Homeಕರ್ನಾಟಕಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಕಾಂಗ್ರೆಸ್‌ ನಾಯಕರಾದ ಡಾ.ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ಹಂಸಲೇಖರ ಪರ ಮಾತನಾಡಿದ್ದರು. ಈಗ ಪ್ರಿಯಾಂಕ್‌ ಖರ್ಗೆ ದನಿ ಎತ್ತಿದ್ದಾರೆ.

- Advertisement -
- Advertisement -

‘ದಲಿತರ ಮನೆಗಳಿಗೆ ಬಲಿತರು ಹೋಗುವುದಲ್ಲ. ದಲಿತರನ್ನು ತಮ್ಮ ಮನೆಗಳಿಗೆ ಕರೆಸಿಕೊಳ್ಳಬೇಕು, ದಲಿತರ ಮನೆಗೆ ಭೇಟಿ ನೀಡಿದವರು ದಲಿತರು ಕೊಟ್ಟ ಆಹಾರ ಸೇವಿಸುತ್ತಾರಾ? ಕುರಿ, ಕೋಳಿಯನ್ನು ಸೇವಿಸುತ್ತಾರಾ’ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಉಲ್ಲೇಖಿಸಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಹೇಳಿಕೆ ನೀಡಿದ್ದರು. ವಿರೋಧಗಳು ವ್ಯಕ್ತವಾದಾಗ ಕ್ಷಮೆಯಾಚಿಸಿದ್ದರು. ಆದರೂ ಅವರ ಮೇಲೆ ದಾಳಿಗಳು ಮುಂದುವರಿದ ಬಳಿಕ ರಾಜಕೀಯ ನಾಯಕರು ಹಂಸಲೇಖರ ಪರ ದನಿ ಎತ್ತುತ್ತಿದ್ದು, ಈಗ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆಯವರು, “ಹಂಸಲೇಖ ಅವರು ಹೇಳಿದ್ದರಲ್ಲಿ ತಪ್ಪೇನಿಲ್ಲ. ಕೆಲವು ಮನುವಾದಿಗಳು ಸಂವಿಧಾನದ ವಿರುದ್ಧವಿದ್ದಾರೆ. ಅವರು ವಿರೋಧ ಮಾಡಿಯೇ ಮಾಡುತ್ತಾರೆ. ಎಲ್ಲಿಯವರೆಗೆ ಮನುವಾದಿ ಸಂಸ್ಕೃತಿ ಇರುತ್ತದೋ ಅಲ್ಲಿಯವರೆಗೆ ವಿರೋಧ ಇರುತ್ತದೆ” ಎಂದು ತಿಳಿಸಿದ್ದಾರೆ.

ದಲಿತರ ಮನೆಗಳಿಗೆ ಭೇಟಿ ನೀಡುವ ರಾಜಕೀಯ ನಾಯಕರನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಬಿಜೆಪಿಯವರು ದಲಿತರ ಮನೆಗೆ ಹೋಗಿ ಹೋಟೆಲ್ ನಿಂದ ತರಿಸಿ ತಿನ್ನುತ್ತಾರೆ. ಇವರೇನು ಟೂರಿಸಂ ಪ್ಯಾಕೇಜ್ ಮಾಡಿದ್ದಾರಾ. ಈ ರೀತಿ ನಡೆಯಲು ಅವಕಾಶ ಮಾಡಿಕೊಡಬೇಡಿ ಎಂದು ನಾನು ನಮ್ಮ ಜನರಿಗೂ ಹೇಳಿದ್ದೇನೆ. ಇವರು ದಲಿತರ ಮನೆಗೆ ಹೋಗಿ‌ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು, ದಲಿತರ ಮನೆಗೆ ಹೋದರೂ ವೇಜ್ ಊಟಾನೇ ತರಿಸಿ ತಿನ್ನುವುದು. ಬಿಜೆಪಿಯವರು ದಲಿತರ ಮತ್ತು ಹಿಂದುಳಿದವರ ಪರವಾಗಿ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಕುಲ ಕಸುಬಿನ ಪ್ರಕಾರ ಆಹಾರ ಪದ್ದತಿ ಇರುತ್ತದೆ. ಆದರೆ ಇಂತಹದ್ದೇ ಆಹಾರ ಸೇವಿಸಿ ಎಂದು ಹೇಳಲು ನಾನು ಯಾರು? ಎಷ್ಟು ಜನ ಬೇರೆ ಜನಾಂಗದದವರು ಮಾಂಸಾಹಾರಿ ತಿನ್ನಲ್ಲವೇ? ಕೆಲವು ಜನ ಒಪ್ಪದೆ ಇರಬಹುದು. ನಾನು ಒಪ್ಪದೆ ಇರಬಹುದು, ನೀವು ಒಪ್ಪದೆ ಇರಬಹುದು. ಆದರೆ ಸಂವಿಧಾನಿಕವಾಗಿ ರಾಷ್ಟ್ರದಲ್ಲಿ ಏನು ನಡೆಯುತ್ತಿದೆ ಅದೇ ಮಾಡುತ್ತಿರುವುದಲ್ಲವೆ?” ಇದು ಹೇಗೆ ಅಸಾಂವಿಧಾನಿಕ ಎಂದಿದ್ದಾರೆ.

ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ನವೆಂಬರ್‌ 23ರಂದು ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, “ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ” ‌ಎಂದು ಹೇಳಿಕೆ ನೀಡಿದ್ದರು.


ಇದನ್ನೂ ಓದಿರಿ: ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ನಾಳೆ ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’


ಹಂಸಲೇಖ ಅವರ ವಿರುದ್ಧ ನಡೆಯುತ್ತಿರುವ ವಿಷಾದಕಾರಿ ಬೆಳವಣಿಗೆಗಳನ್ನು ಖಂಡಿಸಿ, ತುಮಕೂರಿನ ‘ದಲಿತ ಅಲ್ಪಸಂಖ್ಯಾತ ಹಿಂದುಳಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.

ಜಿ.ಪರಮೇಶ್ವರ ಅವರು ಮಾತನಾಡಿ, “ಹಂಸಲೇಖ ಅವರು ಯಾರಿಗಾದರೂ ಅವಮಾನ ಮಾಡಬೇಕೆಂದು ಹೇಳಲಿಲ್ಲ. ಯಾವುದೇ ಜಾತಿಯ ವ್ಯವಸ್ಥೆಗೆ ಅವರು ಅವಮಾನ ಮಾಡಬೇಕು ಎಂದು ಹೇಳಲಿಲ್ಲ. ಸಾಂದರ್ಭಿಕವಾಗಿ ಆಡಿದಂತಹ ಮಾತನ್ನು ಜಾತೀಯ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡುವಂತಹದ್ದು ತಪ್ಪು. ಈ ಬೆಳವಣಿಗೆಯನ್ನು ನಾನು ಖಂಡಿಸುತ್ತೇನೆ” ಎಂದಿದ್ದರು.

“ಬಹುಸಂಖ್ಯಾತ ಸಮುದಾಯವನ್ನು ಸಾವಿರಾರು ವರ್ಷಗಳಿಂದ ಶೋಷಣೆ ಮಾಡುತ್ತಿರುವಂತಹ ವರ್ಗ ಇಂದು ಮತ್ತೊಂದು ಬಾರಿ ಅಂತಹದ್ದೇ ಪ್ರಯತ್ನ ಮಾಡುತ್ತಿದೆ ಎಂಬುದನ್ನು ನಾವು ಖಂಡಿಸಬೇಕಾಗಿದೆ. ಜಾತೀಯ ವ್ಯವಸ್ಥೆ ನಾವು ಮಾಡಿಕೊಂಡಿರುವಂತಹದ್ದು, ಅಂದರೆ ಮನುಷ್ಯ ಮಾಡಿಕೊಂಡಿರುವಂತಹದ್ದು. ಮನುಷ್ಯ ಮನುಷ್ಯನನ್ನು ಅಸಮಾನತೆಯಿಂದ ಕಾಣಲಾಗುತ್ತಿದೆ, ಶೋಷಣೆ ಮಾಡಲಾಗುತ್ತಿದೆ. ಇಪತ್ತೊಂದನೆ ಶತಮಾನಕ್ಕೆ ಕಾಲಿಟ್ಟಿದ್ದರೂ ಆ ಶೋಷಣೆ ತಪ್ಪಿಲ್ಲ. ಆ ಶೋಷಣೆಯನ್ನು ತಪ್ಪಿಸುವ ಯಾವುದೇ ಸೂಚನೆಗಳೂ ಕಾಣುತ್ತಿಲ್ಲ” ಎಂದು ವಿಷಾದಿಸಿದ್ದರು.

