Homeಕರ್ನಾಟಕವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ತಿಗೆ ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆ ಆಖಾಡಕ್ಕೀಗ ರಂಗೇರಿದೆ! ಆಡಳಿತಾರೂಢ ಬಿಜೆಪಿಯಲ್ಲಿ ತಿಂಗಳಾನುಗಟ್ಟಳೆ ನಡೆದ ಟಿಕೆಟ್‌ಗೆ ಪೈಪೋಟಿಗೆ ಬ್ರೇಕ್ ಬಿದ್ದಿದ್ದು, ಕಾರವಾರದ ಮೀನುಗಾರ ಸಮುದಾಯದ ಗಣಪತಿ ದುಮ್ಮಾ ಉಳ್ವೇಕರ್‌ರನ್ನು ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಬಿಜೆಪಿಯಲ್ಲಿ ಬೆಂಕಿಬಿದ್ದಂತಾಗಿದ್ದು, ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬಿಜೆಪಿ ತನ್ನ ಭಾರಕ್ಕೆ ತಾನೆ ಕುಸಿಯುತ್ತಿದೆ; ಹಾದಿ-ಬೀದಿಯಲ್ಲಿ ಹೋಗುವವರನ್ನೆಲ್ಲ ಕಾಂಗ್ರೆಸ್ಸಿಂದ ಬಂದವರೆಂದು ಹೇಳಿ ತಂದು ತುಂಬಿಕೊಂಡಿದ್ದರ ಫಲವಿದು ಎಂದು ಎರಡ್ಮೂರು ದಶಕದಿಂದ ಪಕ್ಷಕ್ಕಾಗಿ ಬೆವರಿಳಿಸಿದ ಹಿರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಕಷ್ಟದ ದಿನಗಳಿಂದಲೂ ಆ ಪಾರ್ಟಿಯಲ್ಲಿದ್ದವರೂ ಸೇರಿದಂತೆ ಸುಮಾರು ಒಂದೂ ಮುಕ್ಕಾಲು ಡಜನ್ ಮಂದಿ ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂತ್ರಿ ಹೆಬ್ಬಾರ್, ಸಂಸದ ಅನಂತಕುಮಾರ್ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕ್ ಒಂದಾಗಿ ಉಳ್ವೇಕರ್ ಕ್ಯಾಂಡಿಡೇಟ್ ಮಾಡಿದ್ದಾರೆನ್ನಲಾಗಿದೆ.

ಗೋವಿಂದ ನಾಯ್ಕ್‌

ಕಳೆದ ಬಾರಿ ಸೋಲುತ್ತಾರೆಂದು ಗೊತ್ತಿದ್ದೂ ಉಳ್ವೇಕರ್‌ರನ್ನು ನಿಲ್ಲಿಸಲಾಗಿತ್ತು. ಈಗ ಗೆಲ್ಲುವ ಅವಕಾಶವಿರುವಾಗ ಅಂದು ಪಟ್ಟ ಕಷ್ಟಕ್ಕೆ ಇನಾಮು ಕೊಡಬೇಕಾದುದು ಧರ್ಮವೆಂದು ಪಕ್ಷದ ಹಿರಿಯರು ಹೇಳುತ್ತಿದ್ದಾರಾದರೂ, ಇದೆಲ್ಲ ಮುನಿಸಿಕೊಂಡಿರುವ ಮೀನುಗಾರ ಸಮುದಾಯವನ್ನು ಸಮಾಧಾನಿಸುವ ನಾಟಕವೆಂದು ಟಿಕೆಟ್ ವಂಚಿತರ ಬೆಂಬಲಿಗರ ಅಭಿಪ್ರಾಯವಾಗಿದೆ. ಉಳ್ವೇಕರ್ ನಿಷ್ಟಾವಂತ ಬಿಜೆಪಿಗರಲ್ಲ; ಅವರು ಆನಂದ ಅಸ್ನೋಟಿಕರ್ ಮತ್ತವರ ತಂದೆಯ ಹಿಂಬಾಲಕರಾಗಿದ್ದರು. ಆನಂದ ಬಿಜೆಪಿಗೆ ಬಂದಾಗ ಅವರೊಂದಿಗೆ ಉಳ್ವೇಕರ್ ಬಂದಿದ್ದರು. ಆದರೆ ಆನಂದ್ ಜತೆಗಿನ ಬಂದರು ವ್ಯವಹಾರದ ವೈಮನಸ್ಸಿನಿಂದ ಉಳ್ವೇಕರ್ ಬಿಜೆಪಿಯಲ್ಲೆ ಉಳಿದರೆಂಬುದು ಕಟ್ಟರ್ ಬಿಜೆಪಿಗರು ಹೇಳುತ್ತಾರೆ.

