Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...