Homeಚಳವಳಿದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

- Advertisement -
- Advertisement -

ಫೆಬ್ರವರಿ 2020ರಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಎಡಪಂಥೀಯರ ಕೈವಾಡವಿದೆ ಎಂದು ಎರಡು ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್‌ ನೌ ಸುದ್ದಿ ವಾಹಿನಿ ವಿರುದ್ಧ ನ್ಯಾಷನಲ್ ಬ್ರಾಡ್‌ಕಾಸ್ಟಿಂಗ್ ಮತ್ತು ಡಿಜಿಟಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBDSA) ಆಕ್ಷೇಪ ವ್ಯಕ್ತಪಡಿಸಿದ್ದು, ಆ ಎರಡು ವಿವಾದಾತ್ಮಕ ಚರ್ಚೆಗಳನ್ನು ತಮ್ಮ ಚಾನಲ್ ಮತ್ತು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಸೂಚನೆ ನೀಡಿದೆ.

ಟೈಮ್ಸ್ ನೌ ವಾಹಿನಿ ಆ ಸುದ್ದಿಗಳನ್ನು “ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ರೀತಿಯಲ್ಲಿ” ವರದಿ ಮಾಡಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. 

ಸೆಪ್ಟೆಂಬರ್ 14ರಂದು ‘ಇಂಡಿಯಾ ಅಪ್‌ಫ್ರಂಟ್’ ಕಾರ್ಯಕ್ರಮವನ್ನು ಆಯೋಜಿಸಿದ್ದ ಟೈಮ್ಸ್‌ ನೌನ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್, “ಎಡಪಂಥೀಯರ ರಹಸ್ಯ ಸಭೆ” ಎಂದು ಸುದ್ದಿ ಕಾರ್ಯಕ್ರಮ ಮಾಡಿದ್ದರು. ಈ ಬಗ್ಗೆ NBDSA ದೂರು ನೀಡಿದ್ದ ಉತ್ಕರ್ಷ್ ಮಿಶ್ರಾ ಅವರು ಟೈಮ್ಸ್‌ ನೌನಲ್ಲಿ ಹೇಳಲಾದ ಎಡಪಂತೀಯ ಸಭೆಯು ವಾಸ್ತವವಾಗಿ ಜೂಮ್‌ ವೆಬ್‌ನಾರ್ ಆಗಿತ್ತು. ಆ ವೆಬಿನಾರ್‌ಅನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿ, ವೀಡಿಯೊ ಅಪ್‌ಲೋಡ್ ಮಾಡಲಾಗಿದೆ. ಆದರೆ, “ಟೈಮ್ಸ್‌ ನೌ ಪ್ರಸಾರಕರು ವೀಕ್ಷಕರನ್ನು ದಾರಿತಪ್ಪಿಸಲು, ಸಮುದಾಯಗಳ ನಡುವೆ ದ್ವೇಷವನ್ನು ಬೆಳೆಸಲು ಪ್ರಯತ್ನಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ” ಎಂದು ತಿಳಿಸಿದ್ದರು. 

ಚರ್ಚೆ ಕಾರ್ಯಕ್ರಮಗಳನ್ನು ನಿರೂಪಕರಾದ ರಾಹುಲ್ ಶಿವಶಂಕರ್ ಮತ್ತು ಪದ್ಮಜಾ ಜೋಶಿಯವರು ನಡೆಸುತ್ತಿದ್ದರು. ನಿರೂಪಕರು “ನೈತಿಕ ಸಂಹಿತೆ ಮತ್ತು ಬ್ರಾಡ್‌ಕಾಸ್ಟಿಂಗ್ ಮಾನದಂಡಗಳು ಮತ್ತು NBDSA ಹೊರಡಿಸಿದ ವಿವಿಧ ಮಾರ್ಗಸೂಚಿಗಳಲ್ಲಿ ನಮೂದಿಸಲಾದ ಮೂಲಭೂತ ತತ್ವಗಳನ್ನು ಉಲ್ಲಂಘಿಸಿದ್ದಾರೆ” ಎಂದು NBDSA ಘೋಷಿಸಿದೆ. 

ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

“ಸೆಪ್ಟೆಂಬರ್ 14, 2020 ಮತ್ತು ಸೆಪ್ಟೆಂಬರ್ 23, 2020 ರಂದು ಟೈಮ್ಸ್‌ ನೌನ ಇಂಡಿಯಾ ಅಪ್‌ಫ್ರಂಟ್‌ನ ಎರಡು ಸಂಚಿಕೆಗಳನ್ನು ತೆಗೆದು ಹಾಕಬೇಕು. ಈ ಬಗ್ಗೆ, ಏಳು ದಿನಗಳೊಳಗೆ ಲಿಖಿತವಾಗಿ ದೃಢೀಕರಣವನ್ನು ಕಳುಹಿಸಬೇಕು” ಎಂದು NBDSA ಆದೇಶ ನೀಡಿದೆ.

