Homeಮುಖಪುಟಬಿಹಾರದಲ್ಲಿ ಜಡ್ಜ್‌ ಕೊಲೆ ಆರೋಪಿಗಳ ಮೇಲೆ ಚಾರ್ಜ್‌ಶೀಟ್ - ಕಾರಣ ಬಹಿರಂಗಪಡಿಸದ ಸಿಬಿಐ!

ಬಿಹಾರದಲ್ಲಿ ಜಡ್ಜ್‌ ಕೊಲೆ ಆರೋಪಿಗಳ ಮೇಲೆ ಚಾರ್ಜ್‌ಶೀಟ್ – ಕಾರಣ ಬಹಿರಂಗಪಡಿಸದ ಸಿಬಿಐ!

- Advertisement -
- Advertisement -

ಜುಲೈ 28 ರಂದು ಜಾರ್ಖಂಡ್ ರಾಜ್ಯದ ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರಿಗೆ ಆಟೋದಲ್ಲಿ ಗುದ್ದಿ ಕೊಲೆಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಅಕ್ಟೋಬರ್ 20 ರಂದು ಚಾರ್ಜ್ ಶೀಟ್‌ ಸಲ್ಲಿಸಿರುವ ಸಿಬಿಐ, ಕೊಲೆಯ ಪ್ರಧಾನ ಆರೋಪಿಯಾದ ರಾಹುಲ್ ಕುಮಾರ್ ಓರ್ವ ವೃತ್ತಿಪರ ಕಳ್ಳನಾಗಿದ್ದಾನೆ. ಆತ ಯಾವಾಗಲೂ ದುರ್ಬಲ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ. ಆತನ ಸಹವರ್ತಿ ಕಳ್ಳ ಲಖನ್ ವರ್ಮಾ ತನ್ನ ಯೋಜನೆಯನ್ನು ಜಾರಿಗೊಳಿಸಲು ಸಮಯಕ್ಕಾಗಿ ಕಾಯುತ್ತಿದ್ದ ಎಂದು ಸಿಬಿಐ ತಿಳಿಸಿದೆ. ಆದರೆ ಆ ಯೋಜನೆ ಏನು ಮತ್ತು ಕೊಲೆಯ ಹಿಂದಿನ ಉದ್ದೇಶವೇನು ಎಂಬುದರ ಕುರಿತು ಸಿಬಿಐ ಏನನ್ನೂ ಹೇಳಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉದ್ದೇಶಪೂರ್ವಕವಾಗಿ ತೀವ್ರ ದೈಹಿಕ ಗಾಯಗಳನ್ನು ಉಂಟು ಮಾಡಿದ್ದಾರೆ. ತೀವ್ರ ದೈಹಿಕ ಹಲ್ಲೆಯಿಂದಾಗಿ ನ್ಯಾಯಾಧೀಶರು ಸಾವನಪ್ಪಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ. ಸಿಬಿಐ ಸ್ಪಷ್ಟವಾಗಿ ವಿಚಾರಣೆ ನಡೆಸುತ್ತಿಲ್ಲ ಎಂದು ಈ ಹಿಂದೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಇಬ್ಬರೂ ಆರೋಪಿಗಳು ಆಟೋವೊಂದನ್ನು ಕದ್ದು ಬಲಿಯಾಪುರ ಕಡೆ ಚಲಾಯಿಸಿದ್ದರು. ಹಿಂದಿನ ನಂಬರ್ ಪ್ಲೇಟ್‌ ಅನ್ನು ಬದಲಿಸಿದ್ದರು ಮತ್ತು ಮುಂದಿನದ್ದನ್ನು ಕಾಣದ ಹಾಗೆ ತಿರುಚಿದ್ದರು. ಕೆಲ ಸಮಯ ಸುಮ್ಮನೆ ಅಡ್ಡಾಡಿ ಸಮಯ ಕಳೆದಿದ್ದರು ಎಂದು ಸಿಬಿಐ ಹೇಳಿದೆ.

ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರು ಬುಧವಾರ ಬೆಳಿಗ್ಗೆ 5 ಗಂಟೆಯ ಸಮಯದಲ್ಲಿ ಜಾಗಿಂಗ್ ಮಾಡುತ್ತಿದ್ದರು. ಅವರ ಮನೆಯಿಂದ ಕೇವಲ ಅರ್ಧ ಕಿ.ಮೀ ಅಂತರದಲ್ಲಿ ಅವರು ರಸ್ತೆ ಬದಿಯಲ್ಲಿ ಜಾಗ್ ಮಾಡುತ್ತಿರುವಾಗಿ ಹಿಂದಿನಿಂದ ಬಂದ ಆಟೋವೊಂದು ಅವರನ್ನೇ ಗುರಿಯಾಗಿಸಿಕೊಂಡು ಗುದ್ದಿದೆ. ಇದರ ಸಿಸಿಟಿವಿ ದೃಶ್ಯಾವಳಿಗಳು ಸಿಕ್ಕಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ನಂತರ ಆಸ್ಪತ್ರೆಗೆ ಸೇರಿಸಿದರೂ ಸಹ ಅವರು ಬದುಕುಳಿಯಲಿಲ್ಲ.

ಧನಬಾದ್ ಪೊಲೀಸರು ಆರಂಭದಲ್ಲಿ ತನಿಖೆ ನಡೆಸಿ ನಂತರ ಸಿಬಿಐಗೆ ಒಪ್ಪಿಸಿದ್ದರು. ಆರೋಪಿಗಳು ಉದ್ದೇಶಪೂರ್ವಕವಾಗಿ ಜಡ್ಜ್‌ ಮೇಲೆ ಆಟೋ ಹರಿಸಿದ್ದಾರೆ. ನಂತರ ನಿಲ್ಲಿಸದೇ ಅದೇ ವೇಗದಲ್ಲಿ ಮುಂದುವರೆದಿದ್ದಾರೆ. ಮುಂದೆ ಒಬ್ಬ ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಆತನಿಗೆ ಗುದ್ದದೆ ಬಲಕ್ಕೆ ಆಟೋ ಚಲಾಯಿಸಿದ್ದಾರೆ. ಅಂದರೆ ಅವರು ಮಾನಸಿಕವಾಗಿ ಸ್ಥಿಮಿತದಲ್ಲಿದ್ದಾರೆ ಮತ್ತು ಬೇಕಂತಲೇ ಈ ಕೃತ್ಯ ಎಸಗಿಸಿದ್ದಾರೆ ಎಂದು ಸಿಬಿಐ ಹೇಳಿದೆ. ಆದರೆ ಯಾವ ಕಾರಣಕ್ಕಾಗಿ ಕೊಂದರು ಎಂಬುದನ್ನು ಬಹಿರಂಗಪಡಿಸಿಲ್ಲ.

ಈ ಮೊದಲು ಜಾಮೀನು ನಿರಾಕರಿಸಿದ ಕಾರಣಕ್ಕೆ ನ್ಯಾಯಾಧೀಶರ ಕೊಲೆಯಾಗಿದೆ ಎಂದು ಶಂಕಿಸಲಾಗಿತ್ತು. ಸುಪ್ರೀಂ ಕೋರ್ಟ್ ಸುಮೋಟೊ ಪ್ರಕರಣ ದಾಖಲಿಸಿತ್ತು.


ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...