Homeಕರ್ನಾಟಕಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಕಾಂಗ್ರೆಸ್‌ ನಾಯಕರಾದ ಡಾ.ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ಹಂಸಲೇಖರ ಪರ ಮಾತನಾಡಿದ್ದರು. ಈಗ ಪ್ರಿಯಾಂಕ್‌ ಖರ್ಗೆ ದನಿ ಎತ್ತಿದ್ದಾರೆ.

- Advertisement -
- Advertisement -

‘ದಲಿತರ ಮನೆಗಳಿಗೆ ಬಲಿತರು ಹೋಗುವುದಲ್ಲ. ದಲಿತರನ್ನು ತಮ್ಮ ಮನೆಗಳಿಗೆ ಕರೆಸಿಕೊಳ್ಳಬೇಕು, ದಲಿತರ ಮನೆಗೆ ಭೇಟಿ ನೀಡಿದವರು ದಲಿತರು ಕೊಟ್ಟ ಆಹಾರ ಸೇವಿಸುತ್ತಾರಾ? ಕುರಿ, ಕೋಳಿಯನ್ನು ಸೇವಿಸುತ್ತಾರಾ’ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಉಲ್ಲೇಖಿಸಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಹೇಳಿಕೆ ನೀಡಿದ್ದರು. ವಿರೋಧಗಳು ವ್ಯಕ್ತವಾದಾಗ ಕ್ಷಮೆಯಾಚಿಸಿದ್ದರು. ಆದರೂ ಅವರ ಮೇಲೆ ದಾಳಿಗಳು ಮುಂದುವರಿದ ಬಳಿಕ ರಾಜಕೀಯ ನಾಯಕರು ಹಂಸಲೇಖರ ಪರ ದನಿ ಎತ್ತುತ್ತಿದ್ದು, ಈಗ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆಯವರು, “ಹಂಸಲೇಖ ಅವರು ಹೇಳಿದ್ದರಲ್ಲಿ ತಪ್ಪೇನಿಲ್ಲ. ಕೆಲವು ಮನುವಾದಿಗಳು ಸಂವಿಧಾನದ ವಿರುದ್ಧವಿದ್ದಾರೆ. ಅವರು ವಿರೋಧ ಮಾಡಿಯೇ ಮಾಡುತ್ತಾರೆ. ಎಲ್ಲಿಯವರೆಗೆ ಮನುವಾದಿ ಸಂಸ್ಕೃತಿ ಇರುತ್ತದೋ ಅಲ್ಲಿಯವರೆಗೆ ವಿರೋಧ ಇರುತ್ತದೆ” ಎಂದು ತಿಳಿಸಿದ್ದಾರೆ.

ದಲಿತರ ಮನೆಗಳಿಗೆ ಭೇಟಿ ನೀಡುವ ರಾಜಕೀಯ ನಾಯಕರನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಬಿಜೆಪಿಯವರು ದಲಿತರ ಮನೆಗೆ ಹೋಗಿ ಹೋಟೆಲ್ ನಿಂದ ತರಿಸಿ ತಿನ್ನುತ್ತಾರೆ. ಇವರೇನು ಟೂರಿಸಂ ಪ್ಯಾಕೇಜ್ ಮಾಡಿದ್ದಾರಾ. ಈ ರೀತಿ ನಡೆಯಲು ಅವಕಾಶ ಮಾಡಿಕೊಡಬೇಡಿ ಎಂದು ನಾನು ನಮ್ಮ ಜನರಿಗೂ ಹೇಳಿದ್ದೇನೆ. ಇವರು ದಲಿತರ ಮನೆಗೆ ಹೋಗಿ‌ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು, ದಲಿತರ ಮನೆಗೆ ಹೋದರೂ ವೇಜ್ ಊಟಾನೇ ತರಿಸಿ ತಿನ್ನುವುದು. ಬಿಜೆಪಿಯವರು ದಲಿತರ ಮತ್ತು ಹಿಂದುಳಿದವರ ಪರವಾಗಿ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಕುಲ ಕಸುಬಿನ ಪ್ರಕಾರ ಆಹಾರ ಪದ್ದತಿ ಇರುತ್ತದೆ. ಆದರೆ ಇಂತಹದ್ದೇ ಆಹಾರ ಸೇವಿಸಿ ಎಂದು ಹೇಳಲು ನಾನು ಯಾರು? ಎಷ್ಟು ಜನ ಬೇರೆ ಜನಾಂಗದದವರು ಮಾಂಸಾಹಾರಿ ತಿನ್ನಲ್ಲವೇ? ಕೆಲವು ಜನ ಒಪ್ಪದೆ ಇರಬಹುದು. ನಾನು ಒಪ್ಪದೆ ಇರಬಹುದು, ನೀವು ಒಪ್ಪದೆ ಇರಬಹುದು. ಆದರೆ ಸಂವಿಧಾನಿಕವಾಗಿ ರಾಷ್ಟ್ರದಲ್ಲಿ ಏನು ನಡೆಯುತ್ತಿದೆ ಅದೇ ಮಾಡುತ್ತಿರುವುದಲ್ಲವೆ?” ಇದು ಹೇಗೆ ಅಸಾಂವಿಧಾನಿಕ ಎಂದಿದ್ದಾರೆ.

ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ನವೆಂಬರ್‌ 23ರಂದು ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, “ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ” ‌ಎಂದು ಹೇಳಿಕೆ ನೀಡಿದ್ದರು.


ಇದನ್ನೂ ಓದಿರಿ: ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ನಾಳೆ ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’


ಹಂಸಲೇಖ ಅವರ ವಿರುದ್ಧ ನಡೆಯುತ್ತಿರುವ ವಿಷಾದಕಾರಿ ಬೆಳವಣಿಗೆಗಳನ್ನು ಖಂಡಿಸಿ, ತುಮಕೂರಿನ ‘ದಲಿತ ಅಲ್ಪಸಂಖ್ಯಾತ ಹಿಂದುಳಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.

ಜಿ.ಪರಮೇಶ್ವರ ಅವರು ಮಾತನಾಡಿ, “ಹಂಸಲೇಖ ಅವರು ಯಾರಿಗಾದರೂ ಅವಮಾನ ಮಾಡಬೇಕೆಂದು ಹೇಳಲಿಲ್ಲ. ಯಾವುದೇ ಜಾತಿಯ ವ್ಯವಸ್ಥೆಗೆ ಅವರು ಅವಮಾನ ಮಾಡಬೇಕು ಎಂದು ಹೇಳಲಿಲ್ಲ. ಸಾಂದರ್ಭಿಕವಾಗಿ ಆಡಿದಂತಹ ಮಾತನ್ನು ಜಾತೀಯ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡುವಂತಹದ್ದು ತಪ್ಪು. ಈ ಬೆಳವಣಿಗೆಯನ್ನು ನಾನು ಖಂಡಿಸುತ್ತೇನೆ” ಎಂದಿದ್ದರು.

“ಬಹುಸಂಖ್ಯಾತ ಸಮುದಾಯವನ್ನು ಸಾವಿರಾರು ವರ್ಷಗಳಿಂದ ಶೋಷಣೆ ಮಾಡುತ್ತಿರುವಂತಹ ವರ್ಗ ಇಂದು ಮತ್ತೊಂದು ಬಾರಿ ಅಂತಹದ್ದೇ ಪ್ರಯತ್ನ ಮಾಡುತ್ತಿದೆ ಎಂಬುದನ್ನು ನಾವು ಖಂಡಿಸಬೇಕಾಗಿದೆ. ಜಾತೀಯ ವ್ಯವಸ್ಥೆ ನಾವು ಮಾಡಿಕೊಂಡಿರುವಂತಹದ್ದು, ಅಂದರೆ ಮನುಷ್ಯ ಮಾಡಿಕೊಂಡಿರುವಂತಹದ್ದು. ಮನುಷ್ಯ ಮನುಷ್ಯನನ್ನು ಅಸಮಾನತೆಯಿಂದ ಕಾಣಲಾಗುತ್ತಿದೆ, ಶೋಷಣೆ ಮಾಡಲಾಗುತ್ತಿದೆ. ಇಪತ್ತೊಂದನೆ ಶತಮಾನಕ್ಕೆ ಕಾಲಿಟ್ಟಿದ್ದರೂ ಆ ಶೋಷಣೆ ತಪ್ಪಿಲ್ಲ. ಆ ಶೋಷಣೆಯನ್ನು ತಪ್ಪಿಸುವ ಯಾವುದೇ ಸೂಚನೆಗಳೂ ಕಾಣುತ್ತಿಲ್ಲ” ಎಂದು ವಿಷಾದಿಸಿದ್ದರು.

