Homeಮುಖಪುಟಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ಎರಡು ಬ್ಯಾಂಕುಗಳ ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿದ್ದು, ಬ್ಯಾಂಕ್‌ ನೌಕರರ ವಿರೋಧ ವ್ಯಕ್ತವಾಗಿದೆ.

- Advertisement -
- Advertisement -

ಕ್ರಿಪ್ಟೋ ಕರೆನ್ಸಿ ನಿಯಂತ್ರಣ, ಬ್ಯಾಂಕುಗಳ ಖಾಗೀಕರಣ, ಕೃಷಿ ಕಾಯ್ದೆಗಳ ರದ್ದು ಮಸೂಸೆ ಸೇರಿದಂತೆ 26 ಹೊಸ ಮಸೂದೆಗಳನ್ನು ಈ ಬಾರಿಯ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುತ್ತಿದೆ. ಚಳಿಗಾಲದ ಅಧಿವೇಶನವು ನವೆಂಬರ್‌ 29ರಿಂದ ಆರಂಭವಾಗಲಿದೆ.

ಲೋಕಸಭೆಯ ಬುಲೆಟಿನ್‌ನಲ್ಲಿ ಬಹಿರಂಗಪಡಿಸಿದ ಶಾಸಕಾಂಗ ಕಾರ್ಯಸೂಚಿಯ ಪ್ರಕಾರ, ಹಲವು ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ದಿವಾಳಿ ಮತ್ತು ದಿವಾಳಿತನ ಸಂಹಿತೆ 2016ಕ್ಕೆ ಬದಲಾವಣೆಗಳನ್ನು ತರಲು ಸರ್ಕಾರ ನಿರ್ಧರಿಸಿದೆ. ಬ್ಯಾಂಕುಗಳ ಖಾಸಗೀಕರಣಕ್ಕೆ ಬ್ಯಾಂಕ್‌ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ.

1.ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021

ಕಾರ್ಯಸೂಚಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲಕರ ಚೌಕಟ್ಟು ರಚಿಸುವುದು. ಮಸೂದೆಯು ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ. ಆದಾಗ್ಯೂ, ಕ್ರಿಪ್ಟೋಕರೆನ್ಸಿಯ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ನೀಡುವುದು.

2.ದಿವಾಳಿ ಮತ್ತು ದಿವಾಳಿತನ ನೀತಿ (ಎರಡನೇ ತಿದ್ದುಪಡಿ) ಮಸೂದೆ

ಕಾರ್ಯಸೂಚಿ: 2016ರ ದಿವಾಳಿ ಮತ್ತು ದಿವಾಳಿತನ ಕಾಯ್ದೆಯನ್ನು ಬಲಿಷ್ಠಗೊಳಿಸುವುದು ಹಾಗೂ ಸುಗಮಗೊಳಿಸುವುದು.

3.ಬ್ಯಾಂಕಿಂಗ್‌ ಕಾನೂನು (ತಿದ್ದುಪಡಿ) ಮಸೂದೆ 2021

ಕಾರ್ಯಸೂಚಿ: 1970 ಮತ್ತು 1980ರ ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ಉದ್ಯಮಗಳ ವರ್ಗಾವಣೆ) ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ತರುವುದು, ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ 1949ಗೆ ಪ್ರಾಸಂಗಿಕ ತಿದ್ದುಪಡಿಗಳನ್ನು ಜಾರಿಗೆ ತರುವುದು.

4.ಕೃಷಿ ಕಾನೂನುಗಳ ರದ್ದತಿ ಮಸೂದೆ, 2021

ಕಾರ್ಯಸೂಚಿ: ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ, ಕೃಷಿ ಸೇವೆಗಳ ಕಾಯಿದೆ, 2020; ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ, 2020- ಈ ಕಾಯ್ದೆಗಳನ್ನು ರದ್ದುಪಡಿಸುವುದು.


