Homeಮುಖಪುಟಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ವಿಡಿಯೊ ತಿರುಚಿ ಪೋಸ್ಟ್‌ ಮಾಡಿದ್ದ ಬಿಜೆಪಿಯ ವಕ್ತಾರ ಸಂಬಿತ್ ಪಾತ್ರ ವಿರುದ್ಧ ಎಫ್‌ಐಆರ್‌‌ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಪೊಲೀಸರು ಪ್ರಕರಣ ದಾಖಲಿಸದಿರುವಾಗ ಆಮ್‌ಆದ್ಮಿ ಪಾರ್ಟಿಯ ಶಾಸಕಿ ಆತಿಶಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಪಾತ್ರ ಅವರು ಜನವರಿ 30ರಂದು ವಿಡಿಯೊವನ್ನು ಪೋಸ್ಟ್‌ ಮಾಡಿ ನಂತರ ಡಿಲೀಟ್ ಮಾಡಿದ್ದರು.

ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್‌ನ್ಯೂಸ್‌’ ಸಹ ಸಂಸ್ಥಾಪಕ ಮೊಹಮದ್‌ ಜುಭೈರ್‌‌ ಅವರು ಮಂಗಳವಾರ ಟ್ವೀಟ್ ಮಾಡಿ, ಸಂಬೀತ್‌ ಪಾತ್ರ ಅವರು ತಿರುಚಿದ ವಿಡಿಯೊದ ಅರ್ಕೈವ್‌ ಲಿಂಕ್‌ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್‌ ಮಾಡಿದ್ದ ‘ಆಲ್ಟ್‌ ನ್ಯೂಸ್‌’, ಸಂಬಿತ್ ವಿಡಿಯೊ ತಿರುಚಿದ್ದಾರೆ ಎಂಬದನ್ನು ಪತ್ತೆ ಹಚ್ಚಿತ್ತು. ಅರವಿಂದ ಕೇಜ್ರಿವಾಲ್‌ ಅವರು ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡಿದ್ದರೂ, ವಿಡಿಯೊದ ತುಣುಕುಗಳನ್ನು ಕಟ್ ಮಾಡಿ ಪೋಣಿಸಿ, ಕೇಜ್ರಿವಾಲ್‌ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ಸಂಬಿತ್‌ ಬಿಂಬಿಸಿದ್ದರು.

“ಕೇಜ್ರಿವಾಲ್‌ ವಿರುದ್ಧ ಜನರನ್ನು ಎತ್ತಿಕಟ್ಟಲೆಂದು ಸಂಬಿತ್‌ ಯತ್ನಿಸಿದ್ದಾರೆ” ಎಂದು ಆತಿಶಿ ಆರೋಪಿಸಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದು ಅಪರಾಧ ಕೃತ್ಯವಾಗಿದ್ದು, ಪ್ರಕರಣ ದಾಖಲಿಸಬೇಕಾದದ್ದು ಪೊಲೀಸರ ಜವಾಬ್ದಾರಿ ಎಂದು ಅರ್ಜಿಯಲ್ಲಿ ಅವರು ಕೋರಿದ್ದರು.


ಇದನ್ನೂ ಓದಿರಿ: ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ


ಸಂಬಿತ್ ಪಾತ್ರ ಈ ಹಿಂದೆಯೂ ಸುಳ್ಳುಗಳನ್ನು ಹಬ್ಬಿಸಿ ಟೀಕೆಗೆ ಒಳಗಾಗಿದ್ದಾರೆ. ಎಐಸಿಸಿ (ಕಾಂಗ್ರೆಸ್) ಸಂಶೋಧನಾ ವಿಭಾಗದ ನಕಲಿ ಲೆಟರ್‌ಹೆಡ್ ಬಳಸಿ, “ಸುಳ್ಳು ಮತ್ತು ಕಲ್ಪಿತ” ವಿಷಯವನ್ನು ಮುದ್ರಿಸಿ ಅಪಪ್ರಚಾರ ಮಾಡಿದ ಆರೋಪದ ಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಛತ್ತೀಸಘಡದಲ್ಲಿ ಎಫ್‌ಐಆರ್ ದಾಖಲಾಗಿತ್ತು.

ವೃತ್ತಿಯಲ್ಲಿ ವೈದ್ಯರಾದ ಸಂಬಿತ್ ಪಾತ್ರಾ ಬಿಜೆಪಿಯ ರಾಷ್ಟ್ರೀಯ ವಕ್ತಾರರ ಪೈಕಿ ಹೆಚ್ಚು ಪ್ರಚಾರದಲ್ಲಿರುವ ವ್ಯಕ್ತಿಯಾಗಿದ್ದಾರೆ. ರಾಷ್ಟ್ರೀಯ ಚಾನೆಲ್‌ಗಳ ಚರ್ಚೆಗಳಲ್ಲಿ ಪಕ್ಷದ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಅವರು, ಪ್ರತಿಪಕ್ಷಗಳ ವಿರುದ್ಧ ಅದರಲ್ಲೂ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಲು ಕೆಲವೊಮ್ಮೆ ಸತ್ಯ, ಬಹುಪಾಲು ಸಂದರ್ಭಗಳಲ್ಲಿ ಅರೆಸತ್ಯ, ಸುಳ್ಳು ಮತ್ತು ತಿರುಚಲ್ಪಟ್ಟ ಸಂಗತಿಗಳನ್ನು ತಮ್ಮ ಅಸ್ತ್ರಗಳನ್ನಾಗಿ ಬಳಸುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ ಟ್ವಿಟರ್ ಅವರ ನೆಚ್ಚಿನ ವೇದಿಕೆಯಾಗಿದೆ. ಅವರು ನಾಲ್ಕು ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲು ಅವರು ಟ್ವಿಟರ್ ಬಳಸುತ್ತಾರೆ. ಇವರು ಮಾಡಿದ್ದ ಟೂಲ್‌ಕಿಟ್ ಟ್ವೀಟ್‌ಗೆ ಟ್ವಿಟರ್ ಕಂಪನಿ ’ತಿರುಚಲ್ಪಟ್ಟ ಸಂಗತಿ’ (’ಮ್ಯಾನಿಪುಲೆಟೆಡ್ ಮೀಡಿಯಾ’) ಎಂಬ ಟ್ಯಾಗ್ ಹಾಕಿತ್ತು. ಅವರು ರಾಷ್ಟ್ರೀಯ ಚಾನೆಲ್‌ಗಳಲ್ಲಿ ತಪ್ಪು ಮಾಹಿತಿಯನ್ನು ಉತ್ತೇಜಿಸುತ್ತಿದ್ದಾರೆ, ಟ್ವೀಟ್‌ಗಳಲ್ಲಿ ತಿರುಚಿದ ವಿಡಿಯೋ-ಮಾಹಿತಿ ಹಾಕುತ್ತಾರೆ ಎಂದು ಹಲವಾರು ಫ್ಯಾಕ್ಟ್‌ಚೆಕ್‌ಗಳು ಹಲವಾರು ಸಲ ನಿರೂಪಿಸಿವೆ. ಆದರೂ ಬಿಜೆಪಿಯ ಜವಾಬ್ದಾರಿಯುತ ಸ್ಥಾನದಲ್ಲಿ ಸಂಬಿತ್‌ ಮುಂದುವರಿದಿದ್ದಾರೆ.


ಇದನ್ನೂ ಓದಿರಿ: ರೈತರ ಕುರಿತು ಅವಹೇಳನಕಾರಿ ಪೋಸ್ಟ್: ಮುಂಬೈನಲ್ಲಿ ಕಂಗನಾ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...