Homeಕರ್ನಾಟಕಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

- Advertisement -
- Advertisement -

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ತೆರಳಿದ್ದ ವೇಳೆ, ಕನ್ನಡ ಚಿತ್ರರಂಗದ ಪ್ರತಿನಿಧಿಯಾಗಿ ಸ್ಥಳಕ್ಕೆ ಧಾವಿಸಿದ್ದ ನಟ ಚೇತನ್ ಅಹಿಂಸಾ ಅವರಿಗೆ ಮತೀಯವಾದಿಗಳು ಅಡ್ಡಿಪಡಿಸುವ ಬೆಳವಣಿಗೆ ನಡೆದಿದೆ.

ಹಂಸಲೇಖ ಅವರು ನೀಡಿದ ಹೇಳಿಕೆ ಸಂಬಂಧ ಸೃಷ್ಟಿಯಾಗಿರುವ ವಿವಾದ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ವಿವಾದವನ್ನು ದೊಡ್ಡದು ಮಾಡಿ, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಂಸಲೇಖ ಅವರು ಹಾಜರಾಗಿದ್ದರು. ಕನ್ನಡ ಚಿತ್ರರಂಗದಲ್ಲಿನ ಬೆರಳೆಣಿಯಷ್ಟು ಮಂದಿ ಮಾತ್ರ ಹಂಸಲೇಖರ ಪರ ಹೇಳಿಕೆ ನೀಡಿದ್ದು, ಅದರಲ್ಲಿ ನಟ ಚೇತನ್‌ ಕೂಡ ಒಬ್ಬರಾಗಿದ್ದಾರೆ.

“ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ನನಗೆ ಯಾವ ಅಡಿಯಲ್ಲಿ ಪೋಲಿಸ್‌ ದೂರು ದಾಖಲಾಗಿತ್ತೊ ಅದೇ ಅಡಿಯಲ್ಲಿ ಹಂಸಲೇಖ ಅವರಿಗೂ ಆಗಿದೆ. ಅದೇ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ನಟ ಚೇತನ್‌ ಹೇಳಿದ್ದರು. ಹೀಗಾಗಿ ಚೇತನ್‌ ಅವರು ಸ್ಥಳಕ್ಕೆ ಬರಬಾರದೆಂದು ಚೇತನ್‌ ವಿರೋಧಿಗಳು ಗಲಾಟೆ ಶುರು ಮಾಡಿದರು.

ಸಾಮಾಜಿಕ ನ್ಯಾಯದ ಪರ ಇರುವ ವೇದಿಕೆಗಳಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿರುವ ನಟ ಚೇತನ್‌ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಬ್ರಾಹ್ಮಣ್ಯಕ್ಕೆ ಸಂಬಂಧಿಸಿದಂತೆ ಚೇತನ್‌ ತಾಳಿದ ನಿಲುವುಗಳಿಂದಾಗಿ ಚರ್ಚೆ ಶುರುವಾಗಿತ್ತು. ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಗಳ ಕುರಿತು ಸದಾ ಮಾತನಾಡುವ ನಟ ಚೇತನ್‌, ಪಕ್ಷಾತೀತವಾಗಿ ನಿಲ್ಲುವ ವ್ಯಕ್ತಿ. ಭಿನ್ನ ಅಭಿಪ್ರಾಯಗಳನ್ನು ಗೌರವಿಸುವ ಚೇತನ್‌ ಅವರಿಗೂ ಕೋಮುವಾದಿಗಳಿಗೂ ತಿಕ್ಕಾಟ ಮೊದಲಿನಿಂದಲೂ ನಡೆಯುತ್ತಲೇ ಇದೆ. ಕನ್ನಡ ಚಿತ್ರರಂಗದ ಪ್ರತಿನಿಧಿಯೂ ಆಗಿರುವ ಚೇತನ್‌, ಹಂಸಲೇಖರ ಪರ ದನಿ ಎತ್ತಿದ್ದಾರೆ. ಇಂತಹ ಚೇತನ್‌ ಸ್ಥಳಕ್ಕೆ ಬರಬಾರದೆಂದು ಅಡ್ಡಿಪಡಿಸಲು ಯತ್ನಿಸಲಾಗಿದೆ.

