Homeಕರ್ನಾಟಕಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ

ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ

- Advertisement -
- Advertisement -

ಕನ್ನಡ ಚಲನಚಿತ್ರದ ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಪರವಾಗಿ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ಶುಕ್ರವಾರ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಜಾಥಾ ಪ್ರಾರಂಭವಾಗಿದೆ. ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ಯು ಈ ಜಾಥಾವನ್ನು ಆಯೋಜಿಸಿದ್ದು, ಸಂವಿಧಾನ ಸಮರ್ಪಣಾ ದಿನ ಮತ್ತು ಕಾನೂನು ದಿನದ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಜಾಥಾದಲ್ಲಿ ಹಲವಾರು ಸಾಹಿತಿಗಳು, ಹೋರಾಟಗಾರರು, ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದಾರೆ. ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಹೊರಟ ರ್‍ಯಾಲಿಯು ಫ್ರೀಡಂ ಪಾರ್ಕಿನವರೆಗೆ ಸಾಗಲಿದ್ದು, ಅಲ್ಲಿ ಪ್ರತಿಭಟನಾಕಾರರು ತಮ್ಮೊಂದಿಗೆ ತಂದಿರುವ ಬಾಡೂಟದ ಬುತ್ತಿಯನ್ನು ತೆರೆದು ಊಟ ಮಾಡಲಿದ್ದಾರೆ.

ಬಲಿತವರು ದಲಿತರನ್ನು ತಾವು ಮೇಲೆತ್ತುತ್ತಿದ್ದೇವೆ ಎಂದು ಹೇಳಿ ಅವರ ಮನೆಗೆ ಹೋಗಿ ಊಟ ಮಾಡಿದರೆ ದಲಿತರ ಉದ್ದಾರ ಆಗುವುದಿಲ್ಲ ಎಂಬ ಅರ್ಥದಲ್ಲಿ ಸಾಹಿತಿ ಹಂಸಲೇಖ ಇತ್ತೀಚೆಗೆ ಮೈಸೂರಿನಲ್ಲಿ ಹೇಳಿಕೆ ಕೊಟ್ಟಿದ್ದರು. ಈ ವೇಳೆ ಅವರು ಪೇಜಾವರ ಸ್ವಾಮಿ, ಕುಮಾರಸ್ವಾಮಿ ಸೇರಿದಂತೆ ಹಲವರ ಉದಾಹರಣೆ ನೀಡಿದ್ದರು. ಆದರೆ ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಅವರ ಮಾತಿನ ಕೆಲವೇ ವಾಕ್ಯಗಳನ್ನು ಹೆಕ್ಕಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಹಂಸಲೇಖ ಅವರು ಬಹಿರಂಗವಾಗಿ ಕ್ಷಮೆ ಕೂಡಾ ಕೇಳಿದ್ದರು. ಇಷ್ಟಕ್ಕೆ ಸುಮ್ಮನಿರದ ಬಲಪಂಥೀಯರು ಅವರ ಮೇಲೆ ಪ್ರಕರಣ ಕೂಡಾ ದಾಖಲಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವರ ಮೇಲೆ ಕೆಟ್ಟದಾಗಿ ದಾಳಿ ಮುಂದುವರೆಸಿದ್ದಾರೆ.

ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕನ್ನಡಪರ ಮತ್ತು ಜನಪರ ಸಂಘಟನೆಗಳು ಹಂಸಲೇಖ ಅವರ ಪರವಾಗಿ ನಿಂತಿದೆ. ಇದೀಗ ಬೃಹತ್ ಮಟ್ಟದಲ್ಲಿ ಬೆಂಗಳೂರಿನಲ್ಲಿ ಜಾಥಾ ನಡೆಯುತ್ತಿದೆ. ಪ್ರತಿಭಟನಾಕಾರರು ಬ್ರಾಹ್ಮಣ್ಯದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ಉಳಿವಿನ ಬಗ್ಗೆ, ಅಭಿವ್ಯಕ್ತಿ ಸ್ವಾತಂತ್ಯ್ರದ ಬಗ್ಗೆ ಕೂಡಾ ಘೋಷಣೆಗಳನ್ನು ಮೊಳಗಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...