Homeಕರ್ನಾಟಕಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ಇಂದು ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ...’

ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ಇಂದು ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’

ಸಂಗೀತ ನಿರ್ದೇಶಕ ಹಂಸಲೇಖ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ನವೆಂಬರ್ 26ರಂದು (ಶುಕ್ರವಾರ) ಬೃಹತ್‌ ಜಾಥಾ ಹಾಗೂ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement -
- Advertisement -

ಸಂಗೀತ ನಿರ್ದೇಶಕ, ನೆಲದ ಕವಿ ಹಂಸಲೇಖ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ನವೆಂಬರ್ 26ರಂದು (ಶುಕ್ರವಾರ) ಬೃಹತ್‌ ಜಾಥಾವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ವತಿಯಿಂದ ಸಂವಿಧಾನ ಸಮರ್ಪಣಾ ದಿನ ಮತ್ತು ಕಾನೂನು ದಿನದ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಭಾರತದ ಸಂವಿಧಾನ ನೀಡಿರುವ ವಾಕ್‌ ಮತ್ತು ಅಭಿವೃಕ್ತಿ ಸ್ವಾತಂತ್ರ್ಯದ ಮೇಲಿನ ಬ್ರಾಹ್ಮಣ್ಯದ ಹಲ್ಲೆಯನ್ನು ಖಂಡಿಸಿ ಹಂಸಲೇಖರ ಸತ್ಯದ ನುಡಿಗಳನ್ನು ಬೆಂಬಲಿಸಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ನವೆಂಬರ್‌‌ 26ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಜಾಥಾ ನಡೆಯಲಿದ್ದು, “ಹಂಸಲೇಖರವರ ಸತ್ಯದ ಮಾತುಗಳನ್ನು ಬೆಂಬಲಿಸುವವರು ರಾಜಧಾನಿಗೆ ಬನ್ನಿ” ಎಂದು ಸಂಘಟಕರು ಕರೆ ನೀಡಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ


ಈ ಕುರಿತು ಮಾತನಾಡಿರುವ ಸಾಹಿತಿ ಎಲ್.ಎನ್‌.ಮುಕುಂದರಾಜು, “ಹಂಸಲೇಖರಂತಹ ಹಿರಿಯ ಕಲಾವಿದ ಕ್ಷಮೆ ಕೇಳಿದ ಮೇಲೂ ನಡೆಯುತ್ತಿರುವ ಮಾತಿನ ದಾಳಿ ಮತ್ತು ಅವರ ಮೇಲೆ ದಾಖಲಾಗುತ್ತಿರುವ ದೂರುಗಳನ್ನು ಗಮನಿಸಿದಾಗ ನಮ್ಮ ದೇಶದಲ್ಲಿ ವ್ಯಕ್ತಿ ಸ್ವಾತಂತ್ರ್ಯದ ಬಹಳ ದೊಡ್ಡ ಅಪಾಯ ಬಂದಿದೆ” ಎಂದಿದ್ದಾರೆ.

ಮುಂದುವರಿದು, “ಬರೀ ವ್ಯಕ್ತಿ ಸ್ವಾತಂತ್ರ್ಯಕ್ಕಷ್ಟೇ ಅಲ್ಲದೆ ನಮ್ಮ ದೇಶದ ಪ್ರಜಾಪ್ರಭುತ್ವಕ್ಕೂ, ಸಂವಿಧಾನಕ್ಕೂ ಅಪಾಯ ಬಂದಿದೆ. ಈ ದೇಶದಲ್ಲಿ ಇನ್ನು ಮುಂದೆ ದಲಿತರು, ಶೂದ್ರರು ಮತ್ತು ಮಹಿಳೆಯರ ಸ್ವಾತಂತ್ರ್ಯ ಇರುವುದಿಲ್ಲ ಅನಿಸುತ್ತಿದೆ. ನಾವು ಎಚ್ಚರಗೊಂಡು ಹೋರಾಟವನ್ನು ಮಾಡಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗವಹಿಸಲಿದ್ದಾರೆ. ಅಂದು ತಮ್ಮ ತಮ್ಮ ಬುತ್ತಿಗಳನ್ನು ತಮ್ಮ ಮನೆಗಳಿಂದ ತೆಗೆದುಕೊಂದು ಬಂದು ಊಟ ಮಾಡಲಿದ್ದಾರೆ. ಅದರಲ್ಲೂ ಬಾಡೂಟವಾದರೆ ಬಹಳ ಚೆನ್ನಾಗಿರುತ್ತದೆ. ಪ್ರತಿಭಟನೆಗೆ ತಾವೆಲ್ಲರೂ ಬರಬೇಕೆಂದು ವಿನಂತಿ ಮಾಡುತ್ತೇನೆ. ಬನ್ನಿ ದೇಶವನ್ನು, ಸಂವಿಧಾನವನ್ನು ಉಳಿಸೋಣ. ಅಂಬೇಡ್ಕರ್‌, ಬುದ್ಧ, ಬಸವ, ಗಾಂಧಿ, ಕುವೆಂಪು ಮುಂತಾದವರ ಆಶಯಗಳನ್ನು ನಮ್ಮ ಮುಂದಿನ ಪೀಳಿಗೆಗೂ ತಲುಪಿಸೋಣ. ಈ ದೇಶದ ಸ್ವಾತಂತ್ರ್ಯವನ್ನು, ಘನತೆಯನ್ನು, ಗೌರವವನ್ನು ಕಾಪಾಡೋಣ” ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

“ಮಳೆ ಬರುವ ಸೂಚನೆ ಇರುವುದರಿಂದ ಎಲ್ಲರೂ ಒಂದೊಂದು ಕೊಡೆ (ಛತ್ರಿ) ತರತಕ್ಕದ್ದು ಮತ್ತು ಅವರವರ ಊಟದ ಬುತ್ತಿಯನ್ನು ಅವರವರೇ ತರಕ್ಕದ್ದು. ಸಾಮೂಹಿಕ ಊಟದ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ಮತ್ತು ಪ್ರತಿರೋಧ ಮಾಡೋಣ ಎಂಬುದು ಹಿರಿಯರ ಸಲಹೆ. ನಾವೆಲ್ಲರೂ ಇವುಗಳನ್ನು ಪಾಲಿಸೋಣ. ನವೆಂಬರ್ 26ರ ರಾಜ್ಯಮಟ್ಟದ ರ್‍ಯಾಲಿಗೆ ಎಲ್ಲಾ ಸಂಘಟನೆಗಳು ಮತ್ತು ಎಲ್ಲಾ ಪ್ರಜ್ಞಾವಂತರು ಸ್ವಯಂಪ್ರೇರಿತರಾಗಿ ಸಹಕರಿಸಿ ಅವರವರ ಸಂಘದ ಹೆಸರಿನಲ್ಲಿ ಪೋಸ್ಟರ್ ಮಾಡಿಸಿ ಹಂಚಿ ಮತ್ತು ಸ್ವಯಂಪ್ರೇರಿತರಾಗಿ ಆಗಮಿಸಿ” ಎಂದು ಕೋರಿದ್ದಾರೆ.


ಇದನ್ನೂ ಓದಿರಿ: ನಿಮ್ಮ ಪ್ರೀತಿ ನನಗೆ ತಲುಪಿದೆ: ಕನ್ನಡಿಗರಿಗೆ ಹಂಸಲೇಖ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...