ಅಡ್ಡಿಗಳನ್ನು ದಾಟಿ ಬಸವನಗುಡಿ ಪೊಲೀಸ್ ಠಾಣೆಯ ಬಳಿ ಬಂದು ಮಾತನಾಡಿದ ಚೇತನ್‌, “ಇದು ಮಾಂಸಾಹಾರಿ, ಸಸ್ಯಾಹಾರಿಗಳ ಪ್ರಶ್ನೆ ಅಲ್ಲ. ಸಂವಿಧಾನದ ಅಡಿಪಾಯವಾದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಬೇಕಾಗಿದೆ. ಹಂಸಲೇಖರ ಮಾತು ಇಷ್ಟವಾಗದವರು, ಕ್ಷಮೆ ಕೇಳಿದರೂ ಹಂಸಲೇಖರ ಮೇಲೆ ದೂರು ನೀಡಲಾಗಿದೆ. ಮಾತನಾಡಿದರೆ ಜೈಲಿಗೆ ಹಾಕಿಸಲು ತಮ್ಮ ಅನುಕೂಲಕರ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇದನ್ನು ಒಪ್ಪಲು ಆಗಲ್ಲ. ನಾಳೆ ನವೆಂಬರ್‌ 26ರಂದು ಹಂಸಲೇಖರ ಪರ ಸೇರುತ್ತಿದ್ದೇವೆ. ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಜಾಥಾ ನಡೆಯಲಿದೆ” ಎಂದು ತಿಳಿಸಿದರು.

“ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ರೈತ, ಮಹಿಳಾಪರ ಸಂಘಟನೆಗಳೆಲ್ಲ ಸೇರುತ್ತಿವೆ. ಹಂಸಲೇಖರ ಮೇಲೆ ಆಗುತ್ತಿರುವ ದಾಳಿಯನ್ನು ಯಾರೂ ಸಹಿಸಲು ಆಗಲ್ಲ. ಅವರ ಮಾತನ್ನು ಒಪ್ಪಲಿ, ಒಪ್ಪದಿರಲಿ ಅವರ ಮೇಲಿನ ದಾಳಿಯನ್ನು ಸಹಿಸಲು ಆಗಲ್ಲ. ವಾಕ್ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಬನ್ನಿ. ಜೈ ಕರ್ನಾಟಕ, ಜೈ ಬಸವ, ಜೈ ಭೀಮ್‌” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವಾತಂತ್ರ್ಯ ಏನೆಂದು ಕೆಲವರು ಅರಿತಿಲ್ಲ.

    ವಾಕ್ ಸ್ವಾತಂತ್ರ್ಯ ಇದೇ ಇಂದು ಯಾವ ವ್ಯಕ್ತಿಯ ಅಥವಾ ಸಮುದಾಯದ ಗೌರವ ಕ್ಕೆ ದಕ್ಕೆ ಬರುವಹಾಗೆ, ಕೋಮುವಾದಕ್ಕೆ ದಾರಿ ಮಾಡಿಕೊಡುವಂತೆ ಯಾರಿಗೂ ಅಧಿಕಾರ ಕೊಟ್ಟಿಲ್ಲ

    ಎಲ್ಲ ಮಹಾಕೆಲಸ ಮಾಡಿರೋ ಮಹಾ ವ್ಯಕ್ತಿಗಳ ಬಗ್ಗೆ ಎಲ್ಲರೂ ಒಳ್ಳೇದು ಮಾತಾಡಿ, ಅವರು ಮಾಡಿರೋ ಒಳ್ಳೆ ಕಾರ್ಯಗಳನ್ನು ಜನರರಿಗೆ ತಿಳಿಸಬೇಕು. ಶಾಂತಿ ಇಂದ ನಡೆದು ಕೊಳ್ಳ ಬೇಕು.