ಕಳೆದ ವಿಧಾನ ಸಭಾ ಚುನಾವಣೆ ಹೊತ್ತಲ್ಲಿ ನಿಗೂಢವಾಗಿ ಸಾವಗೀಡಾಗಿದ್ದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಇಡೀ ಕರಾವಳಿಯ ಮೀನುಗಾರರ ಮತ ಪಡೆದಿದ್ದ ಬಿಜೆಪಿಯವರು ಆ ಬಳಿಕ ಉದಾಸೀನ ಮಾಡಿದ್ದರೆಂಬ ಬೇಸರ ಬೆಸ್ತರಲ್ಲಿತ್ತು. ಅಲ್ಲದೆ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯಿಂದ ತೊಂದರೆಗೀಡಾಗುವ ಮೀನುಗಾರರು ಬಿಜೆಪಿ ಮೇಲೆ ಸಿಟ್ಟಾಗಿದ್ದಾರೆ. ಇದೆಲ್ಲ ಸರಿ ತೂಗಿಸಲು ಮೀನುಗಾರ ಪಂಗಡದ ಉಳ್ವೇಕರ್‌ಗೆ ಟಿಕೆಟ್ ಕೊಟ್ಟು ಅರ್ಹರಿಗೆ ಮೋಸ ಮಾಡಲಾಗಿದೆ ಎಂದು ಬಿಜೆಪಿ ಬಂಡಯಗಾರರು ಹೇಳುತ್ತಿದ್ದಾರೆ.

ಭಟ್ಕಳದ ಬಿಜೆಪಿ ಕಾರ್ಯರ್ಕರು ಸಾಮಾಜಿಕ ಜಾಲತಾಣದಲ್ಲಿ ”ನಿಷ್ಟಾವಂತರಾಗಿ, ಪ್ರಾಮಾಣಿಕರಾಗಿ ದುಡಿದವರಿಗೆ ಬಿಜೆಪಿಯಲ್ಲಿ ಅಧಿಕಾರ ಪಡೆಯಲು ಅವಕಾಶವಿಲ್ಲ. ಪೊಲೀಸ್ ಕೇಸ್ ಹಾಕಿಸಿಕೊಳ್ಳಲು, ಜೈಲಿಗೆ ಹೋಗಲು ಮಾತ್ರ ನಿಷ್ಟಾವಂತರು ಬೇಕೆ?” ಎಂಬ ಅಭಿಯಾನ ಶುರು ಹಚ್ಚಿಕೊಂಡಿದ್ದಾರೆ. ಬಹುಸಂಖ್ಯಾತ ನಾಮಧಾರಿ ಜಾತಿಯ ಭಟ್ಕಳದ ಗೋವಿಂದ ನಾಯ್ಕ್‌ಗೆ ಟಿಕೆಟ್ ಕೊಡುವಂತೆ ಒತ್ತಾಯಿಸಲಾಗಿತ್ತು. ಕೊನೆ ದಿನದವರೆಗೂ ಹಿಂದೂ ಸಂಘಟನೆಯ ಗೋವಿಂದ ನಾಯ್ಕರಿಗೆ ಟಿಕೆಟ್ ಎಂಬ ವಾತಾವರಣವೂ ಇತ್ತು. ಅಂತಿಮವಾಗಿ ಗೋವಿಂದ ನಾಯ್ಕರಿಗೆ ಟಿಕೆಟ್ ಕೊಡದಿರುವುದು ಹಿಂದುತ್ವ ಕಾರ್ಯಕರ್ತರನ್ನು ಕೆರಳಿಸಿದೆ.

