Homeಮುಖಪುಟಎಂಸ್‌ಪಿಯತ್ತ ರೈತರ ಚಿತ್ತ: ದೆಹಲಿ ಗಡಿಗಳತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾಕಾರರ ದಂಡು

ಎಂಸ್‌ಪಿಯತ್ತ ರೈತರ ಚಿತ್ತ: ದೆಹಲಿ ಗಡಿಗಳತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾಕಾರರ ದಂಡು

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಘೋಷಿಸಿದ ನಂತರ ದೆಹಲಿ ಗಡಿಗಳಿಂದ ಜನರು ವಾಪಸಾಗುತ್ತಿಲ್ಲ, ಬದಲಿಗೆ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಗಡಿಗಳತ್ತ ಬಂದು ಸೇರುತ್ತಿದ್ದಾರೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಘೋಷಿಸಿದ ನಂತರ ದೆಹಲಿ ಗಡಿಗಳಿಂದ ರೈತರು ವಾಪಸಾಗುತ್ತಿಲ್ಲ, ಬದಲಿಗೆ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಗಡಿಗಳತ್ತ ಬಂದು ಸೇರುತ್ತಿರುವ ವಿದ್ಯಮಾನ ಜರುಗುತ್ತಿದೆ. ಕಾಯ್ದೆ ವಾಪಸಾತಿಯಿಂದ ರೈತರ ಖುಷಿ ದ್ವಿಗುಣಗೊಂಡಿದ್ದು, ಸಂಭ್ರಮ ಆಚರಿಸಲು ಮತ್ತು ಎಂಎಸ್‌ಪಿ ಕಾಯ್ದೆ ಜಾರಿ ಮಾಡಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ದೆಹಲಿಯ ಸಿಂಘು ಮತ್ತು ಟಿಕ್ರಿ ಗಡಿಗಳತ್ತ ಹೊರಟಿದ್ದಾರೆ.

ನವೆಂಬರ್ 26ಕ್ಕೆ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯ ರೈತರು ಮುಖ್ಯವಾಗಿ ಪಂಜಾಬ್ ಮತ್ತು ಹರಿಯಾಣಗಳಿಂದ ದೆಹಲಿ ಗಡಿಗಳತ್ತ ಬಸ್, ಟ್ರಾಕ್ಟರ್ ಮತ್ತು ರೈಲುಗಳಲ್ಲಿ ಬಂದು ಸೇರುತ್ತಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಮೋದಿ ಘೋಷಿಸಿದ್ದರೂ ರೈತರ ಚಿತ್ತವೀಗ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮೇಲೆ ನೆಟ್ಟಿದೆ. ಚುನಾವಣಾ ಭರವಸೆಯಲ್ಲಿ ಎಂಎಸ್‌ಪಿ ನೀಡುವುದಾಗಿ, ರೈತರ ಆದಾಯ ಡಬಲ್ ಮಾಡುವುದಾಗಿ ಘೋಷಿಸಿದ್ದ ಪ್ರಧಾನಿ ಈಗ ಅದನ್ನು ಜಾರಿಗೊಳಿಸಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ.

ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಸರ್ಕಾರವು ಪ್ರಸ್ತಾಪಿಸಿರುವ “ವಿದ್ಯುತ್ ತಿದ್ದುಪಡಿ ಮಸೂದೆ, 2020/2021” ಕರಡನ್ನು ಹಿಂತೆಗೆದುಕೊಳ್ಳಬೇಕು ಎಂದು ರೈತರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಹಲವಾರು ಇತರ ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಹ ರೈತರು ಒತ್ತಾಯಿಸಿದ್ದಾರೆ.

ಲಖಿಂಪುರ ಖೇರಿ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಟೆನಿ ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದಾರೆ ಮತ್ತು ನಿಮ್ಮ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ.  ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು ಮತ್ತು ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ.  ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು.  ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು ಎಂಬುದು ರೈತರ ಬೇಡಿಕೆಯಾಗಿದೆ.

ಈ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ನವಂಬರ್ 29 ರಂದು ಸಂಸತ್ ಚಲೋ ಕಾರ್ಯಕ್ರಮಕ್ಕೆ ರೈತರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...