ಕೆ.ಎನ್‌.ರಾಜಣ್ಣ ಮಾತನಾಡಿ, “ಹಂಸಲೇಖ ಅವರು ಹೇಳಿರುವಂತಹದರಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಜಾತಿಯ ಬಣ್ಣವನ್ನು ಕಟ್ಟಿ, ಈ ಅಸ್ಪೃಶ್ಯತೆಯನ್ನು ಇನ್ನು ಬಹಳಷ್ಟು ವರ್ಷಗಳ ಕಾಲ ಮುಂದುವರಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಮಾತುಗಳನ್ನು ಹಂಸಲೇಖ ಅವರ ವಿರುದ್ಧ ಆಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

“ಅವರು ಯಾವತ್ತೂ ಯಾವುದೇ ಸಮಾಜವಾಗಲೀ, ಯಾವುದೇ ಧರ್ಮದ ವಿರುದ್ಧವಾಗಲೀ ಮಾತನಾಡಿದವರಲ್ಲ. ಅವರು ಆಡಿರುವಂತಹ ಮಾತನ್ನು ಇವರು ತಿರುಚಿ ಅಪವಾದವನ್ನು ತರುವಂತಹ ಉನ್ನಾರವನ್ನು ಈ ಮುಂದುವರಿದ ಸಮಾಜಗಳು ಮಾಡುತ್ತಿರುವುದು ಎಲ್ಲರಿಗೂ ಸ್ಪಷ್ಟವಾಗಿದೆ. ನಾವು ಎಲ್ಲರೂ ಇದನ್ನು ಖಂಡಿಸುತ್ತೇವೆ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ನಾವು ಮಾಡಲು ಹೊರಟಿದ್ದೇವೆ” ಎಂದು ತಿಳಿಸಿದ್ದರು.

ಟಿ.ಬಿ.ಜಯಚಂದ್ರ ಅವರು ಮಾತನಾಡಿ, “ಹಂಸಲೇಖ ಅವರು ಕರ್ನಾಟಕದ ಹೆಮ್ಮೆಯ ಪುತ್ರ. ವಾಸ್ತವಿಕವಾಗಿರುವ, ಮನಸ್ಸಿನಲ್ಲಿರುವ ನೋವನ್ನು ಅವರು ಹೇಳಿದಾಗ ಅವರನ್ನು ಅವಹೇಳನ ಮಾಡುವಂತಹದ್ದು ಸರಿಯಲ್ಲ. ಹಂಸಲೇಖ ಅವರ ಜೊತೆ ನಾವಿದ್ದೇವೆ ಎಂಬುದನ್ನು ತೋರಿಸಲೆಂದು ನಾವಿಲ್ಲಿಗೆ ಬಂದಿದ್ದೇವೆ” ಎಂದು ಸ್ಪಷ್ಟಪಡಿಸಿದ್ದರು.

“ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನಬದ್ಧವಾಗಿ ಅಸ್ಪೃಶ್ಯತೆಯನ್ನು ನಿವಾರಣೆ ಮಾಡಿದರೂ ನಿಜಸ್ಥಿತಿಯಲ್ಲಿ ಅದು ಸಮಾಜದಲ್ಲಿದೆ. ಇದನ್ನು ಸಹಿಸಲು ಆಗುವುದಿಲ್ಲ, ಸಹಿಸಬಾರದು ಎಂಬ ಹಿನ್ನೆಲೆಯಲ್ಲಿ ಹಂಸಲೇಖ ಅವರು ಹೇಳಿರುವಂತಹ ವಿಚಾರಕ್ಕೆ ನಾವು ಸದಾ ಬೆಂಬಲವಾಗಿ ಇರಬೇಕು. ನಿಮ್ಮ ಹೋರಾಟದೊಂದಿಗೆ ನಾವು ಕೂಡ ಇದ್ದೇವೆ ಎಂಬುದನ್ನು ಘಂಟಾಘೋಷವಾಗಿ ಹೇಳಲು ಸಿದ್ಧವಿದ್ದೇವೆ” ಎಂದಿದ್ದರು.


ಇದನ್ನೂ ಓದಿರಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...