಾದ ದೃಷ್ಟಿಕೋನಕ್ಕೆ ಅನಗತ್ಯ ಪ್ರಾಮುಖ್ಯತೆಯನ್ನು ನೀಡಬಾರದು.
  7. ರಾಷ್ಟ್ರೀಯ ಸಂಸ್ಥೆಗಳ ಹಿತಾಸಕ್ತಿ ರಕ್ಷಿಸುವ ಉದ್ದೇಶದಿಂದ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುವ ವರದಿಯನ್ನು ಮಾಡಬಾರದು.
  8. ಮೂಢನಂಬಿಕೆಯನ್ನು ನಂಬಿಕೆ ವಿಷಯವೆಂದು ಪ್ರಚಾರ ಮಾಡಬಾರದು.

ಝೀ ವಾಹಿನಿಯ ಈ ಎರಡೂ ಕಾರ್ಯಕ್ರಮಗಳು NBDAಯ ಮೇಲಿನ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಪರಿಶೀಲನೆ ವೇಳೆ ತಿಳಿದು ಬಂದಿದೆ. ಅಲ್ಲದೆ, ಈ ಕಾರ್ಯಕ್ರಮಗಳಲ್ಲಿ ಸಾಮಾಜಿಕ-ಮಾಧ್ಯಮದಿಂದ ಪರಿಶೀಲಿಸದ ಮಾರ್ಪಾಡು ಮಾಡಿದ ವೀಡಿಯೊಗಳನ್ನು ಪ್ರಸಾರ ಮಾಡಲಾಗಿದೆ ಎಂದು ದೂರುದಾರರು ಹೇಳಿದ್ದಾರೆ.

ಝೀ ವಾಹಿನಿಯ ಈ ಕಾರ್ಯಕ್ರಮಗಳಲ್ಲಿ, ಡಿಸೆಂಬರ್ 2020ರಲ್ಲಿ ಜರ್ಮನಿಯಲ್ಲಿ ನಡೆದ ಚಾರಿಟಿ ಈವೆಂಟ್‌ ಸಂದರ್ಭದಲ್ಲಿ ದೀಪಗಳಿಂದ ಅಲಂಕರಿಸಲ್ಪಟ್ಟ ಟ್ರಾಕ್ಟರುಗಳ ವೀಡಿಯೊವನ್ನು, ಪ್ರತಿಭಟನಾನಿರತ ರೈತರು ಜನವರಿ 26 ರಂದು ನಡೆಸಲಿರುವ ಟ್ರ್ಯಾಕ್ಟರ್-ಮಾರ್ಚ್‌ಗೆ ಸಿದ್ಧವಾಗುತ್ತಿರುವ ಟ್ರಾಕ್ಟರ್‌ಗಳು ಎಂದು ಪ್ರಸಾರ ಮಾಡಲಾಗಿತ್ತು. ಇದರ ಬಗ್ಗೆ ಹಲವು ಏಜೆನ್ಸಿಗಳು ಫ್ಯಾಕ್ಟ್‌ಚೆಕ್‌ ನಡೆಸಿ, ಪರಿಶೀಲನೆ ನಡೆಸಿವೆ. ಆದರೂ, ತನ್ನ ವೀಕ್ಷಕರನ್ನು ದಾರಿ ತಪ್ಪಿಸಿದ್ದಕ್ಕಾಗಿ ಝೀ ನ್ಯೂಸ್‌ ಪ್ರಸಾರಕರು ಇನ್ನೂ ಕ್ಷಮೆಯಾಚಿಸಿಲ್ಲ ಎಂದು ದೂರುದಾರರು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ಜೊತೆಗೆ ಕೆಂಪು ಕೋಟೆಯಿಂದ ಭಾರತದ ತ್ರಿವರ್ಣ ಧ್ವಜವನ್ನು ತೆಗೆದುಹಾಕಲಾಗಿದೆ ಎಂದು ಝೀ ನ್ಯೂಸ್ ಸುಳ್ಳು ವರದಿ ಮಾಡಿದೆ ಎಂದು ಪ್ರಾಧಿಕಾರವು ಕಂಡು ಹಿಡಿದಿದೆ. ಝೀ ನ್ಯೂಸ್ ರೈತರ ಪ್ರತಿಭಟನೆಗಳನ್ನು ಖಲಿಸ್ತಾನಿಗಳಿಗೆ ಸಂಬಂಧಿಸಿ ಪ್ರಸಾರ ಮಾಡಿದ ಮೂರು ವೀಡಿಯೊಗಳಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಹೇಳಿದೆ.

