Homeಕರ್ನಾಟಕಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

- Advertisement -
- Advertisement -

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ತೆರಳಿದ್ದ ವೇಳೆ, ಕನ್ನಡ ಚಿತ್ರರಂಗದ ಪ್ರತಿನಿಧಿಯಾಗಿ ಸ್ಥಳಕ್ಕೆ ಧಾವಿಸಿದ್ದ ನಟ ಚೇತನ್ ಅಹಿಂಸಾ ಅವರಿಗೆ ಮತೀಯವಾದಿಗಳು ಅಡ್ಡಿಪಡಿಸುವ ಬೆಳವಣಿಗೆ ನಡೆದಿದೆ.

ಹಂಸಲೇಖ ಅವರು ನೀಡಿದ ಹೇಳಿಕೆ ಸಂಬಂಧ ಸೃಷ್ಟಿಯಾಗಿರುವ ವಿವಾದ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ವಿವಾದವನ್ನು ದೊಡ್ಡದು ಮಾಡಿ, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಂಸಲೇಖ ಅವರು ಹಾಜರಾಗಿದ್ದರು. ಕನ್ನಡ ಚಿತ್ರರಂಗದಲ್ಲಿನ ಬೆರಳೆಣಿಯಷ್ಟು ಮಂದಿ ಮಾತ್ರ ಹಂಸಲೇಖರ ಪರ ಹೇಳಿಕೆ ನೀಡಿದ್ದು, ಅದರಲ್ಲಿ ನಟ ಚೇತನ್‌ ಕೂಡ ಒಬ್ಬರಾಗಿದ್ದಾರೆ.

“ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ನನಗೆ ಯಾವ ಅಡಿಯಲ್ಲಿ ಪೋಲಿಸ್‌ ದೂರು ದಾಖಲಾಗಿತ್ತೊ ಅದೇ ಅಡಿಯಲ್ಲಿ ಹಂಸಲೇಖ ಅವರಿಗೂ ಆಗಿದೆ. ಅದೇ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ನಟ ಚೇತನ್‌ ಹೇಳಿದ್ದರು. ಹೀಗಾಗಿ ಚೇತನ್‌ ಅವರು ಸ್ಥಳಕ್ಕೆ ಬರಬಾರದೆಂದು ಚೇತನ್‌ ವಿರೋಧಿಗಳು ಗಲಾಟೆ ಶುರು ಮಾಡಿದರು.

ಸಾಮಾಜಿಕ ನ್ಯಾಯದ ಪರ ಇರುವ ವೇದಿಕೆಗಳಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿರುವ ನಟ ಚೇತನ್‌ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಬ್ರಾಹ್ಮಣ್ಯಕ್ಕೆ ಸಂಬಂಧಿಸಿದಂತೆ ಚೇತನ್‌ ತಾಳಿದ ನಿಲುವುಗಳಿಂದಾಗಿ ಚರ್ಚೆ ಶುರುವಾಗಿತ್ತು. ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಗಳ ಕುರಿತು ಸದಾ ಮಾತನಾಡುವ ನಟ ಚೇತನ್‌, ಪಕ್ಷಾತೀತವಾಗಿ ನಿಲ್ಲುವ ವ್ಯಕ್ತಿ. ಭಿನ್ನ ಅಭಿಪ್ರಾಯಗಳನ್ನು ಗೌರವಿಸುವ ಚೇತನ್‌ ಅವರಿಗೂ ಕೋಮುವಾದಿಗಳಿಗೂ ತಿಕ್ಕಾಟ ಮೊದಲಿನಿಂದಲೂ ನಡೆಯುತ್ತಲೇ ಇದೆ. ಕನ್ನಡ ಚಿತ್ರರಂಗದ ಪ್ರತಿನಿಧಿಯೂ ಆಗಿರುವ ಚೇತನ್‌, ಹಂಸಲೇಖರ ಪರ ದನಿ ಎತ್ತಿದ್ದಾರೆ. ಇಂತಹ ಚೇತನ್‌ ಸ್ಥಳಕ್ಕೆ ಬರಬಾರದೆಂದು ಅಡ್ಡಿಪಡಿಸಲು ಯತ್ನಿಸಲಾಗಿದೆ.

