Homeಮುಖಪುಟಉತ್ತರ ಪ್ರದೇಶ ಚುನಾವಣಾ ಮೈತ್ರಿ: ಸಮಾಜವಾದಿ ಪಾರ್ಟಿ ಜೊತೆ ಎಎಪಿ ಮಾತುಕತೆ

ಉತ್ತರ ಪ್ರದೇಶ ಚುನಾವಣಾ ಮೈತ್ರಿ: ಸಮಾಜವಾದಿ ಪಾರ್ಟಿ ಜೊತೆ ಎಎಪಿ ಮಾತುಕತೆ

- Advertisement -
- Advertisement -

2022ರಲ್ಲಿ ಬರಲಿರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಜೊತೆಗೆ ಸ್ಥಾನಗಳನ್ನು ಹಂಚಿಕೊಳ್ಳುವ ಕುರಿತು ಚರ್ಚೆ ಆರಂಭಿಸಲಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ಹೇಳಿದೆ.

ಲಕ್ನೋದಲ್ಲಿ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾದ ನಂತರ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಈ ಘೋಷಣೆ ಮಾಡಿದ್ದಾರೆ. ಈ ಹಿಂದೆಯೂ ಇಬ್ಬರ ನಡುವೆ ಸಭೆ ನಡೆದಿದ್ದರೂ ಮೈತ್ರಿ ಸಾಧ್ಯತೆಯ ಮಾತು ಸಾಧ್ಯವಾಗಿರಲಿಲ್ಲ.

“ನಮ್ಮ ಮಾತುಕತೆಗಳು ಆರಂಭವಾಗಿವೆ. ಬಿಜೆಪಿಯನ್ನು ಉತ್ತರ ಪ್ರದೇಶದಲ್ಲಿ ಸೋಲಿಸುವುದು ನಮ್ಮ ಪ್ರಥಮ ಆದ್ಯತೆಯಾಗಿದೆ. ಯೋಗಿ ಆದಿತ್ಯನಾಥ ಅವರ ದುರಾಡಳಿತಕ್ಕೆ ಒಳಗಾಗಿರುವ ಉತ್ತರ ಪ್ರದೇಶವನ್ನು ಕಾಪಾಡಬೇಕಾಗಿದೆ. ಅಖಿಲೇಶ್ ಯಾದವ್ ಅವರು ಹಲವು ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸಭೆ ನಡೆದಿದೆ” ಎಂದು ಸಂಜಯ್‌ ಸಿಂಗ್‌ ಹೇಳಿದ್ದಾರೆ.

ಆಮ್‌ಆದ್ಮಿ ಪಾರ್ಟಿಯ ಉತ್ತರ ಪ್ರದೇಶದ ಉಸ್ತುವಾರಿಯಾಗಿರುವ ಸಿಂಗ್‌, “ಬಿಜೆಪಿಯನ್ನು ಸೋಲಿಸುವುದೇ ವಿರೋಧ ಪಕ್ಷಗಳ ಮೊದಲ ಗುರಿಯಾಗಿರಬೇಕು” ಎಂದು ಹೇಳಿದ್ದಾರೆ.

ಆರ್‌ಎಲ್‌ಡಿ ಮತ್ತು ಸಮಾಜವಾದಿ ಪಕ್ಷ ತಮ್ಮ ಸ್ಥಾನಗಳನ್ನು ಹಂಚಿಕೊಳ್ಳುವ ಕೊನೆಯ ಹಂತದ ಮಾತುಕತೆ ನಡೆಸುತ್ತಿರುವ ಹೊತ್ತಿನಲ್ಲಿ ಎಎಪಿಯಿಂದ ಈ ಬೆಳವಣಿಗೆ ಕಂಡುಬಂದಿದೆ.


ಇದನ್ನೂ ಓದಿದೆ: ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ


ಸೋಮವಾರ ಸಿಂಗ್ ಅವರು ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರ 82ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಭೇಟಿ ಮಾಡಿದ್ದರು. ಎಎಪಿ ನಾಯಕ ಮತ್ತು ಅಖಿಲೇಶ್ ನಡುವಿನ ಕೊನೆಯ ಸಾರ್ವಜನಿಕ ಸಭೆ ಜುಲೈನಲ್ಲಿ ನಡೆದಿತ್ತು.

2017ರ ಚುನಾವಣೆಯಲ್ಲಿ ಬಿಜೆಪಿ ಮಿತ್ರಪಕ್ಷವಾಗಿದ್ದ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಜೊತೆಗೆ ಎಸ್‌ಪಿ ಈಗಾಗಲೇ ಮೈತ್ರಿ ಮಾಡಿಕೊಂಡಿದೆ. ಎಸ್‌ಬಿಎಸ್‌ಪಿ ಜೊತೆಗೆ, ಭಾಗಿದರಿ ಸಂಕಲ್ಪ್ ಮೋರ್ಚಾ, ರಾಜ್‌ಭರ್ ನೇತೃತ್ವದ ಸಣ್ಣ ಪಕ್ಷಗಳ ಗುಂಪು, ಎಸ್‌ಪಿ ನೇತೃತ್ವದ ಮೈತ್ರಿಕೂಟದ ಭಾಗವಾಗುತ್ತಿವೆ.

ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನವೆಂಬರ್ 28ರಂದು ಲಕ್ನೋದಲ್ಲಿ ರೋಜ್ಗಾರ್ ಗ್ಯಾರಂಟಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು, ಅದೇ ದಿನ ನಡೆಯಲಿರುವ ಯುಪಿ ಶಿಕ್ಷಕರ ಅರ್ಹತಾ ಪರೀಕ್ಷೆಯಿಂದಾಗಿ ಸ್ಥಳೀಯ ಆಡಳಿತವು ರ್‍ಯಾಲಿಯನ್ನು ಮುಂದೂಡಿದೆ. ಕಳೆದ ತಿಂಗಳು ಕೇಜ್ರಿವಾಲ್ ಅವರು ಅಯೋಧ್ಯೆಗೆ ಭೇಟಿ ನೀಡಿ, ರಾಮ್ ಲಲ್ಲಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಎಎಪಿ ಕಳೆದ ಎರಡು ತಿಂಗಳುಗಳಲ್ಲಿ ನೋಯ್ಡಾ, ಆಗ್ರಾ, ಅಯೋಧ್ಯೆ ಮತ್ತು ಲಕ್ನೋ ಸೇರಿದಂತೆ ಯುಪಿಯ ಹಲವು ಪಟ್ಟಣಗಳಲ್ಲಿ ಸರಣಿ ತಿರಂಗ ಯಾತ್ರೆಗಳನ್ನು ಕೈಗೊಂಡಿದೆ. ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದು, 300 ಯೂನಿಟ್‌ವರೆಗೆ ಗೃಹ ಬಳಕೆ ವಿದ್ಯುತ್‌‌ಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿದೆ.


ಇದನ್ನೂ ಓದಿರಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಶಾದಾಯಕ ಬೆಳವಣಿಗೆ, ಮನುವಾದಿಗಳನ್ನು ಸೋಲಿಸಲು ಎಲ್ಲಾ ವಿರೋದಪಕ್ಶಗಳೂ ಒಂದಾಗಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...