ಇದನ್ನೂ ಓದಿರಿ: ರೈತ ಹೋರಾಟದ ಮುಂದಿನ ಯೋಜನೆ ನ.27 ರಂದು ನಿರ್ಧಾರ: ರಾಕೇಶ್ ಟಿಕಾಯತ್


5.ಮಧ್ಯಸ್ಥಿಕೆ ಮಸೂದೆ, 2021

ಕಾರ್ಯಸೂಚಿ: ಈ ಮಸೂದೆಯು ವ್ಯಾಜ್ಯಪೂರ್ವ ಮಧ್ಯಸ್ಥಿಕೆಯನ್ನು ಪ್ರಸ್ತಾಪಿಸುತ್ತದೆ ಮತ್ತು ಅದೇ ಸಮಯದಲ್ಲಿ ತುರ್ತು ಪರಿಹಾರವನ್ನು ಕೋರಿದರೆ ಸಮರ್ಥ ನ್ಯಾಯಾಧಿಕರಣ ವೇದಿಕೆಗಳು/ನ್ಯಾಯಾಲಯಗಳನ್ನು ಸಂಪರ್ಕಿಸಲು ದಾವೆದಾರರ ಹಿತಾಸಕ್ತಿ ಕಾಪಾಡುತ್ತದೆ.

6.ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಸಾರ್ವತ್ರಿಕ ಪಿಂಚಣಿ ವ್ಯಾಪ್ತಿಯನ್ನು ವಿಸ್ತರಿಸುವ ಮತ್ತು ಪಿಎಫ್ಆರ್‌‌ಡಿಎ ಬಲಪಡಿಸಲು ವಿತ್ತ ಸಚಿವರ 2020 ರ ಬಜೆಟ್ ಘೋಷಿತ ಭರವಸೆಯನ್ನು ಉದ್ದೇಶಿತ ಮಸೂದೆಯು ಪೂರೈಸುತ್ತದೆ. ಪಿಎಫ್ಆರ್ಡಿಎ ಕಾಯಿದೆ ತಿದ್ದುಪಡಿಯೊಂದಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಟ್ರಸ್ಟ್ ನ ಅಧಿಕಾರಗಳು, ಕಾರ್ಯಗಳು ಮತ್ತು ಕರ್ತವ್ಯಗಳು, ಪ್ರಸ್ತುತ ಪಿಎಫ್ಆರ್ಡಿಎ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್) ನಿಯಮಗಳು 2015 ರ ಅಡಿಯಲ್ಲಿ ನಿಗದಿಪಡಿಸಲಾಗಿದ್ದು, ತಿದ್ದುಪಡಿಯ ನಂತರ ಇದು ಚಾರಿಟಬಲ್ ಟ್ರಸ್ಟ್ ಅಥವಾ ಕಂಪನಿಗಳ ಕಾಯಿದೆಯ ಅಡಿಯಲ್ಲಿ ಬರಬಹುದಾಗಿದೆ.

7.ಇಂಧನ ಸಂರಕ್ಷಣೆ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಪ್ಯಾರಿಸ್ ಒಪ್ಪಂದವನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಹಣಕಾಸು, ತಾಂತ್ರಿಕ ಮತ್ತು ಸಾಮರ್ಥ್ಯ ನಿರ್ಮಾಣ ಮಾಡುವುದು.

8.ಚಾರ್ಟರ್ಡ್ ಅಕೌಂಟೆಂಟ್ಸ್, ಕಾಸ್ಟ್ ಅಂಡ್ ವರ್ಕ್ಸ್ ಅಕೌಂಟೆಂಟ್ಸ್ ಮತ್ತು ಕಂಪನಿ ಸೆಕ್ರೆಟರಿಗಳ (ತಿದ್ದುಪಡಿ) ಮಸೂದೆ

ಕಾರ್ಯಸೂಚಿ: ಸಂಸ್ಥೆಗಳ ಶಿಸ್ತಿನ ಕಾರ್ಯವಿಧಾನವನ್ನು ಸುಧಾರಿಸುವುದು ಹಾಗೂ ವೇಗಗೊಳಿಸುವುದು.

9.ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಇತರ ವಿತರಣಾ ವ್ಯವಹಾರಗಳಿಗೆ ಪರವಾನಗಿಯನ್ನು ನೀಡುವುದು, ವಿದ್ಯುತ್ ದಂಡಕ್ಕಾಗಿ ಮೇಲ್ಮನವಿ ನ್ಯಾಯಾಧಿಕರಣವನ್ನು ಬಲಪಡಿಸುವುದು ಇತ್ಯಾದಿ.