    ಯಾವ ಬುದ್ಧಿಜೀವಿಗಳು ತಮ್ಮ ತಂದೆ, ತಾಯಿ, ಗುರು ಹಿರಿಯರು, ಆತ್ಮೀಯರ ಮುಂತಾದ ಇಷ್ಟ ವಸ್ತುಗಳ ಬಗ್ಗೆ ಅವಹೇಳನಾಕಾರಿ ಮಾತು ಕೇಳಲು ಇಷ್ಟ ಪಡುವುದಿಲ್ಲ ಮತ್ತೆ ಸಂವಿಧಾನದಲ್ಲಿ ಈ ರೀತಿ ಪುರಾವೆ ಇಲ್ಲದ ಮಾತುಗಳಿಗೆ ವಾಕ್ ಸ್ವಾತಂತ್ರನು ಕೊಟ್ಟಿಲ್ಲ.

    ಶ್ರೀ ಪೇಜಾವರ ಶ್ರೀಗಳು, ಶ್ರೀ ಅಂಬೇಡಿಕರ್ ಅವರು ಹೇಳಿದಂತೆ ಎಲ್ಲರೂ ಸಮಾನರು ಎಂದು ಸಮಾಜಕ್ಕೆ ತೋರುಸಿದ್ದಾರೆ. ದಲಿತರ ಪರ ನಿಂತು ಅವರಿಗೆ ಬಹಳಷ್ಟು ಒಳ್ಳೆ ಕೆಲಸಗಳು ಮಾಡಿದಾರೆ. ಗಂಗಾನದಿ ಸ್ವಚ್ಛತೆ, ರಾಮ ಮಂದಿರ ನಿರ್ಮಾಣಕ್ಕೆ ಅವರಿಗೆ ಭಾರತ ಸರ್ಕಾರ ಕೊಟ್ಟ ಜವಾಬ್ದಾರಿಯನ್ನು ಸೂಕ್ತ ರೀತಿಯಲ್ಲಿ ನಭಾಯಿಸಿದ್ದಾರೆ. ಯಾರಿಗೂ, ಏನು ಮಾಡದೆ ಭಾರತ ರತ್ನ ಕೊಡುವುದಿಲ್ಲ. ಶ್ರೀಗಳಿಗೆ ಕೊಟ್ಟಿದ್ದಾರೆ…ಅಂತವರ ಬಗ್ಗೆ ಮಾತಾಡಿದರೆ ಖಂಡಿತ ಬೇಸರವಾಗುತ್ತೆ.

    ಚೇತನ್ ಅವರು “ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ.” ಎಂದು ಹೇಳಿದ್ದಾರೆ. ಬಹುತೇಕ ಬೇರೆ ದೇಶದಲ್ಲಿದ್ದ ಅವರಿಗೆ, ಹಿಂದೂಸ್ತಾನದ ಬಗ್ಗೆ ಗೊತ್ತಿಲ್ಲ ಅನ್ನಿಸುತ್ತೆ. ಇಲ್ಲಿ ಎಲ್ಲ ಶಾಂತಿ ಇಂದ ಇರುತ್ತಾರೆ. ನೀವು ಏನಾದ್ರು ಹೇಳಿ ಕೆಣಕಿದರೆನೆ ಕೋಮುವಾದಗಲ್ಲು ಹುಟ್ಟುವುದು. ಶ್ರೀಗಳು ಅದನ್ನೇ ಬೇಡ ಅಂತ ನಮಗೆ ತೋರಿಸಿಕೊಟ್ಟಿದ್ದಾರೆ..ಎಲ್ಲಾರು ಶಾಂತಿ ಕಾಪಾಡಲು ಬದ್ಧವಾಗಿರಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...