Homeಕರ್ನಾಟಕ‘ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ?’ ಎಂದಿದ್ದ ಡಿಸಿ ವಿರುದ್ಧ ಸಿಎಂಗೆ ದೂರು

‘ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ?’ ಎಂದಿದ್ದ ಡಿಸಿ ವಿರುದ್ಧ ಸಿಎಂಗೆ ದೂರು

- Advertisement -
- Advertisement -

“ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ? ಫೀಸ್‌ ಕಟ್ಟೋಕೆ ಆಗೋದಿಲ್ವಾ? ಸುಮ್ನೆ ಕೂತ್ಕೋಳಯ್ಯ, ಎಷ್ಟು ಮಾತಾಡ್ತೀಯಾ”- ನ್ಯಾಯಕೇಳಲು ಬಂದವರ ಬಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೀಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ದೂರು ನೀಡಲಾಗಿದೆ.

ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ಕೇಳಿ ಪೀಡಿಸಿದರೆ ಜಿಲ್ಲಾ ವ್ಯಾಪ್ತಿಯಲ್ಲಿನ ‘ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ’ಕ್ಕೆ ದೂರು ನೀಡಬಹುದು. ಈ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿಗಳೇ ಅಧಿಕಾರಿಯಾಗಿರುತ್ತಾರೆ. ಪೋಷಕರು ದೂರು ನೀಡಲು ಬಂದಾಗ ಜಿಲ್ಲಾಧಿಕಾರಿ ತಮ್ಮ ಜವಾಬ್ದಾರಿ ಮರೆತು ವರ್ತಿಸಿದ್ದಾರೆ ಎನ್ನಲಾಗಿದೆ.

ಪಾಲಕರು ದೂರನ್ನು ವಿಚಾರಿಸುವ ವೇಳೆ, “ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ, ಫೀಸ್‌ ಕಟ್ಟೋಕೆ ಆಗಲ್ವಾ? ಸುಮ್ನೆ ಕೂತ್ಕೊಳಯ್ಯ ಎಷ್ಟು ಮಾತಾಡ್ತೀಯಾ? ಶುಲ್ಕ ಕಟ್ಟು, ಇಲ್ಲವಾದರೆ ಸರ್ಕಾರಿ ಶಾಲೆಗೆ ಮಗುವನ್ನು ಸೇರಿಸು” ಎಂದು ಗದರಿಸಿರುವುದಾಗಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.

ಶ್ರೀ ವಾಣಿ ಎಜುಕೇಷನ್‌ ಸೆಂಟರ್‌ ವಿರುದ್ಧ ಪ್ರಾಧಿಕಾರಕ್ಕೆ ಜಿ.ರವಿಕುಮಾರ್‌, ಲಕ್ಷ್ಮಿನಾರಾಯಣ ಮತ್ತು ಡಾ.ಅರುಣ್‌ಕುಮಾರ್‌‌ ದೂರು ನೀಡಲು ಬಂದಾಗ ಘಟನೆ ನಡೆದಿದೆ. ಸೆಪ್ಟೆಂಬರ್‌‌ ತಿಂಗಳಲ್ಲಿ ಘಟನೆ ನಡೆದಿದ್ದು, ಮಾನವ ಹಕ್ಕುಗಳ ಆಯೋಗದ ಸದಸ್ಯ ಆರ್‌.ಕೆ.ದತ್ತ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟೀಸ್‌ ಜಾರಿಗೊಳಿಸಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಆಯೋಗವು ಸರ್ಕಾರಕ್ಕೆ ಸೂಚನೆ ನೀಡಿದೆ.

ದೂರು ಈಗ ಮುಖ್ಯಮಂತ್ರಿಯವರಿಗೂ ತಲುಪಿದ್ದು, ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆಯು ಒತ್ತಾಯಿಸಿದೆ.

‘ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ ದಾಖಲಾಗಿದ್ದ ದೂರುಗಳನ್ನು ಪರಿಶೀಲಿಸಲು ಆ.5ರಂದು ಜಿಲ್ಲಾಧಿಕಾರಿ ಸಭೆ ನಡೆಸಿದ್ದರು. ದೂರು ಸಲ್ಲಿಸಿದ್ದ ಪೋಷಕರ ವಿರುದ್ಧ ಜಿಲ್ಲಾಕಾರಿ ಧಮಕಿ ಹಾಕಿದ್ದಾರೆ. ಯಾವ ಡಿಪಾರ್ಟ್‌ಮೆಂಟ್ ನಿಂದು, ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ, ಫೀಸ್ ಕಟ್ಟೋಕೆ ಆಗಲ್ವಾ, ನಿಂಗೆ ಸಂಬಳ ಕೊಡೊದು ಯಾಕೆ, ಸಂಬಳ ಕಟ್ ಮಾಡಿಸ್ತೀನಿ, ಡಾಕ್ಟರ್ ಅಂತೀಯ ಎಷ್ಟು ಸಂಬಳ, ನಿನ್ನ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದೆಲ್ಲಾ ಏಕ ವಚನದಲ್ಲೇ ನಿಂದಿಸಿದ್ದಾರೆ’ ಎಂದು ವೇದಿಕೆಯು ದೂರಿನಲ್ಲಿ ಉಲ್ಲೇಖಿಸಿದೆ.

‘ಸಿಸಿಟಿವಿ ಕ್ಯಾಮರಾದಲ್ಲಿ ಎಲ್ಲವೂ ಸೆರೆಯಾಗಿದ್ದು, ಪರಿಶೀಲನೆ ನಡೆಸಿ ಪೋಷಕರನ್ನು ನಿಂದಿಸಿ ಬೆದರಿಕೆ ಹಾಕಿರುವ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಪ್ರತಿಕ್ರಿಯೆ

ತಮ್ಮ ಮೇಲಿನ ಆರೋಪವನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ‘ಪ್ರತಿನಿತ್ಯ ನೂರಾರು ಜನ ಸಂಪರ್ಕ ಮಾಡುತ್ತಾರೆ. ಯಾವ ಹಂತದಲ್ಲೂ ಯಾರಿಗೂ ಅವಮಾನವಾಗುವಂತೆ ವರ್ತಿಸಿಲ್ಲ. ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಆಗಿದ್ದರೆ ಪರಿಶೀಲಿಸುತ್ತೇವೆ. ಎರಡು ವರ್ಷದಿಂದ ಶುಲ್ಕವನ್ನೇ ಪಾವತಿಸದ ಪೋಷಕರಿಗೆ ಬಾಕಿ ಶುಲ್ಕ ಪಾವತಿಸಿ ಬನ್ನಿ ಎಂದಷ್ಟೇ ಹೇಳಿದ್ದೇನೆ. ಯಾವ ಪೋಷಕರನ್ನೂ ನಿಂದಿಸಿಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...