Homeಚಳವಳಿಗೋವಾ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸಂವಾದ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ವೈದ್ಯರ ಪ್ರತಿಭಟನೆ

ಗೋವಾ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸಂವಾದ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ವೈದ್ಯರ ಪ್ರತಿಭಟನೆ

- Advertisement -
- Advertisement -

ಗೋವಾದ ಖಾಸಗಿ ದಂತವೈದ್ಯರ ಗುಂಪೊಂದು ಪಣಜಿಯಲ್ಲಿ ನಡೆದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕೈಗೆ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರವು ಇತ್ತೀಚೆಗೆ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಶುಲ್ಕವನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ವೈದ್ಯರು ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಬಿಜೆಪಿಯ ರಾಜ್ಯ ವೈದ್ಯಕೀಯ ಘಟಕವು ಬುಧವಾರ ಸಂಜೆ ವೈದ್ಯಕೀಯ ವೃತ್ತಿಪರರೊಂದಿಗೆ ಜೆ.ಪಿ. ನಡ್ಡಾ ಅವರ ಸಂವಾದ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ಇಂಡಿಯನ್ ಡೆಂಟಲ್ ಅಸೋಸಿಯೇಷನ್‌(ಐಡಿಎ) ದಂತವೈದ್ಯರು ಪ್ರತಿಭಟನೆ ನಡೆಸಿದ್ದಾರೆ.

ಸಂವಾದದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ , ಬಿಜೆಪಿ ಅಧ್ಯಕ್ಷರ ಮುಂದೆ ಈ ರೀತಿಯ ಪ್ರತಿಭಟನೆ ನಡೆಸಿರುವುದು “ರಾಜಕೀಯ ಪ್ರೇರಿತ” ಎಂದು ಘನಟೆ ಬಳಿಕ ಆರೋಪಿಸಿದ್ದಾರೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ನಡ್ಡಾ ಅವರೊಂದಿಗಿನ ಪ್ರಶ್ನೋತ್ತರ ಅವಧಿಯಲ್ಲಿ ವೈದ್ಯರು, ಗೋವಾ ಸರ್ಕಾರವು ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಶುಲ್ಕವನ್ನು ಹೆಚ್ಚಿಸಿರುವುದನ್ನು ವಿರೋಧಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರತಿಭಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಐಡಿಎ ಸದಸ್ಯ ಡಾ.ಅನಿಲ್ ಡಿಸಿಲ್ವಾ, “ಹೆಚ್ಚಿನ ಮಟ್ಟದಲ್ಲಿ ಬಯೋಮೆಡಿಕಲ್ ತ್ಯಾಜ್ಯವನ್ನು ಉತ್ಪಾದಿಸುವ ವೈದ್ಯರ ಗುಂಪಿಗೆ ದಂತ ವೈದ್ಯರನ್ನು ಸೇರಿಸಿರುವುದು ಸರಿಯಲ್ಲ. ಬಯೋಮೆಡಿಕಲ್ ತ್ಯಾಜ್ಯವನ್ನು ಸಂಗ್ರಹಿಸಲು ದೆಹಲಿಯ ಹೊಸ ಖಾಸಗಿ ಗುತ್ತಿಗೆದಾರರನ್ನು ನೇಮಿಸಲಾಗಿದೆ. ಹೆಚ್ಚಿನ ಪ್ರಮಾಣದ ತ್ಯಾಜ್ಯವನ್ನು ಉತ್ಪಾದಿಸುವ ವರ್ಗದಲ್ಲಿ ದಂತವೈದ್ಯರನ್ನು ಆ ಸಂಸ್ಥೆ ಸೇರಿಸಿದೆ, ಇದರಿಂದಾಗಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಶುಲ್ಕಗಳು ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಪ್ರತಿಭಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಪ್ರಮೋದ್ ಸಾವಂತ್, “ಈ ಹಿಂದೆ ದಂತ ವೈದ್ಯರು ತಮ್ಮನ್ನು ಭೇಟಿ ಮಾಡಿದ್ದು, ಅವರ ಬೇಡಿಕೆ ಪರಿಶೀಲನೆಯಲ್ಲಿದೆ. ಇದು ರಾಜ್ಯ ವಿಷಯವಾಗಿರುವುದರಿಂದ ಇಂತಹ ಸಮಾರಂಭದಲ್ಲಿ ಪ್ರತಿಭಟನೆ ಮಾಡುವ ಅಗತ್ಯವಿರಲಿಲ್ಲ. ಅವರ ಪ್ರಶ್ನೆಗಳಿಗೆ ನಾನು ಸರಿಯಾಗಿ ಉತ್ತರ ನೀಡಿದ್ದೆ’ ಎಂದಿದ್ದಾರೆ.

————————

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...