Homeಚಳವಳಿದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

- Advertisement -
- Advertisement -

ಫೆಬ್ರವರಿ 2020ರಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಎಡಪಂಥೀಯರ ಕೈವಾಡವಿದೆ ಎಂದು ಎರಡು ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್‌ ನೌ ಸುದ್ದಿ ವಾಹಿನಿ ವಿರುದ್ಧ ನ್ಯಾಷನಲ್ ಬ್ರಾಡ್‌ಕಾಸ್ಟಿಂಗ್ ಮತ್ತು ಡಿಜಿಟಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBDSA) ಆಕ್ಷೇಪ ವ್ಯಕ್ತಪಡಿಸಿದ್ದು, ಆ ಎರಡು ವಿವಾದಾತ್ಮಕ ಚರ್ಚೆಗಳನ್ನು ತಮ್ಮ ಚಾನಲ್ ಮತ್ತು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಸೂಚನೆ ನೀಡಿದೆ.

ಟೈಮ್ಸ್ ನೌ ವಾಹಿನಿ ಆ ಸುದ್ದಿಗಳನ್ನು “ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ರೀತಿಯಲ್ಲಿ” ವರದಿ ಮಾಡಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. 

ಸೆಪ್ಟೆಂಬರ್ 14ರಂದು ‘ಇಂಡಿಯಾ ಅಪ್‌ಫ್ರಂಟ್’ ಕಾರ್ಯಕ್ರಮವನ್ನು ಆಯೋಜಿಸಿದ್ದ ಟೈಮ್ಸ್‌ ನೌನ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್, “ಎಡಪಂಥೀಯರ ರಹಸ್ಯ ಸಭೆ” ಎಂದು ಸುದ್ದಿ ಕಾರ್ಯಕ್ರಮ ಮಾಡಿದ್ದರು. ಈ ಬಗ್ಗೆ NBDSA ದೂರು ನೀಡಿದ್ದ ಉತ್ಕರ್ಷ್ ಮಿಶ್ರಾ ಅವರು ಟೈಮ್ಸ್‌ ನೌನಲ್ಲಿ ಹೇಳಲಾದ ಎಡಪಂತೀಯ ಸಭೆಯು ವಾಸ್ತವವಾಗಿ ಜೂಮ್‌ ವೆಬ್‌ನಾರ್ ಆಗಿತ್ತು. ಆ ವೆಬಿನಾರ್‌ಅನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿ, ವೀಡಿಯೊ ಅಪ್‌ಲೋಡ್ ಮಾಡಲಾಗಿದೆ. ಆದರೆ, “ಟೈಮ್ಸ್‌ ನೌ ಪ್ರಸಾರಕರು ವೀಕ್ಷಕರನ್ನು ದಾರಿತಪ್ಪಿಸಲು, ಸಮುದಾಯಗಳ ನಡುವೆ ದ್ವೇಷವನ್ನು ಬೆಳೆಸಲು ಪ್ರಯತ್ನಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ” ಎಂದು ತಿಳಿಸಿದ್ದರು. 

ಚರ್ಚೆ ಕಾರ್ಯಕ್ರಮಗಳನ್ನು ನಿರೂಪಕರಾದ ರಾಹುಲ್ ಶಿವಶಂಕರ್ ಮತ್ತು ಪದ್ಮಜಾ ಜೋಶಿಯವರು ನಡೆಸುತ್ತಿದ್ದರು. ನಿರೂಪಕರು “ನೈತಿಕ ಸಂಹಿತೆ ಮತ್ತು ಬ್ರಾಡ್‌ಕಾಸ್ಟಿಂಗ್ ಮಾನದಂಡಗಳು ಮತ್ತು NBDSA ಹೊರಡಿಸಿದ ವಿವಿಧ ಮಾರ್ಗಸೂಚಿಗಳಲ್ಲಿ ನಮೂದಿಸಲಾದ ಮೂಲಭೂತ ತತ್ವಗಳನ್ನು ಉಲ್ಲಂಘಿಸಿದ್ದಾರೆ” ಎಂದು NBDSA ಘೋಷಿಸಿದೆ. 

ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

“ಸೆಪ್ಟೆಂಬರ್ 14, 2020 ಮತ್ತು ಸೆಪ್ಟೆಂಬರ್ 23, 2020 ರಂದು ಟೈಮ್ಸ್‌ ನೌನ ಇಂಡಿಯಾ ಅಪ್‌ಫ್ರಂಟ್‌ನ ಎರಡು ಸಂಚಿಕೆಗಳನ್ನು ತೆಗೆದು ಹಾಕಬೇಕು. ಈ ಬಗ್ಗೆ, ಏಳು ದಿನಗಳೊಳಗೆ ಲಿಖಿತವಾಗಿ ದೃಢೀಕರಣವನ್ನು ಕಳುಹಿಸಬೇಕು” ಎಂದು NBDSA ಆದೇಶ ನೀಡಿದೆ.

