Homeಕರ್ನಾಟಕಟೊಮಟೊ ಟ್ರಾಲ್‌: ‘ಬೆಲೆ ಏರಿಕೆ’ ಕಂಡು ತರಹೇವಾರಿ ಮೀಮ್ಸ್‌ ಸೃಷ್ಟಿ; ನೋಡಿ ನಕ್ಕುಬಿಡಿ

ಟೊಮಟೊ ಟ್ರಾಲ್‌: ‘ಬೆಲೆ ಏರಿಕೆ’ ಕಂಡು ತರಹೇವಾರಿ ಮೀಮ್ಸ್‌ ಸೃಷ್ಟಿ; ನೋಡಿ ನಕ್ಕುಬಿಡಿ

- Advertisement -
- Advertisement -

ಒಂದು ಕೆ.ಜಿ. ಟೊಮಟೊ ಬೆಲೆ 110 ರೂಪಾಯಿ ದಾಟಿದೆ. ಕೆಲವು ಕಡೆ 130 ದಾಟಿದೆ. ಸಾಮಾನ್ಯವಾಗಿ ಯಾವುದೇ ಬೆಲೆ ಏರಿಕೆಯಾದಾಗಲೂ ಸಾಮಾಜಿಕ ಮಾಧ್ಯಮಗಳಲ್ಲಿ ‘ಟ್ರಾಲ್‌’ಗಳಾಗುತ್ತವೆ. ಈಗ ಟೊಮಟೊ ಟ್ರಾಲ್‌‌ಗೆ ಗುರಿಯಾಗಿದ್ದು, ಜನರು ತರಹೇವಾರಿ ಮೀಮ್ಸ್‌‌ ಮಾಡಿದ್ದಾರೆ.

ಟೊಮಟೊ ಬೆಲೆಯು ಪೆಟ್ರೋಲ್‌, ಡೀಸೆಲ್‌‌ ಬೆಲೆಯನ್ನು ಹಿಂದಿಕ್ಕಿದೆ ಎಂಬ ಟ್ರೋಲ್‌ನಿಂದ ಹಿಡಿದು, ನಿತ್ಯದ ಬದುಕಿನಿಂದ ಟೊಮಟೊ ದೂರವಾಗುತ್ತಿದೆ ಎಂಬುವವರೆಗೂ ಟ್ರಾಲ್‌‌ಗಳು ಹಬ್ಬಿವೆ.

ಇಂಡಿಯಾ ಟುಡೇ ವಾಹಿನಿಯು ‘ಟೊಮಟೊ ಲೋನ್‌’ ಎಂಬ ಕಾಮಿಕ್‌ ಸೃಷ್ಟಿಸಿದ್ದು, ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

ಪೆಟ್ರೋಲ್‌, ಡೀಸೆಲ್‌ಗಿಂತ ಟೊಮಟೊ ಬೆಲೆ ಹೆಚ್ಚಾಗಿದೆ ಎಂಬುದನ್ನು ಬಿಂಬಿಸುವ ಹಲವು ಮೀಮ್‌‌ಗಳು ಹರಿದಾಡಿವೆ. ಅದರಲ್ಲಿ ಕೆಲವು ಹೀಗಿವೆ:

ಈ ಹಿಂದೆ ಈರುಳ್ಳಿ ಬೆಲೆ ಏರಿಕೆಯಾದಾಗ ಅರ್ಥಸಚಿವೆ ನಿರ್ಮಲಾ ಸೀತರಾಮನ್‌ ಅವರು, ‘ನಾನು ಈರುಳ್ಳಿ ಬಳಸುವುದಿಲ್ಲ’ ಎಂದಿದ್ದನ್ನು ಈಗ ಮೀಮ್‌ಗೆ ಬಳಸಲಾಗಿದೆ. “ನಾನು ಬಳಸುವುದಿಲ್ಲ ಟೊಮಟೊ, ನನ್ನ ಊಟವನ್ನು ಆರ್ಡರ್‌ ಮಾಡಲಿಕ್ಕಿದೆ ಝೊಮೊಟೊ’ ಎಂದು ಟ್ರಾಲ್‌ ಮಾಡಲಾಗಿದೆ.

ಟೊಮಟೊ ಬೆಲೆ ಗಗನಕ್ಕೇರಿದೆ ಎಂಬುದನ್ನು, ‘ಜ್ಯುವೆಲರಿ’ಗಳಿಗೆ ಹೋಲಿಕೆ ಮಾಡಲಾಗಿದೆ. ‘ಬೆಸ್ಟ್‌ ಪ್ರಪೊಸಲ್‌ ರಿಂಗ್‌’, ‘ಅತ್ಯಂತ ಬೆಲೆಬಾಳುವ ವೆಡ್ಡಿಂಗ್ ರಿಂಗ್‌’ ಎಂದೆಲ್ಲ ಬಿಂಬಿಸಲಾಗಿದೆ.

‘ಧೂಮ್’ ಚಿತ್ರದಲ್ಲಿ ರಿತ್ವಿಕ್‌ ರೋಷನ್‌ ಡೈಮಂಡ್ ಕದಿಯುವುದನ್ನು, ಟೊಮೊಟೊ ಕದಿಯುತ್ತಿರುವಂತೆ ಮೀಮ್‌ ಮಾಡಲಾಗಿದೆ.

