Homeಕರ್ನಾಟಕಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

"ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ" ‌ಎಂದು ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

- Advertisement -
- Advertisement -

“ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ” ‌ಎಂದು ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಹಂಸಲೇಖ ಅವರ ವಿರುದ್ಧ ನಡೆಯುತ್ತಿರುವ ವಿಷಾದಕಾರಿ ಬೆಳವಣಿಗೆಗಳನ್ನು ಖಂಡಿಸಿ, ತುಮಕೂರಿನ ‘ದಲಿತ ಅಲ್ಪಸಂಖ್ಯಾತ ಹಿಂದುಳಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಹಂಸಲೇಖರ ಪರ ಮಾತನಾಡಿದರು.

ಜಿ.ಪರಮೇಶ್ವರ ಅವರು ಮಾತನಾಡಿ, “ಹಂಸಲೇಖ ಅವರು ಯಾರಿಗಾದರೂ ಅವಮಾನ ಮಾಡಬೇಕೆಂದು ಹೇಳಲಿಲ್ಲ. ಯಾವುದೇ ಜಾತಿಯ ವ್ಯವಸ್ಥೆಗೆ ಅವರು ಅವಮಾನ ಮಾಡಬೇಕು ಎಂದು ಹೇಳಲಿಲ್ಲ. ಸಾಂದರ್ಭಿಕವಾಗಿ ಆಡಿದಂತಹ ಮಾತನ್ನು ಜಾತೀಯ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡುವಂತಹದ್ದು ತಪ್ಪು. ಈ ಬೆಳವಣಿಗೆಯನ್ನು ನಾನು ಖಂಡಿಸುತ್ತೇನೆ” ಎಂದರು.

“ವಿಧಾನ ಪರಿಷತ್‌‌ ಚುನಾವಣೆಗೆ ಸ್ಪರ್ಧಿಸಿರುವ ನಮ್ಮ ಪಕ್ಷದ ಅಭ್ಯರ್ಥಿ ರಾಜೇಂದ್ರ ಅವರ ನಾಮಪತ್ರ ಸಲ್ಲಿಸಿ ಬರುವಾಗ, ನಮಗೆ ಪ್ರತಿಭಟನೆಯ ದೃಶ್ಯ ಕಂಡಿತು. ತಕ್ಷಣ ನಾವು ಮೂರು ಜನ (ಜಿ.ಪರಮೇಶ್ವರ, ರಾಜಣ್ಣ, ಟಿ.ಬಿ.ಜಯಚಂದ್ರ) ಮಾತನಾಡಿಕೊಂಡು, ನಾವು ಇದರಲ್ಲಿ ಭಾಗಿಯಾಗಬೇಕೆಂದು ಬಂದೆವು” ಎಂದು ಅವರು ತಿಳಿಸಿದರು.

“ಬಹುಸಂಖ್ಯಾತ ಸಮುದಾಯವನ್ನು ಸಾವಿರಾರು ವರ್ಷಗಳಿಂದ ಶೋಷಣೆ ಮಾಡುತ್ತಿರುವಂತಹ ವರ್ಗ ಇಂದು ಮತ್ತೊಂದು ಬಾರಿ ಅಂತಹದ್ದೇ ಪ್ರಯತ್ನ ಮಾಡುತ್ತಿದೆ ಎಂಬುದನ್ನು ನಾವು ಖಂಡಿಸಬೇಕಾಗಿದೆ. ಜಾತೀಯ ವ್ಯವಸ್ಥೆ ನಾವು ಮಾಡಿಕೊಂಡಿರುವಂತಹದ್ದು, ಅಂದರೆ ಮನುಷ್ಯ ಮಾಡಿಕೊಂಡಿರುವಂತಹದ್ದು. ಮನುಷ್ಯ ಮನುಷ್ಯನನ್ನು ಅಸಮಾನತೆಯಿಂದ ಕಾಣಲಾಗುತ್ತಿದೆ, ಶೋಷಣೆ ಮಾಡಲಾಗುತ್ತಿದೆ. ಇಪತ್ತೊಂದನೆ ಶತಮಾನಕ್ಕೆ ಕಾಲಿಟ್ಟಿದ್ದರೂ ಆ ಶೋಷಣೆ ತಪ್ಪಿಲ್ಲ. ಆ ಶೋಷಣೆಯನ್ನು ತಪ್ಪಿಸುವ ಯಾವುದೇ ಸೂಚನೆಗಳೂ ಕಾಣುತ್ತಿಲ್ಲ” ಎಂದು ವಿಷಾದಿಸಿದರು.


