Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...