Homeಮುಖಪುಟಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ವಿಡಿಯೊ ತಿರುಚಿ ಪೋಸ್ಟ್‌ ಮಾಡಿದ್ದ ಬಿಜೆಪಿಯ ವಕ್ತಾರ ಸಂಬಿತ್ ಪಾತ್ರ ವಿರುದ್ಧ ಎಫ್‌ಐಆರ್‌‌ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಪೊಲೀಸರು ಪ್ರಕರಣ ದಾಖಲಿಸದಿರುವಾಗ ಆಮ್‌ಆದ್ಮಿ ಪಾರ್ಟಿಯ ಶಾಸಕಿ ಆತಿಶಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಪಾತ್ರ ಅವರು ಜನವರಿ 30ರಂದು ವಿಡಿಯೊವನ್ನು ಪೋಸ್ಟ್‌ ಮಾಡಿ ನಂತರ ಡಿಲೀಟ್ ಮಾಡಿದ್ದರು.

ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್‌ನ್ಯೂಸ್‌’ ಸಹ ಸಂಸ್ಥಾಪಕ ಮೊಹಮದ್‌ ಜುಭೈರ್‌‌ ಅವರು ಮಂಗಳವಾರ ಟ್ವೀಟ್ ಮಾಡಿ, ಸಂಬೀತ್‌ ಪಾತ್ರ ಅವರು ತಿರುಚಿದ ವಿಡಿಯೊದ ಅರ್ಕೈವ್‌ ಲಿಂಕ್‌ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್‌ ಮಾಡಿದ್ದ ‘ಆಲ್ಟ್‌ ನ್ಯೂಸ್‌’, ಸಂಬಿತ್ ವಿಡಿಯೊ ತಿರುಚಿದ್ದಾರೆ ಎಂಬದನ್ನು ಪತ್ತೆ ಹಚ್ಚಿತ್ತು. ಅರವಿಂದ ಕೇಜ್ರಿವಾಲ್‌ ಅವರು ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡಿದ್ದರೂ, ವಿಡಿಯೊದ ತುಣುಕುಗಳನ್ನು ಕಟ್ ಮಾಡಿ ಪೋಣಿಸಿ, ಕೇಜ್ರಿವಾಲ್‌ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ಸಂಬಿತ್‌ ಬಿಂಬಿಸಿದ್ದರು.

“ಕೇಜ್ರಿವಾಲ್‌ ವಿರುದ್ಧ ಜನರನ್ನು ಎತ್ತಿಕಟ್ಟಲೆಂದು ಸಂಬಿತ್‌ ಯತ್ನಿಸಿದ್ದಾರೆ” ಎಂದು ಆತಿಶಿ ಆರೋಪಿಸಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದು ಅಪರಾಧ ಕೃತ್ಯವಾಗಿದ್ದು, ಪ್ರಕರಣ ದಾಖಲಿಸಬೇಕಾದದ್ದು ಪೊಲೀಸರ ಜವಾಬ್ದಾರಿ ಎಂದು ಅರ್ಜಿಯಲ್ಲಿ ಅವರು ಕೋರಿದ್ದರು.


ಇದನ್ನೂ ಓದಿರಿ: ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ


ಸಂಬಿತ್ ಪಾತ್ರ ಈ ಹಿಂದೆಯೂ ಸುಳ್ಳುಗಳನ್ನು ಹಬ್ಬಿಸಿ ಟೀಕೆಗೆ ಒಳಗಾಗಿದ್ದಾರೆ. ಎಐಸಿಸಿ (ಕಾಂಗ್ರೆಸ್) ಸಂಶೋಧನಾ ವಿಭಾಗದ ನಕಲಿ ಲೆಟರ್‌ಹೆಡ್ ಬಳಸಿ, “ಸುಳ್ಳು ಮತ್ತು ಕಲ್ಪಿತ” ವಿಷಯವನ್ನು ಮುದ್ರಿಸಿ ಅಪಪ್ರಚಾರ ಮಾಡಿದ ಆರೋಪದ ಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಛತ್ತೀಸಘಡದಲ್ಲಿ ಎಫ್‌ಐಆರ್ ದಾಖಲಾಗಿತ್ತು.

ವೃತ್ತಿಯಲ್ಲಿ ವೈದ್ಯರಾದ ಸಂಬಿತ್ ಪಾತ್ರಾ ಬಿಜೆಪಿಯ ರಾಷ್ಟ್ರೀಯ ವಕ್ತಾರರ ಪೈಕಿ ಹೆಚ್ಚು ಪ್ರಚಾರದಲ್ಲಿರುವ ವ್ಯಕ್ತಿಯಾಗಿದ್ದಾರೆ. ರಾಷ್ಟ್ರೀಯ ಚಾನೆಲ್‌ಗಳ ಚರ್ಚೆಗಳಲ್ಲಿ ಪಕ್ಷದ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಅವರು, ಪ್ರತಿಪಕ್ಷಗಳ ವಿರುದ್ಧ ಅದರಲ್ಲೂ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಲು ಕೆಲವೊಮ್ಮೆ ಸತ್ಯ, ಬಹುಪಾಲು ಸಂದರ್ಭಗಳಲ್ಲಿ ಅರೆಸತ್ಯ, ಸುಳ್ಳು ಮತ್ತು ತಿರುಚಲ್ಪಟ್ಟ ಸಂಗತಿಗಳನ್ನು ತಮ್ಮ ಅಸ್ತ್ರಗಳನ್ನಾಗಿ ಬಳಸುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ ಟ್ವಿಟರ್ ಅವರ ನೆಚ್ಚಿನ ವೇದಿಕೆಯಾಗಿದೆ. ಅವರು ನಾಲ್ಕು ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲು ಅವರು ಟ್ವಿಟರ್ ಬಳಸುತ್ತಾರೆ. ಇವರು ಮಾಡಿದ್ದ ಟೂಲ್‌ಕಿಟ್ ಟ್ವೀಟ್‌ಗೆ ಟ್ವಿಟರ್ ಕಂಪನಿ ’ತಿರುಚಲ್ಪಟ್ಟ ಸಂಗತಿ’ (’ಮ್ಯಾನಿಪುಲೆಟೆಡ್ ಮೀಡಿಯಾ’) ಎಂಬ ಟ್ಯಾಗ್ ಹಾಕಿತ್ತು. ಅವರು ರಾಷ್ಟ್ರೀಯ ಚಾನೆಲ್‌ಗಳಲ್ಲಿ ತಪ್ಪು ಮಾಹಿತಿಯನ್ನು ಉತ್ತೇಜಿಸುತ್ತಿದ್ದಾರೆ, ಟ್ವೀಟ್‌ಗಳಲ್ಲಿ ತಿರುಚಿದ ವಿಡಿಯೋ-ಮಾಹಿತಿ ಹಾಕುತ್ತಾರೆ ಎಂದು ಹಲವಾರು ಫ್ಯಾಕ್ಟ್‌ಚೆಕ್‌ಗಳು ಹಲವಾರು ಸಲ ನಿರೂಪಿಸಿವೆ. ಆದರೂ ಬಿಜೆಪಿಯ ಜವಾಬ್ದಾರಿಯುತ ಸ್ಥಾನದಲ್ಲಿ ಸಂಬಿತ್‌ ಮುಂದುವರಿದಿದ್ದಾರೆ.


ಇದನ್ನೂ ಓದಿರಿ: ರೈತರ ಕುರಿತು ಅವಹೇಳನಕಾರಿ ಪೋಸ್ಟ್: ಮುಂಬೈನಲ್ಲಿ ಕಂಗನಾ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...