ಕೆ.ಎನ್‌.ರಾಜಣ್ಣ ಮಾತನಾಡಿ, “ಹಂಸಲೇಖ ಅವರು ಹೇಳಿರುವಂತಹದರಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಜಾತಿಯ ಬಣ್ಣವನ್ನು ಕಟ್ಟಿ, ಈ ಅಸ್ಪೃಶ್ಯತೆಯನ್ನು ಇನ್ನು ಬಹಳಷ್ಟು ವರ್ಷಗಳ ಕಾಲ ಮುಂದುವರಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಮಾತುಗಳನ್ನು ಹಂಸಲೇಖ ಅವರ ವಿರುದ್ಧ ಆಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

“ಅವರು ಯಾವತ್ತೂ ಯಾವುದೇ ಸಮಾಜವಾಗಲೀ, ಯಾವುದೇ ಧರ್ಮದ ವಿರುದ್ಧವಾಗಲೀ ಮಾತನಾಡಿದವರಲ್ಲ. ಅವರು ಆಡಿರುವಂತಹ ಮಾತನ್ನು ಇವರು ತಿರುಚಿ ಅಪವಾದವನ್ನು ತರುವಂತಹ ಉನ್ನಾರವನ್ನು ಈ ಮುಂದುವರಿದ ಸಮಾಜಗಳು ಮಾಡುತ್ತಿರುವುದು ಎಲ್ಲರಿಗೂ ಸ್ಪಷ್ಟವಾಗಿದೆ. ನಾವು ಎಲ್ಲರೂ ಇದನ್ನು ಖಂಡಿಸುತ್ತೇವೆ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ನಾವು ಮಾಡಲು ಹೊರಟಿದ್ದೇವೆ” ಎಂದು ತಿಳಿಸಿದ್ದರು.

ಟಿ.ಬಿ.ಜಯಚಂದ್ರ ಅವರು ಮಾತನಾಡಿ, “ಹಂಸಲೇಖ ಅವರು ಕರ್ನಾಟಕದ ಹೆಮ್ಮೆಯ ಪುತ್ರ. ವಾಸ್ತವಿಕವಾಗಿರುವ, ಮನಸ್ಸಿನಲ್ಲಿರುವ ನೋವನ್ನು ಅವರು ಹೇಳಿದಾಗ ಅವರನ್ನು ಅವಹೇಳನ ಮಾಡುವಂತಹದ್ದು ಸರಿಯಲ್ಲ. ಹಂಸಲೇಖ ಅವರ ಜೊತೆ ನಾವಿದ್ದೇವೆ ಎಂಬುದನ್ನು ತೋರಿಸಲೆಂದು ನಾವಿಲ್ಲಿಗೆ ಬಂದಿದ್ದೇವೆ” ಎಂದು ಸ್ಪಷ್ಟಪಡಿಸಿದ್ದರು.

“ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನಬದ್ಧವಾಗಿ ಅಸ್ಪೃಶ್ಯತೆಯನ್ನು ನಿವಾರಣೆ ಮಾಡಿದರೂ ನಿಜಸ್ಥಿತಿಯಲ್ಲಿ ಅದು ಸಮಾಜದಲ್ಲಿದೆ. ಇದನ್ನು ಸಹಿಸಲು ಆಗುವುದಿಲ್ಲ, ಸಹಿಸಬಾರದು ಎಂಬ ಹಿನ್ನೆಲೆಯಲ್ಲಿ ಹಂಸಲೇಖ ಅವರು ಹೇಳಿರುವಂತಹ ವಿಚಾರಕ್ಕೆ ನಾವು ಸದಾ ಬೆಂಬಲವಾಗಿ ಇರಬೇಕು. ನಿಮ್ಮ ಹೋರಾಟದೊಂದಿಗೆ ನಾವು ಕೂಡ ಇದ್ದೇವೆ ಎಂಬುದನ್ನು ಘಂಟಾಘೋಷವಾಗಿ ಹೇಳಲು ಸಿದ್ಧವಿದ್ದೇವೆ” ಎಂದಿದ್ದರು.


ಇದನ್ನೂ ಓದಿರಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...