ಅಡ್ಡಿಗಳನ್ನು ದಾಟಿ ಬಸವನಗುಡಿ ಪೊಲೀಸ್ ಠಾಣೆಯ ಬಳಿ ಬಂದು ಮಾತನಾಡಿದ ಚೇತನ್‌, “ಇದು ಮಾಂಸಾಹಾರಿ, ಸಸ್ಯಾಹಾರಿಗಳ ಪ್ರಶ್ನೆ ಅಲ್ಲ. ಸಂವಿಧಾನದ ಅಡಿಪಾಯವಾದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಬೇಕಾಗಿದೆ. ಹಂಸಲೇಖರ ಮಾತು ಇಷ್ಟವಾಗದವರು, ಕ್ಷಮೆ ಕೇಳಿದರೂ ಹಂಸಲೇಖರ ಮೇಲೆ ದೂರು ನೀಡಲಾಗಿದೆ. ಮಾತನಾಡಿದರೆ ಜೈಲಿಗೆ ಹಾಕಿಸಲು ತಮ್ಮ ಅನುಕೂಲಕರ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇದನ್ನು ಒಪ್ಪಲು ಆಗಲ್ಲ. ನಾಳೆ ನವೆಂಬರ್‌ 26ರಂದು ಹಂಸಲೇಖರ ಪರ ಸೇರುತ್ತಿದ್ದೇವೆ. ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಜಾಥಾ ನಡೆಯಲಿದೆ” ಎಂದು ತಿಳಿಸಿದರು.

“ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ರೈತ, ಮಹಿಳಾಪರ ಸಂಘಟನೆಗಳೆಲ್ಲ ಸೇರುತ್ತಿವೆ. ಹಂಸಲೇಖರ ಮೇಲೆ ಆಗುತ್ತಿರುವ ದಾಳಿಯನ್ನು ಯಾರೂ ಸಹಿಸಲು ಆಗಲ್ಲ. ಅವರ ಮಾತನ್ನು ಒಪ್ಪಲಿ, ಒಪ್ಪದಿರಲಿ ಅವರ ಮೇಲಿನ ದಾಳಿಯನ್ನು ಸಹಿಸಲು ಆಗಲ್ಲ. ವಾಕ್ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಬನ್ನಿ. ಜೈ ಕರ್ನಾಟಕ, ಜೈ ಬಸವ, ಜೈ ಭೀಮ್‌” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವಾತಂತ್ರ್ಯ ಏನೆಂದು ಕೆಲವರು ಅರಿತಿಲ್ಲ.

    ವಾಕ್ ಸ್ವಾತಂತ್ರ್ಯ ಇದೇ ಇಂದು ಯಾವ ವ್ಯಕ್ತಿಯ ಅಥವಾ ಸಮುದಾಯದ ಗೌರವ ಕ್ಕೆ ದಕ್ಕೆ ಬರುವಹಾಗೆ, ಕೋಮುವಾದಕ್ಕೆ ದಾರಿ ಮಾಡಿಕೊಡುವಂತೆ ಯಾರಿಗೂ ಅಧಿಕಾರ ಕೊಟ್ಟಿಲ್ಲ

    ಎಲ್ಲ ಮಹಾಕೆಲಸ ಮಾಡಿರೋ ಮಹಾ ವ್ಯಕ್ತಿಗಳ ಬಗ್ಗೆ ಎಲ್ಲರೂ ಒಳ್ಳೇದು ಮಾತಾಡಿ, ಅವರು ಮಾಡಿರೋ ಒಳ್ಳೆ ಕಾರ್ಯಗಳನ್ನು ಜನರರಿಗೆ ತಿಳಿಸಬೇಕು. ಶಾಂತಿ ಇಂದ ನಡೆದು ಕೊಳ್ಳ ಬೇಕು.

