Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...