ಈ ಎಲ್ಲಾ ಅಂಶಗಳನ್ನು ಗಮನಿಸಿರುವ NBDSA, ಝೀ ವಾಹಿನಿಯ ಈ ಎರಡೂ ಕಾರ್ಯಕ್ರಮಗಳ ಬಗ್ಗೆ ತನ್ನ ಅಸಮ್ಮತಿಯನ್ನು ಸೂಚಿಸಿದೆ. ಅಲ್ಲದೆ, ಪ್ರಸಾರ ಮಾಡಲಾಗಿರುವ ಆ ಎರಡೂ ವೀಡಿಯೊಗಳು ಚಾನಲ್‌ನ ವೆಬ್‌ಸೈಟ್ ಅಥವಾ YouTube ಅಥವಾ ಯಾವುದೇ ಇತರ ಲಿಂಕ್‌ಗಳಲ್ಲಿ ಇನ್ನೂ ಲಭ್ಯವಿದ್ದರೆ, ತಕ್ಷಣವೇ ತೆಗೆದುಹಾಕಬೇಕು ಮತ್ತು ಆ ಬಗ್ಗೆ 7 ದಿನಗಳಲ್ಲಿ NBDSA ಗೆ ಲಿಖಿತ ರೂಪದಲ್ಲಿ ದೃಢೀಕರಿಸಬೇಕು ಎಂದು ನಿರ್ದೇಶಿಸಿದೆ.

ಯಾವುದೇ ಸುದ್ದಿಯನ್ನು ವರದಿ ಮಾಡುವಾಗ ಜಾಗರೂಕತೆ ಮತ್ತು ಎಚ್ಚರಿಕೆಯನ್ನು ವಹಿಸಬೇಕು. ಪತ್ರಿಕಾ ನೀತಿ ಸಂಹಿತೆ ಮತ್ತು ಬ್ರಾಡ್‌ಕಾಸ್ಟಿಂಗ್ ಮಾನದಂಡಗಳ ಮೂಲಭೂತ ತತ್ವಗಳನ್ನು ಅನುಸರಿಸಬೇಕು ಅಲ್ಲದೆ, ಸರಿಯಾದ ನಿಖರತೆ ಮತ್ತು ನಿಷ್ಪಕ್ಷಪಾತದ ತತ್ವ, ಪ್ರಸಾರದ ಸಂದರ್ಭದಲ್ಲಿ ಮಾಡಿದ ಗಮನಾರ್ಹ ತಪ್ಪುಗಳನ್ನು ತಕ್ಷಣವೇ ಸರಿಪಡಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.

ಮಾತ್ರವಲ್ಲದೆ, ಮುಂದೆ ಪ್ರಸಾರ ಮಾಡಲಾಗುವ ಸುದ್ದಿಗಳಿಗೆ ಟ್ಯಾಗ್‌ಲೈನ್‌ಗಳು, ಹ್ಯಾಶ್‌ಟ್ಯಾಗ್‌ಗಳು ಮತ್ತು ಚಿತ್ರಗಳು/ಛಾಯಾಚಿತ್ರಗಳ ಬಳಕೆಯನ್ನು ಪ್ರಸಾರ ಮಾಡಲು/ಪ್ರಕಟಿಸಲು ನಿರ್ದಿಷ್ಟ ಮಾರ್ಗಸೂಚಿಗಳನ್ನು ನೀಡಲು ನಿರ್ಧರಿಸಿದೆ.

ಇತ್ತ ದುಬೈನ ಚಾರ್ಟರ್ಡ್ ಅಕೌಂಟೆಂಟ್‍ಗಳ ಅಬುಧಾಬಿ ಸಂಘ ಝೀ ನ್ಯೂಸ್ ನಿರೂಪಕ ಸುಧೀರ್ ಚೌಧರಿಯನ್ನು ಎಮಿರೇಟ್ಸ್‌ಗೆ ಸ್ವಾಗತಿಸಲು ಸಿದ್ಧವಾಗಿತ್ತು. ಆದರೆ, ತೀವ್ರ ಟೀಕೆಗಳಿಂದಾಗಿ ಅವರನ್ನು ಕಾರ್ಯಕ್ರಮದಿಂದ ಹೊರಗಿಡಲಾಗಿದೆ.


ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಧ್ವಜ ಹಾರಾಟ – ಸುಳ್ಳು ಸುದ್ದಿ ಹರಡುತ್ತಿರುವ ಬಿಜೆಪಿ ಮತ್ತು ಮಾಧ್ಯಮಗಳು: ಭಾರಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...