ಫೇಸ್‌ಬುಕ್‌ ಬಳಕೆದಾರ, ಸಿನಿಮಾ ವಿಮರ್ಶಕ ಎಲ್‌.ಎಂ.ಸಂತೋಷ್‌ಕುಮಾರ್‌‌ ಅವರು ಸರಣಿಯಾಗಿ ಹಾಸ್ಯ ಚಟಾಕಿ ಹಾರಿಸಿದ್ದಾರೆ.

“ಪ್ರತಿಷ್ಟಿತ ಬಡಾವಣೆಯಮನೆಯೊಂದರ ಮೇಲೆ ಐಟಿ ಇಲಾಖೆ ದಾಳಿ, ಅಕ್ರಮವಾಗಿಕುಂಡಗಳಲ್ಲಿ ಟೊಮೆಟೋ ಬೆಳೆದುಮಾರುತ್ತಿದ್ದವರ ಬಂಧನ….(ಈ ಥರಾನೂ ಇನ್ನು ಮುಂದೆ ಸುದ್ದಿ ಬರಬಹುದು)”

“ಇಷ್ಟು ದಿನ… ಮನೆಯಲ್ಲೇ ಕುಂಡಗಳಲ್ಲಿ ಟೊಮೆಟೋ ಬೆಳೆಯುವುದು ಹೇಗೆ? ಅಂತ ವೀಡಿಯೋ ಕಾಣಿಸ್ತಿದ್ವು. ಇನ್ನು ಮೇಲೆ.. ಕುಂಡಗಳಲ್ಲಿ ಬಿಟ್ಟಿರುವ ಟೊಮೆಟೋ ಅನ್ನುಕಳುವಾಗದಿರುವಂತೆ ನೋಡಿಕೊಳ್ಳುವುದು ಹೇಗೆ? ಅಂತಲೂ ವೀಡಿಯೋಗಳು ಬರಬಹುದು”

“ಏನು ಅಡುಗೆ ಹಬ್ಬಕ್ಕೆ? ಏನಿಲ್ಲಪ್ಪ…. ಒಬ್ಬಟ್ಟು, ಕೋಸಂಬರಿ, ಅನ್ನ, ಸಾರು, ಹಪ್ಪಳ ಇನ್ನೇನು ಸ್ಪೆಷಲ್ಲು? !ಟೊಮ್ಯಾಟೊ ಗೊಜ್ಜು!! ಟೊಮ್ಯಾಟೊ ಗೊಜ್ಜಾ?”

“ಎಲ್ಲ ಅಂಗಡಿಗಳಲ್ಲಿ ಮಾಮೂಲಿ ತಗೊತಾ ಬರ್ತಿರ್ತಾನೆ ಒಬ್ಬ ಪೊಲೀಸು….ತರಕಾರಿ ಅಂಗಡಿ ಬಂದಾಗ ಎಂದಿನಂತೆ….. “ಟೊಮೆಟೋ ಹಾಕ್ಬಿಡಮ್ಮ” ಅಂತಾನೆ. ತರಕಾರಿ ಅಂಗಡಿಯವಳು: ಸ್ವಾಮಿ….. ಬೇಕಿದ್ರೆ ದುಡ್ಡು ಕೇಳಿ… ಕೊಟ್ಬಿಡ್ತೀನಿ.. ಟೊಮೆಟೋ ಕೇಳಿ ನಮ್ಮ‌ಹೊಟ್ಟೆ ಮೇಲೆ ಹೊಡೀಬೇಡಿ!!

– ಹೀಗೆ ಸಂತೋಷ್‌ ಕುಮಾರ್‌ ಎಲ್.ಎಂ. ಜೋಕ್‌ಗಳನ್ನು ಬರೆದಿದ್ದಾರೆ.

ಮೂರು ವರ್ಷಗಳ ಹಿಂದೆ ಬೆಲೆ ಏರಿಕೆಯಾದಾಗ ಮಾಡಿದ ಮೀಮ್‌ಅನ್ನು ‘ಇತಿಹಾಸ ಮರುಕಳಿಸಿತು’ ಎಂದು ಪ್ರಶಾಂತ್‌ ಸಾಗರ ಎಂಬವರು ಹಂಚಿಕೊಂಡಿದ್ದಾರೆ.

ಲಕ್ಷ್ಮಣ್‌ ಎಂಬವರು ಹೀಗೆ ಪೋಸ್ಟ್‌ ಮಾಡಿದ್ದಾರೆ: “ಲೋ ಬ್ಯಾಚುಲರ್ಗಳಾ, ಮನೆಗೆ ಪ್ರತಿದಿನ ಎರಡೆರೆಡು ಕೇಜಿ ಟೊಮ್ಯಾಟೋ ತಗಂಡೋಗ್ರಿ, ನಮ್ಮ ಹುಡುಗನಿಗೆ ಜವಾಬ್ದಾರಿ ಬಂದೈತೆ ಅಂತಾ ತಿಳ್ಕಂಡ್ ನಿಮ್ಗೆ ಮದುವೆ ಮಾಡ್ಬೋದ್”


ಇದನ್ನೂ ಓದಿರಿ: ಗದಗ: ಜಂಟಿ ಕೃಷಿ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ, 3.5 ಕೋಟಿ ಮೌಲ್ಯದ ಚಿನ್ನ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...