Homeಚಳವಳಿದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

- Advertisement -
- Advertisement -

ಫೆಬ್ರವರಿ 2020ರಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಎಡಪಂಥೀಯರ ಕೈವಾಡವಿದೆ ಎಂದು ಎರಡು ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್‌ ನೌ ಸುದ್ದಿ ವಾಹಿನಿ ವಿರುದ್ಧ ನ್ಯಾಷನಲ್ ಬ್ರಾಡ್‌ಕಾಸ್ಟಿಂಗ್ ಮತ್ತು ಡಿಜಿಟಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBDSA) ಆಕ್ಷೇಪ ವ್ಯಕ್ತಪಡಿಸಿದ್ದು, ಆ ಎರಡು ವಿವಾದಾತ್ಮಕ ಚರ್ಚೆಗಳನ್ನು ತಮ್ಮ ಚಾನಲ್ ಮತ್ತು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಸೂಚನೆ ನೀಡಿದೆ.

ಟೈಮ್ಸ್ ನೌ ವಾಹಿನಿ ಆ ಸುದ್ದಿಗಳನ್ನು “ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ರೀತಿಯಲ್ಲಿ” ವರದಿ ಮಾಡಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. 

ಸೆಪ್ಟೆಂಬರ್ 14ರಂದು ‘ಇಂಡಿಯಾ ಅಪ್‌ಫ್ರಂಟ್’ ಕಾರ್ಯಕ್ರಮವನ್ನು ಆಯೋಜಿಸಿದ್ದ ಟೈಮ್ಸ್‌ ನೌನ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್, “ಎಡಪಂಥೀಯರ ರಹಸ್ಯ ಸಭೆ” ಎಂದು ಸುದ್ದಿ ಕಾರ್ಯಕ್ರಮ ಮಾಡಿದ್ದರು. ಈ ಬಗ್ಗೆ NBDSA ದೂರು ನೀಡಿದ್ದ ಉತ್ಕರ್ಷ್ ಮಿಶ್ರಾ ಅವರು ಟೈಮ್ಸ್‌ ನೌನಲ್ಲಿ ಹೇಳಲಾದ ಎಡಪಂತೀಯ ಸಭೆಯು ವಾಸ್ತವವಾಗಿ ಜೂಮ್‌ ವೆಬ್‌ನಾರ್ ಆಗಿತ್ತು. ಆ ವೆಬಿನಾರ್‌ಅನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿ, ವೀಡಿಯೊ ಅಪ್‌ಲೋಡ್ ಮಾಡಲಾಗಿದೆ. ಆದರೆ, “ಟೈಮ್ಸ್‌ ನೌ ಪ್ರಸಾರಕರು ವೀಕ್ಷಕರನ್ನು ದಾರಿತಪ್ಪಿಸಲು, ಸಮುದಾಯಗಳ ನಡುವೆ ದ್ವೇಷವನ್ನು ಬೆಳೆಸಲು ಪ್ರಯತ್ನಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ” ಎಂದು ತಿಳಿಸಿದ್ದರು. 

ಚರ್ಚೆ ಕಾರ್ಯಕ್ರಮಗಳನ್ನು ನಿರೂಪಕರಾದ ರಾಹುಲ್ ಶಿವಶಂಕರ್ ಮತ್ತು ಪದ್ಮಜಾ ಜೋಶಿಯವರು ನಡೆಸುತ್ತಿದ್ದರು. ನಿರೂಪಕರು “ನೈತಿಕ ಸಂಹಿತೆ ಮತ್ತು ಬ್ರಾಡ್‌ಕಾಸ್ಟಿಂಗ್ ಮಾನದಂಡಗಳು ಮತ್ತು NBDSA ಹೊರಡಿಸಿದ ವಿವಿಧ ಮಾರ್ಗಸೂಚಿಗಳಲ್ಲಿ ನಮೂದಿಸಲಾದ ಮೂಲಭೂತ ತತ್ವಗಳನ್ನು ಉಲ್ಲಂಘಿಸಿದ್ದಾರೆ” ಎಂದು NBDSA ಘೋಷಿಸಿದೆ. 

ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

“ಸೆಪ್ಟೆಂಬರ್ 14, 2020 ಮತ್ತು ಸೆಪ್ಟೆಂಬರ್ 23, 2020 ರಂದು ಟೈಮ್ಸ್‌ ನೌನ ಇಂಡಿಯಾ ಅಪ್‌ಫ್ರಂಟ್‌ನ ಎರಡು ಸಂಚಿಕೆಗಳನ್ನು ತೆಗೆದು ಹಾಕಬೇಕು. ಈ ಬಗ್ಗೆ, ಏಳು ದಿನಗಳೊಳಗೆ ಲಿಖಿತವಾಗಿ ದೃಢೀಕರಣವನ್ನು ಕಳುಹಿಸಬೇಕು” ಎಂದು NBDSA ಆದೇಶ ನೀಡಿದೆ.

