Homeಮುಖಪುಟಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

- Advertisement -
- Advertisement -

ಕಳೆದ ವರ್ಷ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಪ್ರಕರಣ ದಾಖಲಿಸಲು ಉತ್ತರ ಪ್ರದೇಶ ಸರಕಾರವು ಪೊಲೀಸರಿಗೆ ಅನುಮತಿ ನೀಡಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನಾಲ್ವರಿಗೂ ಜಾಮೀನು ದೊರೆತಿದೆ.

ಪೊಲೀಸರು ಆರೋಪಿಗಳ ವಿರುದ್ಧ ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು), 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು) ಅಡಿ ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ.

ಈ ಪ್ರಕರಣವು ಜನವರಿ 26, 2020ರ ಹಿಂದಿನದು. ಸಿಎಎ ಮತ್ತು ಎನ್‌ಆರ್‌ಸಿ ಹೋರಾಟದಲ್ಲಿ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ ಎಂದು ಆರೋಪಿಸಲಾಯಿತು. ಪೊಲೀಸರು ಮರುದಿನ ಮೀರತ್‌ನ ಓಂ ವೀರ್ (35), ಕಾನ್ಪುರ ನಗರದ ಓಂ ಕರ್ ನಾಥ್ ಕುಶ್ವಾಹ (57), ಇಟಾವಾಹ್‌ನ ರಾಹುಲ್ (21) ಮತ್ತು ಜಗ್‌ಸೀರ್ (21) ವಿರುದ್ಧ ಎಫ್‌ಐಆರ್ ದಾಖಲಿಸಿದರು. ಪೋಸ್ಟರ್‌ಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳಿವೆ ಎಂದು ಪೊಲೀಸರು ಆರೋಪಿಸಿದ್ದಾರೆ.

2019ರಿಂದಲೂ ಉತ್ತರ ಪ್ರದೇಶ ಸರ್ಕಾರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತಿರುವುದು ನಡೆಯುತ್ತಿದೆ. ಈ ವರ್ಷದ ಮಾರ್ಚ್‌ನಲ್ಲಿ, ಉತ್ತರ ಪ್ರದೇಶ ವಿಧಾನಸಭೆಯು ಎರಡು ಮಸೂದೆಗಳನ್ನು ಅಂಗೀಕರಿಸಿತು. ಪ್ರತಿಭಟನಾಕಾರರಿಂದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿಯನ್ನು ವಸೂಲಿ ಮಾಡುವ ಮಸೂದೆಯೂ ಇತ್ತು. ಇದನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು.

ಸಿಎಎ ವಿರುದ್ಧ ಪ್ರತಿಭಟಿಸುವವರ ಮೇಲೆ, ವಿಶೇಷವಾಗಿ ಮುಸ್ಲಿಮರ ಮೇಲೆ ಪೊಲೀಸರು ಅತಿಯಾದ ಕ್ರಮ ಜರುಗಿಸಿದ್ದಾರೆ ಎಂದು ದಿ ವೈರ್‌ ಜಾಲತಾಣ ಹೇಳಿದೆ. ಪ್ರತಿಭಟನೆ ವೇಳೆ 22 ಮಂದಿ ಸಾವನ್ನಪ್ಪಿದ್ದರು. ಅದರಲ್ಲಿ ಬಹುತೇಕರು ಗೋಲಿಬಾರ್‌‌ ನಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಗಳಿವೆ.

ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ದೈಹಿಕ ಹಿಂಸೆ, ನಿದ್ರೆಗೆ ಅವಕಾಶ ನೀಡದಿರುವುದು ಸೇರಿದಂತೆ ಉತ್ತರ ಪ್ರದೇಶದ ಪೊಲೀಸರು ‘ತೀವ್ರ ಚಿತ್ರಹಿಂಸೆ’ ನೀಡಿದ್ದಾರೆ ಎಂದು ಸತ್ಯಶೋಧನೆಯ ವರದಿಯು ತಿಳಿಸಿದೆ. ಬಿಜ್ನೋರ್, ಮುಜಾಫರ್‌ನಗರ ಮತ್ತು ಫಿರೋಜಾಬಾದ್‌ನಲ್ಲಿ ಅಪ್ರಾಪ್ತರನ್ನು ಬಂಧಿಸಿ ಅವರಿಗೆ ಚಿತ್ರಹಿಂಸೆ ನೀಡಿದ ಆರೋಪವೂ ಇದೆ.


ಇದನ್ನೂ ಓದಿರಿ: ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...