ನಿರೂಪಕ ರಾಹುಲ್ ಶಿವಶಂಕರ್ “ರಹಸ್ಯ ಎಡಪಂಥೀಯರ ಸಭೆ” ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದು ಮಾತ್ರವಲ್ಲದೆ, ಗಲಭೆಯ ಸಮಯದಲ್ಲಿ ನ್ಯಾಯಾಂಗ ದೆಹಲಿ ಪೊಲೀಸರ ಕ್ರಮ ಮತ್ತು ಉದ್ದೇಶವನ್ನು ಪ್ರಶ್ನಿಸಿದ್ದು ಸೇರಿದಂತೆ, ಇತರ ಚಾನೆಲ್‌ಗಳಲ್ಲಿ ವರದಿಯಾದ ಸತ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

“ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ದೆಹಲಿ ಪೊಲೀಸರು ಪರಿಶೀಲಿಸದೇ ಮಾಡಿದ್ದ ಆರೋಪಗಳನ್ನು ಮಾತ್ರ ಚಾನೆಲ್ ವರದಿ ಮಾಡಿದೆ. ಚಾನೆಲ್‌ನ ಆಂತರಿಕ ಭದ್ರತಾ ಸಂಪಾದಕರು ಇಡೀ ವಿಷಯದಲ್ಲಿ ದೆಹಲಿ ಪೊಲೀಸರ ಪಾತ್ರವನ್ನು ನ್ಯಾಯಾಂಗವು ಪ್ರಶ್ನಿಸಿದ್ದರೂ ಸಹ, ಪೊಲೀಸರ ನಡೆಯನ್ನು ಮೌಲ್ಯೀಕರಿಸಲು ಮುಂದಾಗಿದ್ದಾರೆ ಎಂದು ದೂರುದಾರ ಆರೋಪಿಸಿದ್ದರು.

“ಈ ವಿಷಯದ ಬಗ್ಗೆ ವೀಕ್ಷಕರು ಸತ್ಯಾಧಾರಿತ ದೃಷ್ಟಿಕೋನವನ್ನು ಪಡೆದುಕೊಳ್ಳಲು ವಾಹಿನಿ ಅಡ್ಡಿಪಡಿಸಿದೆ. ಇದಲ್ಲದೆ, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಅಪಖ್ಯಾತಿಗೊಳಿಸಲು ಪದ್ಮಜಾ ಜೋಶಿ ಪ್ರಯತ್ನಿಸಿದ್ದಾರೆ. ವಿವಾದಾತ್ಮಕ ವಿಷಯದ ಒಂದು ಬದಿಯ ಪರವಾಗಿ ಮತ್ತು ಮತ್ತೊಂದು ಬದಿಗೆ ಅಡ್ಡಿಪಡಿಸಲು ಮಾಧ್ಯಮ ಪ್ರಯೋಗ ನಡೆದಿದೆ” ಎಂದು ಪ್ರಾಧಿಕಾರದ ಆದೇಶ ಹೇಳಿದೆ.

ಆದರೆ ಟೈಮ್ಸ್ ನೌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, “ದೂರುದಾರರು ಅದೇ ಆ್ಯಂಕರ್‌ಗಳು/ಪತ್ರಕರ್ತರ ವಿರುದ್ಧ ಪದೇ ಪದೇ ಅನಗತ್ಯ ಮತ್ತು ಕ್ಷುಲ್ಲಕ ದೂರುಗಳನ್ನು ಮಾಡುತ್ತಿದ್ದಾರೆ” ಎಂದು ಚಾನೆಲ್ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಚಾನೆಲ್‌ನ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ನೋಟಿಸ್ ನೀಡಿದೆ.

ಇತ್ತ, ರೈತ ಹೋರಾಟದ ವರದಿಗಾರಿಕೆಯ ವೇಳೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಝೀ ನ್ಯೂಸ್‌ ಚಾನಲ್‌ ವಿರುದ್ದ ಸಲ್ಲಿಸಲಾಗಿದ್ದ ದೂರನ್ನು NBDSA ಪರಿಶೀಲನೆ ನಡೆಸಿ ಸುದ್ದಿ ಸಂಸ್ಥೆಗೆ ಛೀಮಾರಿ ಹಾಕಿದೆ. ಮಾತ್ರವಲ್ಲದೆ, ರೈತ ಹೋರಾಟದ ವಿರುದ್ದ ಪ್ರಸಾರ ಮಾಡಲಾಗಿದ್ದ, ಸುಳ್ಳು ವರದಿಗಳ ವೀಡಿಯೊಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸೂಚನೆ ನೀಡಿದೆ.


ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...