Homeಮುಖಪುಟಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ವಿಡಿಯೊ ತಿರುಚಿ ಪೋಸ್ಟ್‌ ಮಾಡಿದ್ದ ಬಿಜೆಪಿಯ ವಕ್ತಾರ ಸಂಬಿತ್ ಪಾತ್ರ ವಿರುದ್ಧ ಎಫ್‌ಐಆರ್‌‌ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಪೊಲೀಸರು ಪ್ರಕರಣ ದಾಖಲಿಸದಿರುವಾಗ ಆಮ್‌ಆದ್ಮಿ ಪಾರ್ಟಿಯ ಶಾಸಕಿ ಆತಿಶಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಪಾತ್ರ ಅವರು ಜನವರಿ 30ರಂದು ವಿಡಿಯೊವನ್ನು ಪೋಸ್ಟ್‌ ಮಾಡಿ ನಂತರ ಡಿಲೀಟ್ ಮಾಡಿದ್ದರು.

ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್‌ನ್ಯೂಸ್‌’ ಸಹ ಸಂಸ್ಥಾಪಕ ಮೊಹಮದ್‌ ಜುಭೈರ್‌‌ ಅವರು ಮಂಗಳವಾರ ಟ್ವೀಟ್ ಮಾಡಿ, ಸಂಬೀತ್‌ ಪಾತ್ರ ಅವರು ತಿರುಚಿದ ವಿಡಿಯೊದ ಅರ್ಕೈವ್‌ ಲಿಂಕ್‌ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್‌ ಮಾಡಿದ್ದ ‘ಆಲ್ಟ್‌ ನ್ಯೂಸ್‌’, ಸಂಬಿತ್ ವಿಡಿಯೊ ತಿರುಚಿದ್ದಾರೆ ಎಂಬದನ್ನು ಪತ್ತೆ ಹಚ್ಚಿತ್ತು. ಅರವಿಂದ ಕೇಜ್ರಿವಾಲ್‌ ಅವರು ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡಿದ್ದರೂ, ವಿಡಿಯೊದ ತುಣುಕುಗಳನ್ನು ಕಟ್ ಮಾಡಿ ಪೋಣಿಸಿ, ಕೇಜ್ರಿವಾಲ್‌ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ಸಂಬಿತ್‌ ಬಿಂಬಿಸಿದ್ದರು.

“ಕೇಜ್ರಿವಾಲ್‌ ವಿರುದ್ಧ ಜನರನ್ನು ಎತ್ತಿಕಟ್ಟಲೆಂದು ಸಂಬಿತ್‌ ಯತ್ನಿಸಿದ್ದಾರೆ” ಎಂದು ಆತಿಶಿ ಆರೋಪಿಸಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದು ಅಪರಾಧ ಕೃತ್ಯವಾಗಿದ್ದು, ಪ್ರಕರಣ ದಾಖಲಿಸಬೇಕಾದದ್ದು ಪೊಲೀಸರ ಜವಾಬ್ದಾರಿ ಎಂದು ಅರ್ಜಿಯಲ್ಲಿ ಅವರು ಕೋರಿದ್ದರು.


ಇದನ್ನೂ ಓದಿರಿ: ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ


ಸಂಬಿತ್ ಪಾತ್ರ ಈ ಹಿಂದೆಯೂ ಸುಳ್ಳುಗಳನ್ನು ಹಬ್ಬಿಸಿ ಟೀಕೆಗೆ ಒಳಗಾಗಿದ್ದಾರೆ. ಎಐಸಿಸಿ (ಕಾಂಗ್ರೆಸ್) ಸಂಶೋಧನಾ ವಿಭಾಗದ ನಕಲಿ ಲೆಟರ್‌ಹೆಡ್ ಬಳಸಿ, “ಸುಳ್ಳು ಮತ್ತು ಕಲ್ಪಿತ” ವಿಷಯವನ್ನು ಮುದ್ರಿಸಿ ಅಪಪ್ರಚಾರ ಮಾಡಿದ ಆರೋಪದ ಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಛತ್ತೀಸಘಡದಲ್ಲಿ ಎಫ್‌ಐಆರ್ ದಾಖಲಾಗಿತ್ತು.

ವೃತ್ತಿಯಲ್ಲಿ ವೈದ್ಯರಾದ ಸಂಬಿತ್ ಪಾತ್ರಾ ಬಿಜೆಪಿಯ ರಾಷ್ಟ್ರೀಯ ವಕ್ತಾರರ ಪೈಕಿ ಹೆಚ್ಚು ಪ್ರಚಾರದಲ್ಲಿರುವ ವ್ಯಕ್ತಿಯಾಗಿದ್ದಾರೆ. ರಾಷ್ಟ್ರೀಯ ಚಾನೆಲ್‌ಗಳ ಚರ್ಚೆಗಳಲ್ಲಿ ಪಕ್ಷದ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಅವರು, ಪ್ರತಿಪಕ್ಷಗಳ ವಿರುದ್ಧ ಅದರಲ್ಲೂ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಲು ಕೆಲವೊಮ್ಮೆ ಸತ್ಯ, ಬಹುಪಾಲು ಸಂದರ್ಭಗಳಲ್ಲಿ ಅರೆಸತ್ಯ, ಸುಳ್ಳು ಮತ್ತು ತಿರುಚಲ್ಪಟ್ಟ ಸಂಗತಿಗಳನ್ನು ತಮ್ಮ ಅಸ್ತ್ರಗಳನ್ನಾಗಿ ಬಳಸುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ ಟ್ವಿಟರ್ ಅವರ ನೆಚ್ಚಿನ ವೇದಿಕೆಯಾಗಿದೆ. ಅವರು ನಾಲ್ಕು ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲು ಅವರು ಟ್ವಿಟರ್ ಬಳಸುತ್ತಾರೆ. ಇವರು ಮಾಡಿದ್ದ ಟೂಲ್‌ಕಿಟ್ ಟ್ವೀಟ್‌ಗೆ ಟ್ವಿಟರ್ ಕಂಪನಿ ’ತಿರುಚಲ್ಪಟ್ಟ ಸಂಗತಿ’ (’ಮ್ಯಾನಿಪುಲೆಟೆಡ್ ಮೀಡಿಯಾ’) ಎಂಬ ಟ್ಯಾಗ್ ಹಾಕಿತ್ತು. ಅವರು ರಾಷ್ಟ್ರೀಯ ಚಾನೆಲ್‌ಗಳಲ್ಲಿ ತಪ್ಪು ಮಾಹಿತಿಯನ್ನು ಉತ್ತೇಜಿಸುತ್ತಿದ್ದಾರೆ, ಟ್ವೀಟ್‌ಗಳಲ್ಲಿ ತಿರುಚಿದ ವಿಡಿಯೋ-ಮಾಹಿತಿ ಹಾಕುತ್ತಾರೆ ಎಂದು ಹಲವಾರು ಫ್ಯಾಕ್ಟ್‌ಚೆಕ್‌ಗಳು ಹಲವಾರು ಸಲ ನಿರೂಪಿಸಿವೆ. ಆದರೂ ಬಿಜೆಪಿಯ ಜವಾಬ್ದಾರಿಯುತ ಸ್ಥಾನದಲ್ಲಿ ಸಂಬಿತ್‌ ಮುಂದುವರಿದಿದ್ದಾರೆ.


ಇದನ್ನೂ ಓದಿರಿ: ರೈತರ ಕುರಿತು ಅವಹೇಳನಕಾರಿ ಪೋಸ್ಟ್: ಮುಂಬೈನಲ್ಲಿ ಕಂಗನಾ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...