Homeಸಾಹಿತ್ಯ-ಸಂಸ್ಕೃತಿಕಥೆಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ 'ನಗ್ನ 99'

ಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ ‘ನಗ್ನ 99’

ಈ ರಂಗಕೃತಿಯು ನಾಟಕಕಾರರ "ಸಕಲರೊಳು ಲಿಂಗಾತ್ಮ ಕಾಣಾ" ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹನಮಂತ ಹಾಲಿಗೇರಿ

ಕನ್ನಡದ ಯುವ ಬರಹಗಾರ ಹನಮಂತ ಹಾಲಿಗೇರಿಯವರ ಇದುವರೆಗಿನ ಸಾಹಿತ್ಯ ಅದು ಸಮಾಜಮುಖಿಯಾಗಿರುವಂತದ್ದು. ಬದುಕು ಮತ್ತು ಬರಹ ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ಆಶಯ ಅವರದು. ಅವರ ಕೆಂಗುಲಾಬಿ ಕಾದಂಬರಿ ಬಹಳ ಪ್ರಸಿದ್ದಿ ಪಡೆದು ಸಿನಿಮಾ ಆಗುವತ್ತ ಹೆಜ್ಜೆ ಇಟ್ಟರೆ, ಊರು ಸುಟ್ಟರೂ ಹನಮಪ್ಪ ಹೊರಗ ಎಂಬ ನಾಟಕ ಇದವರೆಗು 320 ಪ್ರದರ್ಶನಗಳನ್ನು ಕಂಡಿದ್ದು ಜೈ ಕೇಸರಿನಂದನ ಎಂಬ ಸಿನೆಮಾ ಆಗಿಯೂ ತೆರೆಕಂಡಿದೆ. ಇಂತಹ ಯುವಪ್ರತಿಭೆಯ ಹೊಸ ಕಥೆ ನಗ್ನ 99 ಎಂಬುದು ನಾಟಕರೂಪಕ್ಕೆ ಬಂದು ಪ್ರದರ್ಶನಕ್ಕೆ ಸಿದ್ದವಾಗಿದೆ.

ಏನಿದು ನಗ್ನ 99?

ಅರೆಹುಚ್ಚನೊಬ್ಬನ ಮಾನಸಿಕ ತೊಳಲಾಟಗಳ ಸುತ್ತ ಇರುವ ಈ ನಾಟಕ, ಸಮಾಜದ ತುಂಬಿಕೊಂಡಿರುವ ಹುಚ್ಚತನಗಳನ್ನು ಬಯಲಿಗೆಳೆಯುವ ಆಶಯ ಹೊಂದಿರುವಂಥದ್ದು. ಬುದ್ಧಿಮಾಂದ್ಯರಿಗೆ ಮತ್ತು ಅಂಗವಿಕಲರಿಗೂ ನಿಸರ್ಗದತ್ತ ಲೈಂಗಿಕ ಬದುಕು ದಕ್ಕಬೇಕು ಎಂಬ ಮನೋವೈಜ್ಞಾನಿಕ ನೆಲೆಯ ಆಶಯವನ್ನು ನಾಟಕ ಹೊಂದಿದೆ.