    ಯಾವ ಬುದ್ಧಿಜೀವಿಗಳು ತಮ್ಮ ತಂದೆ, ತಾಯಿ, ಗುರು ಹಿರಿಯರು, ಆತ್ಮೀಯರ ಮುಂತಾದ ಇಷ್ಟ ವಸ್ತುಗಳ ಬಗ್ಗೆ ಅವಹೇಳನಾಕಾರಿ ಮಾತು ಕೇಳಲು ಇಷ್ಟ ಪಡುವುದಿಲ್ಲ ಮತ್ತೆ ಸಂವಿಧಾನದಲ್ಲಿ ಈ ರೀತಿ ಪುರಾವೆ ಇಲ್ಲದ ಮಾತುಗಳಿಗೆ ವಾಕ್ ಸ್ವಾತಂತ್ರನು ಕೊಟ್ಟಿಲ್ಲ.

    ಶ್ರೀ ಪೇಜಾವರ ಶ್ರೀಗಳು, ಶ್ರೀ ಅಂಬೇಡಿಕರ್ ಅವರು ಹೇಳಿದಂತೆ ಎಲ್ಲರೂ ಸಮಾನರು ಎಂದು ಸಮಾಜಕ್ಕೆ ತೋರುಸಿದ್ದಾರೆ. ದಲಿತರ ಪರ ನಿಂತು ಅವರಿಗೆ ಬಹಳಷ್ಟು ಒಳ್ಳೆ ಕೆಲಸಗಳು ಮಾಡಿದಾರೆ. ಗಂಗಾನದಿ ಸ್ವಚ್ಛತೆ, ರಾಮ ಮಂದಿರ ನಿರ್ಮಾಣಕ್ಕೆ ಅವರಿಗೆ ಭಾರತ ಸರ್ಕಾರ ಕೊಟ್ಟ ಜವಾಬ್ದಾರಿಯನ್ನು ಸೂಕ್ತ ರೀತಿಯಲ್ಲಿ ನಭಾಯಿಸಿದ್ದಾರೆ. ಯಾರಿಗೂ, ಏನು ಮಾಡದೆ ಭಾರತ ರತ್ನ ಕೊಡುವುದಿಲ್ಲ. ಶ್ರೀಗಳಿಗೆ ಕೊಟ್ಟಿದ್ದಾರೆ…ಅಂತವರ ಬಗ್ಗೆ ಮಾತಾಡಿದರೆ ಖಂಡಿತ ಬೇಸರವಾಗುತ್ತೆ.

    ಚೇತನ್ ಅವರು “ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ.” ಎಂದು ಹೇಳಿದ್ದಾರೆ. ಬಹುತೇಕ ಬೇರೆ ದೇಶದಲ್ಲಿದ್ದ ಅವರಿಗೆ, ಹಿಂದೂಸ್ತಾನದ ಬಗ್ಗೆ ಗೊತ್ತಿಲ್ಲ ಅನ್ನಿಸುತ್ತೆ. ಇಲ್ಲಿ ಎಲ್ಲ ಶಾಂತಿ ಇಂದ ಇರುತ್ತಾರೆ. ನೀವು ಏನಾದ್ರು ಹೇಳಿ ಕೆಣಕಿದರೆನೆ ಕೋಮುವಾದಗಲ್ಲು ಹುಟ್ಟುವುದು. ಶ್ರೀಗಳು ಅದನ್ನೇ ಬೇಡ ಅಂತ ನಮಗೆ ತೋರಿಸಿಕೊಟ್ಟಿದ್ದಾರೆ..ಎಲ್ಲಾರು ಶಾಂತಿ ಕಾಪಾಡಲು ಬದ್ಧವಾಗಿರಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...