ಇದನ್ನೂ ಓದಿರಿ: ಹಂಸಲೇಖ ಪ್ರಕರಣ ಹಿನ್ನೆಲೆ: ಪೇಜಾವರ ಶ್ರೀಗಳ ಹಳೆಯ ವಿಡಿಯೊ ವೈರಲ್‌


ಕೆ.ಎನ್‌.ರಾಜಣ್ಣ ಮಾತನಾಡಿ, “ಹಂಸಲೇಖ ಅವರು ಹೇಳಿರುವಂತಹದರಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಜಾತಿಯ ಬಣ್ಣವನ್ನು ಕಟ್ಟಿ, ಈ ಅಸ್ಪೃಶ್ಯತೆಯನ್ನು ಇನ್ನು ಬಹಳಷ್ಟು ವರ್ಷಗಳ ಕಾಲ ಮುಂದುವರಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಮಾತುಗಳನ್ನು ಹಂಸಲೇಖ ಅವರ ವಿರುದ್ಧ ಆಡುತ್ತಿದ್ದಾರೆ” ಎಂದು ಆರೋಪಿಸಿದರು.

“ಹಂಸಲೇಖ ಅವರು ದೂರದವರೇನಲ್ಲ. ತುಮಕೂರಿನವರು, ಇದೇ ನಗರದಲ್ಲಿ ಹುಟ್ಟಿ ಬೆಳೆದವರು. ಅವರು ಯಾವತ್ತೂ ಯಾವುದೇ ಸಮಾಜವಾಗಲೀ, ಯಾವುದೇ ಧರ್ಮದ ವಿರುದ್ಧವಾಗಲೀ ಮಾತನಾಡಿದವರಲ್ಲ. ಅವರು ಆಡಿರುವಂತಹ ಮಾತನ್ನು ಇವರು ತಿರುಚಿ ಅಪವಾದವನ್ನು ತರುವಂತಹ ಉನ್ನಾರವನ್ನು ಈ ಮುಂದುವರಿದ ಸಮಾಜಗಳು ಮಾಡುತ್ತಿರುವುದು ಎಲ್ಲರಿಗೂ ಸ್ಪಷ್ಟವಾಗಿದೆ. ನಾವು ಎಲ್ಲರೂ ಇದನ್ನು ಖಂಡಿಸುತ್ತೇವೆ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ನಾವು ಮಾಡಲು ಹೊರಟಿದ್ದೇವೆ” ಎಂದರು.

ಟಿ.ಬಿ.ಜಯಚಂದ್ರ ಅವರು ಮಾತನಾಡಿ, “ಹಂಸಲೇಖ ಅವರು ಕರ್ನಾಟಕದ ಹೆಮ್ಮೆಯ ಪುತ್ರ. ವಾಸ್ತವಿಕವಾಗಿರುವ, ಮನಸ್ಸಿನಲ್ಲಿರುವ ನೋವನ್ನು ಅವರು ಹೇಳಿದಾಗ ಅವರನ್ನು ಅವಹೇಳನ ಮಾಡುವಂತಹದ್ದು ಸರಿಯಲ್ಲ. ಹಂಸಲೇಖ ಅವರ ಜೊತೆ ನಾವಿದ್ದೇವೆ ಎಂಬುದನ್ನು ತೋರಿಸಲೆಂದು ನಾವಿಲ್ಲಿಗೆ ಬಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನಬದ್ಧವಾಗಿ ಅಸ್ಪೃಶ್ಯತೆಯನ್ನು ನಿವಾರಣೆ ಮಾಡಿದರೂ ನಿಜಸ್ಥಿತಿಯಲ್ಲಿ ಅದು ಸಮಾಜದಲ್ಲಿದೆ. ಇದನ್ನು ಸಹಿಸಲು ಆಗುವುದಿಲ್ಲ, ಸಹಿಸಬಾರದು ಎಂಬ ಹಿನ್ನೆಲೆಯಲ್ಲಿ ಹಂಸಲೇಖ ಅವರು ಹೇಳಿರುವಂತಹ ವಿಚಾರಕ್ಕೆ ನಾವು ಸದಾ ಬೆಂಬಲವಾಗಿ ಇರಬೇಕು. ನಿಮ್ಮ ಹೋರಾಟದೊಂದಿಗೆ ನಾವು ಕೂಡ ಇದ್ದೇವೆ ಎಂಬುದನ್ನು ಘಂಟಾಘೋಷವಾಗಿ ಹೇಳಲು ಸಿದ್ಧವಿದ್ದೇವೆ” ಎಂದರು.

ಮುಖಂಡರಾದ ನಿಕೇತ್‌ ರಾಜ್‌ ಮೌರ್ಯ, ಕೊಟ್ಟ ಶಂಕರ್‌‌, ನರಸಿಂಹಮೂರ್ತಿ ಮರಳೂರು, ವಿರೂಪಾಕ್ಷ ಡಾಗೇರಹಳ್ಳಿ, ರಫೀಕ್‌ ಅಹಮದ್‌ ಹಾಗೂ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...