ವಯೋಮಾನಕ್ಕೆ ತಕ್ಕಂತೆ ಸಹಜ ಲೈಂಗಿಕತೆಗಾಗಿ ಹಪಹಪಿಸುತ್ತಿರುವ ಅರೆಹುಚ್ಚನ ವಯಕ್ತಿಕ ಬದುಕನ್ನು ಜಗಜ್ಜಾಹೀರುಗೊಳಿಸಲು ಸ್ಪರ್ಧೆಗಿಳಿಯುವ ಇಂದಿನ ದೃಶ್ಯ ಮಾದ್ಯಮಗಳ ಕ್ರೌರ್ಯದ ಹಸಿವನ್ನೂ ಸಹ ಈ ಕಥನ ಬೆತ್ತಲುಗೊಳಿಸುತ್ತದೆ. ಹುಚ್ಚನೊಬ್ಬ ಕಾಲೇಜು ಹುಡುಗಿಯರನ್ನ ದಾರಿಯಲ್ಲಿ ನಿಂತು ನೋಡುತ್ತಿದ್ದ ಎಂಬ ಏಕೈಕ ಕಾರಣಕ್ಕೆ ಅವನನ್ನು ಗಿಡಕ್ಕೆ ಕಟ್ಟಿಸುವ ಟಿವಿ ರಿಪೋರ್ಟರ್ ನಿತೀಶ್, ಕಾಲೇಜು ಹುಡುಗರಿಂದ ಆ ಹುಡುಗನ ಮುಖಮೋತಿಯೆನ್ನದೇ ರಕ್ತ ಒಸರುವಂತೆ ಹೊಡೆಸುವ ದೃಶ್ಯದಿಂದ ನಾಟಕ ಶುರುವಾಗುತ್ತದೆ.

ಮುಂದೆ ಹಲವಾರು ತಿರುವುಗಳನ್ನು ಪಡೆದುಕೊಂಡು ಸಮಾಜದ ಒರೆಕೋರೆಗಳನ್ನು ವಿಡಂಭಿಸುವ ಈ ನಾಟಕ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತದೆ, ತನ್ನ ಮನೆಯಲ್ಲಿನ ಸಾಕುಪ್ರಾಣಿಗಳು ಬೆದೆ ಬಂದಿದ್ದರೆ ಅವುಕ್ಕೆ ಊರೆಲ್ಲ ಹುಡುಕಾಡಿ ಸಂಗಾತಿಯನ್ನು ಕರೆತಂದು ಸಂಯೋಗ ಮಾಡಿಸುವ ಮನುಷ್ಯ, ತನ್ನ ಮನೆಯಲ್ಲಿನ ಬುದ್ಧಿ ಮಾಂದ್ಯರನ್ನು ಮಾತ್ರ ಪ್ರಾಣಿಗಳಿಗಿಂತ ಕಡೆಯಾಗಿ ನೋಡುವ ಮನೋ ಸ್ಥಿತಿ ಸಮಾಜದಲ್ಲಿದೆ. ಈ ವೈಪರಿತ್ಯದ ನಿಷ್ಕರುಣೆಯನ್ನು ಎತ್ತಿ ತೋರಿಸುವ ರಂಗಕೃತಿಯು ನಾಟಕಕಾರರ “ಸಕಲರೊಳು ಲಿಂಗಾತ್ಮ ಕಾಣಾ” ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

ಹೇಮಂತ್ ಕುಮಾರ್

ಮೊದಲ ಪ್ರದರ್ಶನ ಇದೇ ಭಾನುವಾರ

ಹೆಜ್ಜೆ ಥಿಯೇಟರ್ (ರಿ) ನಿರ್ಮಾಣದಲ್ಲಿ ಮೂಡಿಬರಲಿರುವ ನಗ್ನ 99 ನಾಟಕದ ನಿರ್ದೇಶನದ ಜಬಾಬ್ದಾರಿಯನ್ನು ಸಂವಾದ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಹೇಮಂತ್ ಕುಮಾರ್ ರವರು ಹೊತ್ತಿದ್ದಾರೆ. ಈ ಮೊದಲು ಅವರು ‘ಕರ್ಣಭಾರ’ ನಾಟಕವನ್ನು ನಿರ್ದೇಶಿಸಿ ಪ್ರಸಂಶೆ ಪಡೆದಿದ್ದರು. ಜೂನ್ 02ರ ಭಾನುವಾರ ಸಂಜೆ 7:30ಕ್ಕೆ ಮಲ್ಲೇಶ್ವರಂನ ಸೇವಾಸದನದಲ್ಲಿ ನಗ್ನ 99 ನಾಟಕದ ಮೊದಲ ಪ್ರದರ್ಶನವಿದೆ. ಆಸಕ್ತರು ಟಿಕೆಟ್ ಗಾಗಿ 9535253595 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...