ನಿರೂಪಕ ರಾಹುಲ್ ಶಿವಶಂಕರ್ “ರಹಸ್ಯ ಎಡಪಂಥೀಯರ ಸಭೆ” ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದು ಮಾತ್ರವಲ್ಲದೆ, ಗಲಭೆಯ ಸಮಯದಲ್ಲಿ ನ್ಯಾಯಾಂಗ ದೆಹಲಿ ಪೊಲೀಸರ ಕ್ರಮ ಮತ್ತು ಉದ್ದೇಶವನ್ನು ಪ್ರಶ್ನಿಸಿದ್ದು ಸೇರಿದಂತೆ, ಇತರ ಚಾನೆಲ್‌ಗಳಲ್ಲಿ ವರದಿಯಾದ ಸತ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

“ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ದೆಹಲಿ ಪೊಲೀಸರು ಪರಿಶೀಲಿಸದೇ ಮಾಡಿದ್ದ ಆರೋಪಗಳನ್ನು ಮಾತ್ರ ಚಾನೆಲ್ ವರದಿ ಮಾಡಿದೆ. ಚಾನೆಲ್‌ನ ಆಂತರಿಕ ಭದ್ರತಾ ಸಂಪಾದಕರು ಇಡೀ ವಿಷಯದಲ್ಲಿ ದೆಹಲಿ ಪೊಲೀಸರ ಪಾತ್ರವನ್ನು ನ್ಯಾಯಾಂಗವು ಪ್ರಶ್ನಿಸಿದ್ದರೂ ಸಹ, ಪೊಲೀಸರ ನಡೆಯನ್ನು ಮೌಲ್ಯೀಕರಿಸಲು ಮುಂದಾಗಿದ್ದಾರೆ ಎಂದು ದೂರುದಾರ ಆರೋಪಿಸಿದ್ದರು.

“ಈ ವಿಷಯದ ಬಗ್ಗೆ ವೀಕ್ಷಕರು ಸತ್ಯಾಧಾರಿತ ದೃಷ್ಟಿಕೋನವನ್ನು ಪಡೆದುಕೊಳ್ಳಲು ವಾಹಿನಿ ಅಡ್ಡಿಪಡಿಸಿದೆ. ಇದಲ್ಲದೆ, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಅಪಖ್ಯಾತಿಗೊಳಿಸಲು ಪದ್ಮಜಾ ಜೋಶಿ ಪ್ರಯತ್ನಿಸಿದ್ದಾರೆ. ವಿವಾದಾತ್ಮಕ ವಿಷಯದ ಒಂದು ಬದಿಯ ಪರವಾಗಿ ಮತ್ತು ಮತ್ತೊಂದು ಬದಿಗೆ ಅಡ್ಡಿಪಡಿಸಲು ಮಾಧ್ಯಮ ಪ್ರಯೋಗ ನಡೆದಿದೆ” ಎಂದು ಪ್ರಾಧಿಕಾರದ ಆದೇಶ ಹೇಳಿದೆ.

ಆದರೆ ಟೈಮ್ಸ್ ನೌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, “ದೂರುದಾರರು ಅದೇ ಆ್ಯಂಕರ್‌ಗಳು/ಪತ್ರಕರ್ತರ ವಿರುದ್ಧ ಪದೇ ಪದೇ ಅನಗತ್ಯ ಮತ್ತು ಕ್ಷುಲ್ಲಕ ದೂರುಗಳನ್ನು ಮಾಡುತ್ತಿದ್ದಾರೆ” ಎಂದು ಚಾನೆಲ್ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಚಾನೆಲ್‌ನ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ನೋಟಿಸ್ ನೀಡಿದೆ.

ಇತ್ತ, ರೈತ ಹೋರಾಟದ ವರದಿಗಾರಿಕೆಯ ವೇಳೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಝೀ ನ್ಯೂಸ್‌ ಚಾನಲ್‌ ವಿರುದ್ದ ಸಲ್ಲಿಸಲಾಗಿದ್ದ ದೂರನ್ನು NBDSA ಪರಿಶೀಲನೆ ನಡೆಸಿ ಸುದ್ದಿ ಸಂಸ್ಥೆಗೆ ಛೀಮಾರಿ ಹಾಕಿದೆ. ಮಾತ್ರವಲ್ಲದೆ, ರೈತ ಹೋರಾಟದ ವಿರುದ್ದ ಪ್ರಸಾರ ಮಾಡಲಾಗಿದ್ದ, ಸುಳ್ಳು ವರದಿಗಳ ವೀಡಿಯೊಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸೂಚನೆ ನೀಡಿದೆ.


ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...