ಇದನ್ನೂ ಓದಿರಿ: ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ನಾಳೆ ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’


ಇತರ ಮಸೂದೆಗಳು

10. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟಿಕ್ ಸಬ್ಸ್ಟೆನ್ಸ್ (ತಿದ್ದುಪಡಿ) ಮಸೂದೆ

11. ಕೇಂದ್ರ ಜಾಗೃತ ಆಯೋಗ (ತಿದ್ದುಪಡಿ) ಮಸೂದೆ

12. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ

13. ಕಂಟೋನ್ಮೆಂಟ್ ಮಸೂದೆ

14. ಅಂತರ-ಸೇವೆಗಳ ಸಂಸ್ಥೆಗಳು (ಕಮಾಂಡ್, ನಿಯಂತ್ರಣ ಮತ್ತು ಶಿಸ್ತು) ಮಸೂದೆ

15. ಭಾರತೀಯ ಅಂಟಾರ್ಟಿಕಾ ಮಸೂದೆ

16. ಎಮಿಗ್ರೇಷನ್ ಮಸೂದೆ

17. ಭಾರತೀಯ ಸಮುದ್ರ ಮೀನುಗಾರಿಕೆ ಮಸೂದೆ

18. ರಾಷ್ಟ್ರೀಯ ದಂತ ಆಯೋಗದ ಮಸೂದೆ

19. ರಾಷ್ಟ್ರೀಯ ನರ್ಸಿಂಗ್ ಮಿಡ್‌ವೈಫರಿ ಕಮಿಷನ್ ಬಿಲ್

20. ಮೆಟ್ರೋ ರೈಲು (ನಿರ್ಮಾಣ, ಕಾರ್ಯಾಚರಣೆ ಮತ್ತು ನಿರ್ವಹಣೆ) ಮಸೂದೆ

21. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು (ಸಂಬಳ ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ

22. ರಾಷ್ಟ್ರೀಯ ಸಾರಿಗೆ ವಿಶ್ವವಿದ್ಯಾಲಯದ ಮಸೂದೆ

23. ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆ

24. ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆ

25. ಮಾನವ ಕಳ್ಳಸಾಗಣೆ (ತಡೆಗಟ್ಟುವಿಕೆ, ರಕ್ಷಣೆ ಮತ್ತು ಪುನರ್ವಸತಿ) ಮಸೂದೆ

26. ರಾಷ್ಟ್ರೀಯ ಡೋಪಿಂಗ್ ವಿರೋಧಿ ಮಸೂದೆ.

ಮೋದಿನಾಮಿಕ್ಸ್‌: ಬ್ಯಾಂಕುಗಳ ಖಾಸಗೀಕರಣಕ್ಕೆ ಬ್ಯಾಂಕ್‌ ನೌಕರರ ವಿರೋಧ

ರಾಷ್ಟ್ರೀಯಕೃತ ಬ್ಯಾಂಕುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಲೇ ಇದ್ದು, ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ವಲಯದ ಎರಡು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಬ್ಯಾಂಕ್ ಆಫ್ ಇಂಡಿಯಾ- ಈ ನಾಲ್ಕು ಬ್ಯಾಂಕುಗಳ ಪೈಕಿ ಎರಡು ಬ್ಯಾಂಕುಗಳು ಖಾಸಗೀಕರಣಗೊಳ್ಳಲಿವೆ. ಈ ನಿಟ್ಟಿನಲ್ಲಿ ಉದ್ದೇಶತ ಬ್ಯಾಂಕುಗಳ ನೌಕರರಿಗೆ ಸ್ವಯಂ ನಿವೃತ್ತಿ ಘೋಷಿಸಿದೆ. ಬ್ಯಾಂಕಿಂಗ್ ನೌಕರರ ಸಂಘಟನೆಗಳು ಖಾಸಗೀಕರಣವನ್ನು ವಿರೋಧಿಸಿವೆ.


ಇದನ್ನೂ ಓದಿರಿ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಮೂಲಕ ರೈತ ಹೋರಾಟದ ಅಪಪ್ರಚಾರ: ವರದಿಯಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...