ನಿರೂಪಕ ರಾಹುಲ್ ಶಿವಶಂಕರ್ “ರಹಸ್ಯ ಎಡಪಂಥೀಯರ ಸಭೆ” ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದು ಮಾತ್ರವಲ್ಲದೆ, ಗಲಭೆಯ ಸಮಯದಲ್ಲಿ ನ್ಯಾಯಾಂಗ ದೆಹಲಿ ಪೊಲೀಸರ ಕ್ರಮ ಮತ್ತು ಉದ್ದೇಶವನ್ನು ಪ್ರಶ್ನಿಸಿದ್ದು ಸೇರಿದಂತೆ, ಇತರ ಚಾನೆಲ್‌ಗಳಲ್ಲಿ ವರದಿಯಾದ ಸತ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

“ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ದೆಹಲಿ ಪೊಲೀಸರು ಪರಿಶೀಲಿಸದೇ ಮಾಡಿದ್ದ ಆರೋಪಗಳನ್ನು ಮಾತ್ರ ಚಾನೆಲ್ ವರದಿ ಮಾಡಿದೆ. ಚಾನೆಲ್‌ನ ಆಂತರಿಕ ಭದ್ರತಾ ಸಂಪಾದಕರು ಇಡೀ ವಿಷಯದಲ್ಲಿ ದೆಹಲಿ ಪೊಲೀಸರ ಪಾತ್ರವನ್ನು ನ್ಯಾಯಾಂಗವು ಪ್ರಶ್ನಿಸಿದ್ದರೂ ಸಹ, ಪೊಲೀಸರ ನಡೆಯನ್ನು ಮೌಲ್ಯೀಕರಿಸಲು ಮುಂದಾಗಿದ್ದಾರೆ ಎಂದು ದೂರುದಾರ ಆರೋಪಿಸಿದ್ದರು.

“ಈ ವಿಷಯದ ಬಗ್ಗೆ ವೀಕ್ಷಕರು ಸತ್ಯಾಧಾರಿತ ದೃಷ್ಟಿಕೋನವನ್ನು ಪಡೆದುಕೊಳ್ಳಲು ವಾಹಿನಿ ಅಡ್ಡಿಪಡಿಸಿದೆ. ಇದಲ್ಲದೆ, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಅಪಖ್ಯಾತಿಗೊಳಿಸಲು ಪದ್ಮಜಾ ಜೋಶಿ ಪ್ರಯತ್ನಿಸಿದ್ದಾರೆ. ವಿವಾದಾತ್ಮಕ ವಿಷಯದ ಒಂದು ಬದಿಯ ಪರವಾಗಿ ಮತ್ತು ಮತ್ತೊಂದು ಬದಿಗೆ ಅಡ್ಡಿಪಡಿಸಲು ಮಾಧ್ಯಮ ಪ್ರಯೋಗ ನಡೆದಿದೆ” ಎಂದು ಪ್ರಾಧಿಕಾರದ ಆದೇಶ ಹೇಳಿದೆ.

ಆದರೆ ಟೈಮ್ಸ್ ನೌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, “ದೂರುದಾರರು ಅದೇ ಆ್ಯಂಕರ್‌ಗಳು/ಪತ್ರಕರ್ತರ ವಿರುದ್ಧ ಪದೇ ಪದೇ ಅನಗತ್ಯ ಮತ್ತು ಕ್ಷುಲ್ಲಕ ದೂರುಗಳನ್ನು ಮಾಡುತ್ತಿದ್ದಾರೆ” ಎಂದು ಚಾನೆಲ್ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಚಾನೆಲ್‌ನ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ನೋಟಿಸ್ ನೀಡಿದೆ.

ಇತ್ತ, ರೈತ ಹೋರಾಟದ ವರದಿಗಾರಿಕೆಯ ವೇಳೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಝೀ ನ್ಯೂಸ್‌ ಚಾನಲ್‌ ವಿರುದ್ದ ಸಲ್ಲಿಸಲಾಗಿದ್ದ ದೂರನ್ನು NBDSA ಪರಿಶೀಲನೆ ನಡೆಸಿ ಸುದ್ದಿ ಸಂಸ್ಥೆಗೆ ಛೀಮಾರಿ ಹಾಕಿದೆ. ಮಾತ್ರವಲ್ಲದೆ, ರೈತ ಹೋರಾಟದ ವಿರುದ್ದ ಪ್ರಸಾರ ಮಾಡಲಾಗಿದ್ದ, ಸುಳ್ಳು ವರದಿಗಳ ವೀಡಿಯೊಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸೂಚನೆ ನೀಡಿದೆ.


ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...