Homeಮುಖಪುಟಕಾಂಗ್ರೆಸ್‌ಗೆ ಆಘಾತ: ಮೇಘಾಲಯದ 12 ಶಾಸಕರು ಟಿಎಂಸಿಗೆ ಸೇರ್ಪಡೆ

ಕಾಂಗ್ರೆಸ್‌ಗೆ ಆಘಾತ: ಮೇಘಾಲಯದ 12 ಶಾಸಕರು ಟಿಎಂಸಿಗೆ ಸೇರ್ಪಡೆ

- Advertisement -
- Advertisement -

ಬುಧವಾರ ಮೇಘಾಲಯ ಕಾಂಗ್ರೆಸ್‌ಗೆ ಭಾರಿ ಆಘಾತ ಉಂಟಾಗಿದೆ. ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ರಾಜ್ಯದ 17 ಕಾಂಗ್ರೆಸ್ ಶಾಸಕರ ಪೈಕಿ 11 ಶಾಸಕರೊಂದಿಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಮೇಘಾಲಯದ ಶಾಸಕರು ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ವಿಧಾನಸಭೆ ಸ್ಪೀಕರ್ ಮೆಟ್ಬಾ ಲಿಂಗ್ಡೋಹ್ ಅವರಿಗೆ ಪತ್ರವನ್ನು ಸಲ್ಲಿಸಿದ್ದು, ತಮ್ಮ ಸ್ಥಾನಮಾನದ ಬದಲಾವಣೆಯ ಬಗ್ಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಸ ಶಾಸಕರೊಂದಿಗೆ ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್ ಮತ್ತು ಅಶೋಕ್ ತನ್ವಾರ್ ಮತ್ತು ಹಿಂದೆ ಜನತಾ ದಳ (ಯುನೈಟೆಡ್) ಆಗಿದ್ದ ಪವನ್ ವರ್ಮಾ ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾಗಿದ್ದರು. ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್‌ನ ಈ ಯುದ್ಧದಲ್ಲಿ ಸೇರಲು ಬಯಸುವ ಇತರ ಪಕ್ಷಗಳ ರಾಜಕೀಯ ನಾಯಕರಿಗೆ ತಮ್ಮ ಪಕ್ಷಕ್ಕೆ ಸ್ವಾಗತವಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ಮೇಘಾಲಯ ತೃಣಮೂಲ ಕಾಂಗ್ರೆಸ್ ಅನ್ನು ಔಪಚಾರಿಕವಾಗಿ 2012 ರಲ್ಲಿ ರಾಜ್ಯದ 60 ಸ್ಥಾನಗಳಲ್ಲಿ 35 ಸ್ಥಾನಗಳಿಗೆ ಸ್ಪರ್ಧಿಸುವ ಉದ್ದೇಶದಿಂದ ಪ್ರಾರಂಭಿಸಲಾಯಿತು. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ತಂಡದ ಸದಸ್ಯರು 2023 ರ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದು, ಶಿಲ್ಲಾಂಗ್‌ನಲ್ಲಿದ್ದಾರೆ ಎಂದು ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರೊಂದಿಗೆ ಸೌಹಾರ್ದ ಸಂಬಂಧವನ್ನು ಉಳಿಸಿಕೊಂಡಿರುವ ಮಮತಾ ಬ್ಯಾನರ್ಜಿ ಈ ಬಾರಿ ದೆಹಲಿಯಲ್ಲಿದ್ದರು ಅವರನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ಕೇಳಿದಾಗ ಸಿಡಿಮಿಡಿಗೊಂಡಿರುವ ಮಮತಾ, ಸೋನಿಯಾ ಗಾಂಧಿಯವರೊಂದಿಗೆ ಯಾವುದೇ ಅಪಾಯಿಂಟ್‌ಮೆಂಟ್ ಕೇಳಿರಲಿಲ್ಲ, ಏಕೆಂದರೆ ಅವರು ಪಂಜಾಬ್ ಚುನಾವಣೆಯಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ “ನಾವು ಪ್ರತಿ ಬಾರಿ ಸೋನಿಯಾರನ್ನು ಏಕೆ ಭೇಟಿಯಾಗಬೇಕು? ಇದು ಸಾಂವಿಧಾನಿಕವಾಗಿ ಕಡ್ಡಾಯವಾಗಿಲ್ಲ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಇಂಧನ ಬೆಲೆ ಹೆಚ್ಚಳದಿಂದ ಕೇಂದ್ರ ಸಂಗ್ರಹಿಸಿರುವ 4 ಲಕ್ಷ ಕೋಟಿಯನ್ನು ರಾಜ್ಯಗಳಿಗೆ ಹಂಚಬೇಕು: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪುನರ್ವಸತಿ ಕೇಂದ್ರದಲ್ಲಿ ದಲಿತ ಯುವಕ ಸಾವು ಪ್ರಕರಣ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ದಲಿತ ಯುವಕನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಮಂಗಳವಾರ ಇನ್ಸ್‌ಪೆಕ್ಟರ್ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ನಂತರ, ಪುನರ್ವಸತಿ ಕೇಂದ್ರದಲ್ಲಿ ಅವರ...

ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ...

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ...

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ. ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವು, ಇಬ್ಬರು ಯೋಧರು ಹುತಾತ್ಮ

ಛತ್ತೀಸ್‌ಗಢದ ಬಿಜಾಪುರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಆರು ಜನ ನಕ್ಸಲರು ಸಾವನ್ನಪ್ಪಿದ್ದು, ದುರದೃಷ್ಟವಶಾತ್, ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಇಬ್ಬರು ಜವಾನರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ,...

ಏಪ್ರಿಲ್ 2026 ರಿಂದ 2 ಹಂತದ ಡಿಜಿಟಲ್ ಜನಗಣತಿ: ಕೇಂದ್ರ ಸರ್ಕಾರ

2027 ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಮೊದಲ ಹಂತವು ಏಪ್ರಿಲ್ ಮತ್ತು ಸೆಪ್ಟೆಂಬರ್ 2026 ರ ನಡುವೆ ನಿಗದಿಯಾಗಿದೆ. ಎರಡನೇ ಹಂತವು ಫೆಬ್ರವರಿ...

ಬಂಗಾಳಿ ಕಾರ್ಮಿಕರನ್ನು ಒಡಿಶಾ ಪೊಲೀಸರು ಬಲವಂತವಾಗಿ ಹೊರಹಾಕಿದ್ದಾರೆ

ಒಡಿಶಾದ ನಯಾಗಢ ಜಿಲ್ಲೆಯ ಪೊಲೀಸರು ನಾಲ್ಕು ಜನ ಬಂಗಾಳಿ ಮಾತನಾಡುವ ಮುಸ್ಲಿಂ ವ್ಯಾಪಾರಿಗಳನ್ನು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸುವ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳ ಹೊರತಾಗಿಯೂ ಬಲವಂತವಾಗಿ ಹೊರಹಾಕಿದ್ದಾರೆ ಎಂದು ತೃಣಮೂಲ...

‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ...

ಮಹಾರಾಷ್ಟ್ರ| ವರದಕ್ಷಿಣೆಯಾಗಿ ಬೈಕ್‌ ಕೊಡಲಿಲ್ಲವೆಂದು ಪತ್ನಿಗೆ ‘ತಲಾಖ್’ ನೀಡಿದ ಪತಿ

ಭಾರತೀಯ ಕಾನೂನಿನಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದ್ದರೂ, ವರದಕ್ಷಿಣೆಯಾಗಿ ಮೋಟಾರ್ ಸೈಕಲ್ (ಬೈಕ್‌) ಕೊಡದ ಕಾರಣ ತನ್ನ ಪತ್ನಿಗೆ 'ತ್ರಿವಳಿ ತಲಾಖ್' ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ಭಿವಂಡಿಯ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ...

ದೆಹಲಿ ಮಹಾನಗರ ಪಾಲಿಕೆ ಉಪಚುನಾವಣೆ: 7 ವಾರ್ಡ್‌ಗಳಲ್ಲಿ ಬಿಜೆಪಿ, ಮೂರರಲ್ಲಿ ಆಪ್‌ಗೆ ಗೆಲುವು

ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಉಪಚುನಾವಣೆಯ ಮತಗಳ ಎಣಿಕೆ ಬುಧವಾರ (ಡಿಸೆಂಬರ್ 1) ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ) 12 ವಾರ್ಡ್‌ಗಳಲ್ಲಿ ಏಳು ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ....