Homeಕರ್ನಾಟಕಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ನಾಡು, ನುಡಿ, ಸಂಶೋಧನೆಯ ವಿಷಯದಲ್ಲಿ ತನ್ನದೇ ಆದ ಘನತೆಯನ್ನು ಹೊಂದಿರುವ ಹಂಪಿ ವಿಶ್ವವಿದ್ಯಾನಿಲಯ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದೆ. ವಿವಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತವೇ ಇವೆ. ಈ ನಿಟ್ಟಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

“ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯನವರ ಪತ್ರ:

ಮಾನ್ಯ ಬಸವರಾಜ ಬೊಮ್ಮಾಯಿಯವರೇ,

1991ರಲ್ಲಿ ಹಂಪಿಯಲ್ಲಿರುವ ‘ಕನ್ನಡ ವಿಶ್ವವಿದ್ಯಾಲಯ’ವನ್ನು ವಿಶೇಷ ನಿಯಮಗಳನ್ನು ರೂಪಿಸಿ ಸ್ಥಾಪಿಸಲಾಗಿದೆ. ನಾಡಿನ ಎಲ್ಲ ವಿಶ್ವವಿದ್ಯಾಲಯಗಳು ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಕಲಿಸುವ ಕೆಲಸ ಮಾಡುತ್ತವೆ ಆದರೆ ಹಂಪಿಯಲ್ಲಿರುವ ಈ ವಿಶ್ವ ವಿದ್ಯಾಲಯವನ್ನು “ಜ್ಞಾನ ಸೃಷ್ಟಿಯ” ಕೆಲಸ ಮಾಡುವ ವಿಶಿಷ್ಟ ಉದ್ದೇಶದಿಂದ ಸ್ಥಾಪಿಸಲಾಗಿದೆ. 1991ರಿಂದ ಈ ವಿಶ್ವವಿದ್ಯಾಲಯದಲ್ಲಿ ನಾಡಿನ ಅನೇಕ ಧೀಮಂತ ವಿದ್ವಾಂಸರು ಕೆಲಸ ಮಾಡಿದ್ದಾರೆ. ಹಾಗಾಗಿ ಈ ವಿವಿಯಲ್ಲಿ ಅತ್ಯುತ್ತಮ ಕೆಲಸವೂ ಆಗಿದೆ. ವಿಜ್ಞಾನ, ತಾಂತ್ರಿಕ ಶಿಕ್ಷಣವೂ ಸೇರಿದಂತೆ ಅನೇಕ ವಿಷಯಗಳಿಗೆ ಕನ್ನಡದಲ್ಲಿ ಪಠ್ಯ ಪುಸ್ತಕಗಳನ್ನು ರೂಪಿಸುವ ಕೆಲಸವನ್ನೂ ಈ ವಿವಿ ಮಾಡಿದೆ.

ಇಡೀ ದೇಶದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಯ ಗುಣಮಟ್ಟ ಕುಸಿದು ಹೋಗುತ್ತಿದೆ ಎಂಬ ಗಂಭೀರ ಆರೋಪ ವಿದ್ವತ್ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಅಪವಾದವೆಂಬಂತೆ ಕನ್ನಡ ವಿಶ್ವವಿದ್ಯಾಲಯವು ಮೌಲ್ಯಯುತ ಸಂಶೋಧನಾ ಕೆಲಸಗಳನ್ನು ಮಾಡುತ್ತಿದೆ. ಆದರೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯವೂ ಸೇರಿದಂತೆ ನಾಡಿನ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಗುಣಮಟ್ಟದ ನೇಮಕಾತಿಗಳು ನಡೆಯದ ಕಾರಣದಿಂದ ಉತ್ತಮ ವಿದ್ವಾಂಸರುಗಳು, ಬೋಧಕರು ಲಭ್ಯವಾಗುತ್ತಿಲ್ಲ. ಉನ್ನತ ಶಿಕ್ಷಣವು ತನ್ನ ಗುಣಮಟ್ಟವನ್ನು ಕಳೆದುಕೊಂಡರೆ, ನಾಡಿನ ಸಮಸ್ತ ವಿಭಾಗಗಳೂ ಕುಸಿದು ಬೀಳುತ್ತವೆ. ಉನ್ನತ ಶಿಕ್ಷಣ ಸರಿಯಾಗಿದ್ದರೆ ಮಾತ್ರ ಉತ್ತಮ ಪ್ರಾಥಮಿಕ, ಪ್ರೌಢ ಶಿಕ್ಷಣ ಸಿಗಲು ಸಾಧ್ಯ. ಜ್ಞಾನವಂತ, ಸೂಕ್ಷ್ಮ ಮತ್ತು ಮಾನವೀಯ ಸಂವೇದನೆಯ ಸಮಾಜದ ನಿರ್ಮಾಣದಲ್ಲಿ ಉನ್ನತ ಶಿಕ್ಷಣದ ಪಾತ್ರ ಬಹಳ ದೊಡ್ಡದು.


ಇದನ್ನೂ ಓದಿರಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ


ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಭ್ರಷ್ಟಾಚಾರ, ಕಮಿಷನ್ ದಂಧೆ ಮುಂತಾದ ಕೆಟ್ಟ ಕಾರಣಗಳಿಂದ ಸುದ್ಧಿಯಲ್ಲಿದೆ. ತೀವ್ರವಾದ ಹಗರಣಗಳ ಆರೋಪಗಳು ಈ ವಿಶ್ವವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ. ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದೆ. ಅದರಲ್ಲಿ ಮುಖ್ಯವಾಗಿ;

1.ಇತ್ತೀಚೆಗೆ ವಿವಿಯಲ್ಲಿ ಕೆಲವು ಬೋಧಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪತ್ರಿಕೆಗಳ ಪ್ರಕಾರ ಪ್ರತಿ ಹುದ್ದೆಗೆ 50 ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿ, ಹರಾಜು ಮಾಡಲಾಗುತ್ತಿದೆಯೆಂದು ವರದಿ ಮಾಡಲಾಗಿದೆ. ಹಣ ಕೊಟ್ಟವರಿಗೆ ಪರೀಕ್ಷೆಗೆ ಮುನ್ನವೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿದೆಯೆಂಬ ಗಂಭೀರ ಆರೋಪಗಳಿವೆಯೆಂದು ಪತ್ರಿಕೆ ವರದಿ ಮಾಡಿದೆ. ವಿಶ್ವವಿದ್ಯಾಲಯಗಳು ಹುದ್ದೆಗಳನ್ನು ಹರಾಜಿಗಿಟ್ಟರೆ ಬಡತನದ ಹಿನ್ನೆಲೆಗಳಿಂದ ಬರುವ ಪ್ರತಿಭಾವಂತರು ಆಯ್ಕೆಯಾಗಲು ಸಾಧ್ಯವೆ? ಪ್ರತಿಭಾವಂತರು ವಿವಿ ಗಳಲ್ಲಿ ಇಲ್ಲವಾದರೆ ಯಾವ ದೇಶವೂ ಉದ್ಧಾರವಾಗಲು ಸಾಧ್ಯವೆ?

2.ಕನ್ನಡ ವಿವಿಯು ವಿವಿಧ ಹುದ್ದೆಗಳನ್ನು ತುಂಬಿಸಲು ಹೊರಡಿಸಿರುವ ಅಧಿಸೂಚನೆಯಲ್ಲಿ ಮೀಸಲಾತಿ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಜೊತೆಗೆ ಹಿಂದೆ ನೇಮಕವಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ಪ್ರೊಬೆಷನರಿ ಅವಧಿಯನ್ನು ಘೋಷಿಸಲೂ ಕಮಿಷನ್ ನಿಗದಿಗೊಳಿಸಲಾಗಿದೆ ಮತ್ತು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಆದ್ದರಿಂದ ಕೂಡಲೆ ನೇಮಕಾತಿ ಪ್ರಕ್ರಿಯೆಯನ್ನು ನಿಲ್ಲಿಸಿ ಈ ಕುರಿತು ತನಿಖೆ ನಡೆಸಿ‌ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಬೇಕು. ರಾಜ್ಯದಲ್ಲಿರುವ ಪ್ರತಿಭಾವಂತರ ಪಟ್ಟಿಯನ್ನು ವಿಷಯವಾರು ತಯಾರಿಸಿ ಅವರುಗಳನ್ನು ಯುಜಿಸಿ ನಿಯಮಾವಳಿಗಳಂತೆ ವಿಶ್ವವಿದ್ಯಾಲಯಗಳಿಗೆ ಕರೆತರುವ ಕೆಲಸ ಮಾಡಬೇಕು.

3.ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಬಳ ನೀಡಲು, ಪಿಂಚಣಿ ನಿಗದಿಪಡಿಸಲು, ಪಿಂಚಣಿ ಬಿಡುಗಡೆ ಮಾಡಲೂ ಕಮಿಷನ್ ನಿಗಧಿಗೊಳಿಸಲಾಗಿದೆ, ಕಮಿಷನ್ ನೀಡದೆ ಯಾವ ಕಡತಗಳಿಗೂ ಜೀವ ಬರುವುದಿಲ್ಲವೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರುಗಳು ವಿಶ್ವ ವಿದ್ಯಾಲಯದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.


ಇದನ್ನೂ ಓದಿರಿ: ಅಕಾಲಿಕ ಮಳೆಯಿಂದ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟ, ತಕ್ಷಣ ಪರಿಹಾರ ನೀಡಿ: ಸಿದ್ದರಾಮಯ್ಯ


4.ನಿವೃತ್ತರಾದ ಕೆಲವು ಪ್ರೊಫೆಸರುಗಳ ಪಿಂಚಣಿಯನ್ನು ನಿಗದಿಪಡಿಸದೆ ಏಳೆಂಟು ತಿಂಗಳಿಂದ ಅವರು ಜೀವನ ನಿರ್ವವಹಿಸಲಾರದೆ ಒದ್ದಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.

5.ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳೂ ನೀಡುತ್ತಿದ್ದ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು 2-3 ವರ್ಷಗಳಿಂದ ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ, ಕಲಿಕೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳೂ ಕೇಳಿ ಬಂದಿವೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ.

ವಂದನೆಗಳೊಂದಿಗೆ,
ತಮ್ಮ ವಿಶ್ವಾಸಿ,
ಸಿದ್ದರಾಮಯ್ಯ


ಇದನ್ನೂ ಓದಿರಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...