ಕೆ.ಜಿ.ನಾಯ್ಕ್

ಸಾಮಾಜಿಕ ಜಾಲ ತಾಣದಲ್ಲಿ ದೀವರು[ನಾಮಧಾರಿ]ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಚರ್ಚೆ ಜೋರಾಗಿದೆ. 32 ವರ್ಷದಿಂದ ನಾನು ಬಿಜೆಪಿಯ ವಿವಿಧ ಸಂಘಟನೆಯಲ್ಲಿ ಸಕ್ರಿಯನಾಗಿದ್ದೇನೆ. ಜಿಲ್ಲಾಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳಿದವರಲ್ಲಿ ನಾನೇ ಹಿರಿಯ. ಒಮ್ಮೆ ಅವಕಾಶ ಕೊಡದಿದ್ದರೆ ಪಕ್ಷದ ಸಂಘಟನೆಯಲ್ಲಿ ಮುಂದುವರಿಯಲಾರೆ. ಕಳೆದ ಮೂರು ಬಾರಿ ಕರಾವಳಿ ಕಡೆಯವರಿಗೆ ಅವಕಾಶ ಕೊಟ್ಟರೂ ಗೆಲ್ಲಲಾಗಲಿಲ್ಲ. ಈ ಬಾರಿ ಘಟ್ಟದ ಮೇಲಿನ ನನಗೆ ಟಿಕೆಟ್ ಕೊಡಿಯೆಂದು ಸಿದ್ದಾಪುರದ ಕೆ.ಜಿ.ನಾಯ್ಕ್ ಬೇಡಿಕೆ ಇಟ್ಟಿದ್ದರು. ಅವರೀಗ ಒಳಗೊಳಗೆ ಬುಸುಗುಡುತ್ತಿದ್ದಾರೆಂಬ ಮಾತು ಬಿಜೆಪಿ ವಲಯಲ್ಲಿ ಕೇಳಿಬರುತ್ತಿದೆ. ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯ್ಕ್, ಗೋಕರ್ಣದ ನಾಗರಾಜ್ ನಾಯ್ಕ್ ತೊರ್ಕೆ ಹತಾಶೆಲ್ಲಿದ್ದಾರೆ.

ಈ ಗೊಣಗಾಟದ ನಡುವೆಯೇ ಅಂಕೋಲಾದ ಪಕ್ಕಾ ಸಂಘಪರಿವಾರಿ-ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ್ ಮತ್ತು ಭಟ್ಕಳ ಮೂಲದ ಹೈಕೋರ್ಟ್ ವಕೀಲ ದತ್ತಾತ್ರೇಯ ನಾಯ್ಕ್ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ.. .ಹಣವಿರುವವರಿಗೆ ಟಿಕೆಟ್ ಎಂತಾದರೆ ಹೋರಾಟದಲ್ಲಿ, ಸಂಘಟನೆಯಲ್ಲಿ ಕೇಸ್ ಹಾಕಿಸಿಕೊಳ್ಳುವ ನಿಷ್ಟಾವಂತರ ಪಾಡೇನು? ಎಂದು ನಾಯ್ಕ್ ಪ್ರಶ್ನಿಸುತ್ತಾರೆ. ಸಂಘ ಮೂಲದಿಂದ ಬಂದು 33 ವರ್ಷದಿಂದ ಪಾರ್ಟಿ ಕೆಲಸ ಮಾಡುತ್ತಿರವ ನನಗೆ ಟಿಕೆಟ್ ಕೊಡಿಸಿಯೆಂದು ಕಾಗೇರಿ, ಹೆಬ್ಬಾರ್, ಅನಂತ್ ಹೆಗಡೆ ಮನೆ ಬಾಗಿಲಿಗೆ ಅಲೆದಿದ್ದೇನೆ.. ಅವರ‍್ಯಾರೂ ಪ್ರಯತ್ನ ಮಾಡಿಲ್ಲ. ನಿಷ್ಟಾವಂತರಿಗೆ ನೋವಾಗಿದೆ. ಅದಕ್ಕಾಗಿ ಬಂಡಾಯ ಸ್ಪರ್ಧೆಯೆಂದು ನಾರ್ವೇಕರ್ ಸಂದಾನಕ್ಕೆ ಬಂದಿದ್ದ ಜಿಲ್ಲಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗೆ ಹೇಳಿಕಳಿಸಿದ್ದರೆ ಎನ್ನಲಾಗಿದೆ.

ಒಟ್ಟಿನಲ್ಲಿ ಈ ಬಂಡಾಯದಿಂದ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರುವುದು ಕಷ್ಟವಾಗಿದೆಯೆಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...