Homeಮುಖಪುಟಕಾಂಗ್ರೆಸ್‌ಗೆ ಆಘಾತ: ಮೇಘಾಲಯದ 12 ಶಾಸಕರು ಟಿಎಂಸಿಗೆ ಸೇರ್ಪಡೆ

ಕಾಂಗ್ರೆಸ್‌ಗೆ ಆಘಾತ: ಮೇಘಾಲಯದ 12 ಶಾಸಕರು ಟಿಎಂಸಿಗೆ ಸೇರ್ಪಡೆ

- Advertisement -
- Advertisement -

ಬುಧವಾರ ಮೇಘಾಲಯ ಕಾಂಗ್ರೆಸ್‌ಗೆ ಭಾರಿ ಆಘಾತ ಉಂಟಾಗಿದೆ. ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ರಾಜ್ಯದ 17 ಕಾಂಗ್ರೆಸ್ ಶಾಸಕರ ಪೈಕಿ 11 ಶಾಸಕರೊಂದಿಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಮೇಘಾಲಯದ ಶಾಸಕರು ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ವಿಧಾನಸಭೆ ಸ್ಪೀಕರ್ ಮೆಟ್ಬಾ ಲಿಂಗ್ಡೋಹ್ ಅವರಿಗೆ ಪತ್ರವನ್ನು ಸಲ್ಲಿಸಿದ್ದು, ತಮ್ಮ ಸ್ಥಾನಮಾನದ ಬದಲಾವಣೆಯ ಬಗ್ಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಸ ಶಾಸಕರೊಂದಿಗೆ ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್ ಮತ್ತು ಅಶೋಕ್ ತನ್ವಾರ್ ಮತ್ತು ಹಿಂದೆ ಜನತಾ ದಳ (ಯುನೈಟೆಡ್) ಆಗಿದ್ದ ಪವನ್ ವರ್ಮಾ ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾಗಿದ್ದರು. ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್‌ನ ಈ ಯುದ್ಧದಲ್ಲಿ ಸೇರಲು ಬಯಸುವ ಇತರ ಪಕ್ಷಗಳ ರಾಜಕೀಯ ನಾಯಕರಿಗೆ ತಮ್ಮ ಪಕ್ಷಕ್ಕೆ ಸ್ವಾಗತವಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ಮೇಘಾಲಯ ತೃಣಮೂಲ ಕಾಂಗ್ರೆಸ್ ಅನ್ನು ಔಪಚಾರಿಕವಾಗಿ 2012 ರಲ್ಲಿ ರಾಜ್ಯದ 60 ಸ್ಥಾನಗಳಲ್ಲಿ 35 ಸ್ಥಾನಗಳಿಗೆ ಸ್ಪರ್ಧಿಸುವ ಉದ್ದೇಶದಿಂದ ಪ್ರಾರಂಭಿಸಲಾಯಿತು. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ತಂಡದ ಸದಸ್ಯರು 2023 ರ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದು, ಶಿಲ್ಲಾಂಗ್‌ನಲ್ಲಿದ್ದಾರೆ ಎಂದು ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರೊಂದಿಗೆ ಸೌಹಾರ್ದ ಸಂಬಂಧವನ್ನು ಉಳಿಸಿಕೊಂಡಿರುವ ಮಮತಾ ಬ್ಯಾನರ್ಜಿ ಈ ಬಾರಿ ದೆಹಲಿಯಲ್ಲಿದ್ದರು ಅವರನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ಕೇಳಿದಾಗ ಸಿಡಿಮಿಡಿಗೊಂಡಿರುವ ಮಮತಾ, ಸೋನಿಯಾ ಗಾಂಧಿಯವರೊಂದಿಗೆ ಯಾವುದೇ ಅಪಾಯಿಂಟ್‌ಮೆಂಟ್ ಕೇಳಿರಲಿಲ್ಲ, ಏಕೆಂದರೆ ಅವರು ಪಂಜಾಬ್ ಚುನಾವಣೆಯಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ “ನಾವು ಪ್ರತಿ ಬಾರಿ ಸೋನಿಯಾರನ್ನು ಏಕೆ ಭೇಟಿಯಾಗಬೇಕು? ಇದು ಸಾಂವಿಧಾನಿಕವಾಗಿ ಕಡ್ಡಾಯವಾಗಿಲ್ಲ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಇಂಧನ ಬೆಲೆ ಹೆಚ್ಚಳದಿಂದ ಕೇಂದ್ರ ಸಂಗ್ರಹಿಸಿರುವ 4 ಲಕ್ಷ ಕೋಟಿಯನ್ನು ರಾಜ್ಯಗಳಿಗೆ ಹಂಚಬೇಕು: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...